ರಾಜ್ಯಪಾಲರ ಬದಲು ಸಿಎಂ ಕುಲಾಧಿಪತಿ ನಿರ್ಧಾರ ಸಲ್ಲ

KannadaprabhaNewsNetwork |  
Published : Dec 01, 2024, 01:32 AM IST
ಚಿತ್ರ 30ಬಿಡಿಆರ್2ವಿಶ್ವ ವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗೆ ನೀಡುತ್ತಿರುವ ಸರ್ಕಾರದ ನಡೆ ಖಂಡಿಸಿ ಬೀದರ್‌ನಲ್ಲಿ ಎಬಿವಿಪಿಯಿಂದ ಶನಿವಾರ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆ ಖಂಡಿಸಿ ನಗರದಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಬೀದರ್

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯನ್ನು ರಾಜ್ಯಪಾಲರ ಬದಲು ಮುಖ್ಯಮಂತ್ರಿಗಳಿಗೆ ನೀಡುತ್ತಿರುವ ಸರ್ಕಾರದ ನಡೆ ಖಂಡಿಸಿ ನಗರದಲ್ಲಿ ಎಬಿವಿಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಈ ಕುರಿತು ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿ, ವಿಶ್ವವಿದ್ಯಾಲಯಗಳು ಶಿಕ್ಷಣದ ಭಾಗವಾಗಬೇಕು ಹೊರತು ರಾಜಕಾರಣದ ಕೇಂದ್ರವಾಗಬಾರದು ಎಂಬ ಉದ್ದೇಶದಿಂದ ಸಾಂವಿಧಾನಿಕ ಹುದ್ದೆಯಾದ ರಾಜ್ಯಪಾಲರಿಗೆ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯನ್ನು ನೀಡಲಾಗಿದೆ. ಆದರೆ ರಾಜ್ಯ ಸರ್ಕಾರ ನ. 27ರಂದು ನಡೆದ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಅಧಿಕಾರವನ್ನು ರಾಜ್ಯಪಾಲರಿಂದ ಮುಖ್ಯಮಂತ್ರಿಗಳಿಗೆ ನೀಡುವ ನಿರ್ಧಾರವನ್ನು ಸಂಪುಟ ಮಾಡಿದೆ. ಇದರಿಂದ ವಿಶ್ವವಿದ್ಯಾಲಯಗಳು ರಾಜಕೀಯ ಅಖಾಡವಾಗಿ ಪರಿವರ್ತನೆಯಾಗುವ ಎಲ್ಲ ಲಕ್ಷಣಗಳು ಕಂಡು ಬರುತ್ತಿವೆ. ಹೀಗಾಗಿ ಈ ನಡೆಯನ್ನು ಸರ್ಕಾರ ಕೂಡಲೇ ಕೈಬಿಟ್ಟು ಮೊದಲಿನಂತೆ ರಾಜ್ಯಪಾಲರು ಕುಲಾಧಿಪತಿ ಹುದ್ದೆಯಲ್ಲಿ ಇರುವಂತೆ ಎಬಿವಿಪಿ ನಗರ ಕಾರ್ಯದರ್ಶಿಗಳಾದ ಆನಂದ ಅಮನಾಬಾದೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಎಬಿವಿಪಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೇಮಂತ್‌ ಮಾತನಾಡಿದರು. ಪವನ ಕುಂಬಾರ, ನಾಗರಾಜ, ಪವನ ಪಾಂಚಾಳ, ಲಿಂಗದೇವ ಗುತ್ತಿ , ಅತೀಶ, ಚಾಂದಪಾಷ, ಪ್ರಾರ್ಥನಾ, ಮಮತಾ, ಅಂಬಿಕಾ, ಸೀತಾ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಕಲ್ಯಾಣ ಕರ್ನಾಟಕ ವೃಂದ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ
ಸಂಸ್ಕೃತಿಯ ಪ್ರತೀಕ ಶಾರದ ವಿದ್ಯಾಸಂಸ್ಥೆ