ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಅವರು ನಗರದ ಬಿವಿವಿ ಸಂಘದ ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ನಡೆದ 2024-25ನೇ ಸಾಲಿನ ಪಾಲಕರ ಸಭೆಯಲ್ಲಿ ಮಾತನಾಡಿ, ಮಹಾವಿದ್ಯಾಲಯದ ಇತಿಹಾಸ ಹಾಗೂ ಬೆಳೆದು ಬಂದ ದಾರಿಯ ಕುರಿತಾಗಿ ಮಾತನಾಡಿದರು. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಬರೀ ಶಿಕ್ಷಕರಷ್ಟೇ ಶ್ರಮಿಸದೆ ಪಾಲಕರೂ ಪರಿಶ್ರಮ ಪಡಬೇಕೆಂದು ಹೇಳಿದರು.
ಸಭೆಯ ಅಧ್ಯಕ್ಷತೆಯನ್ನು ಬಸವೇಶ್ವರ ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎನ್.ಎಚ್.ಬೇವಿನಹಳ್ಳಿ ಮಾತನಾಡಿ, ಮಕ್ಕಳಿಗೆ ಮೌಲ್ಯಗಳನ್ನು ಕಲಿಸಿ ಎಂದು ಹೇಳುತ್ತಾ, ಮೊಬೈಲ್ ಪೋನ್ ಬಳಕೆಯ ಕುರಿತಾಗಿ ಕಳವಳ ವ್ಯಕ್ತಪಡಿಸಿದರು. ಹಾಗೂ ವಿಜ್ಞಾನ ಕೋರ್ಸ್ ಮುಗಿದ ಮೇಲೆ ವೃತ್ತಿಪರ ಕೋರ್ಸ್ಗಳ ಬಗ್ಗೆ ವಿವರಿಸಿದರು. ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಪಾಲಕರ ಕರ್ತವ್ಯಗಳ ಕುರಿತು ಹೇಳಿದರು,ಎ.ಡಿ.ಮೋಮಿನ್ ಅವರು ವಂದಿಸಿದರು. ಐ.ಎಸ್.ಶಂಕಿನಮಠ ಹಾಗೂ ಬಿ.ಎಮ್. ಸೊನಕನಾಳ ನಿರೂಪಿಸಿದರು. ಪಾಲಕರ ಸಂವಾದ ಕಾರ್ಯಕ್ರಮ ಸಹ ನಡೆಯಿತು.