- ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಎರಡು ದಿನಗಳ ವಿಚಾರ ಸಂಕಿರಣ ಸಮಾರೋಪ - - -
ಕೋಮು ದೌರ್ಜನ್ಯ, ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರಜೆಗಳು ಬದಲಾಗಬೇಕು ಎಂದು ಚಿಂತಕಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಹೇಳಿದರು.
ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜಿನಲ್ಲಿ ಭಾನುವಾರ ಬೇರು-ಚಿಗುರು ಕನ್ನಡ ಸಾಹಿತ್ಯ ಸಂಶೋಧನೆ ವಿಚಾರ ವೇದಿಕೆಯಿಂದ ಕನ್ನಡ ಸಾಹಿತ್ಯ ಮಹಿಳಾ ಸಂವೇದನೆಗಳು ವಿಷಯವಾಗಿ ಏರ್ಪಡಿಸಿದ್ದ ಎರಡು ದಿನಗಳ ವಿಚಾರ ಸಂಕಿರಣದ ಸಮಾರೋಪದಲ್ಲಿ ಅವರು ಮಾತನಾಡಿದರು.ಮನುಷ್ಯ ಮಾಡುವ ತಪ್ಪುಗಳೇ ಸಾಹಿತ್ಯ, ಕಥೆಯಾಗುತ್ತವೆ. ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು, ಬಂಡೇಳುವುದು, ನ್ಯಾಯಸಮ್ಮತ ಆಗಿರುವುದನ್ನು ಪಡೆಯುವುದೇ ಬಂಡಾಯವಾಗಿದೆ. ಅದು ಎಂದಿಗೂ ಶಾಂತಿಯನ್ನು ಕಲಿಸುತ್ತದೆ. ಗ್ರಂಥಾಲಯಗಳು ಜ್ಞಾನ ತುಂಬುತ್ತವೆ. ಸಮಾಜವು ಜ್ಞಾನಾರ್ಜನೆಗೆ ಹೋಗುತ್ತಿರುವುದು ಬಂಡಾಯದ ಕೊಡುಗೆಯಾಗಿದೆ. ಬಂಡಾಯವು ಮನುಷ್ಯನನ್ನು ಮನುಷ್ಯನನ್ನಾಗಿ ನೋಡುವಂತೆ ಮಾಡುತ್ತದೆ ಎಂದು ಅಭಿಪ್ರಾಯಪಟ್ಟರು.
ಹಲವಾರು ವರ್ಷಗಳಿಂದಲೂ ಅನ್ಯಾಯ, ಅತ್ಯಾಚಾರ ಎಲ್ಲವನ್ನೂ ದೇವರ ಹೆಸರಿನಲ್ಲಿ ನಾವು ತೆಗೆದುಕೊಂಡಿದ್ದೇವೆ. ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸುಭಿಕ್ಷ, ಸುಂದರ ನಾಡನ್ನು ಕಟ್ಟಲು ಸಾಧ್ಯವಾಗುತ್ತದೆ. ಕಲೆ, ಸಾಹಿತ್ಯದಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
- - -
ದಾವಣಗೆರೆ ಎ.ವಿ. ಕಮಲಮ್ಮ ಕಾಲೇಜಿನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಮಹಿಳಾ ಸಂವೇದನೆಗಳು ವಿಷಯವಾಗಿ ಏರ್ಪಡಿಸಿದ್ದ ವಿಚಾರ ಸಂಕಿರಣ ಸಮಾರೋಪದಲ್ಲಿ ಲೇಖಕಿ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಮಾತನಾಡಿದರು.