ಯುವಜನತೆಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಿ

KannadaprabhaNewsNetwork |  
Published : May 25, 2025, 01:36 AM IST
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ನಡೆದ ಸರ್ಕಾರಿ ಕಾಲೇಜಿನ ಎನ್‌ಎಸ್‌ಎಸ್‌ ಶಿಬಿರದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಸಮಾಜದಲ್ಲಿ ಭ್ರಷ್ಟಾಚಾರವನ್ನು ಹೋಗಲಾಡಿಸಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಮೂಡಿಸಲು ಯುವಸಮುದಾಯ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಸಂಪನ್ಮೂಲ ವ್ಯಕ್ತಿ ವೆಂಕಟೇಶ್ ಕೊನಘಟ್ಟ ಹೇಳಿದರು.

ದೊಡ್ಡಬಳ್ಳಾಪುರ: ಸಮಾಜದಲ್ಲಿ ಭ್ರಷ್ಟಾಚಾರವನ್ನು ಹೋಗಲಾಡಿಸಿ ಪಾರದರ್ಶಕತೆ ಹಾಗೂ ಹೊಣೆಗಾರಿಕೆಯನ್ನು ಮೂಡಿಸಲು ಯುವಸಮುದಾಯ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕಿದೆ ಎಂದು ಸಂಪನ್ಮೂಲ ವ್ಯಕ್ತಿ ವೆಂಕಟೇಶ್ ಕೊನಘಟ್ಟ ಹೇಳಿದರು.

ತಾಲೂಕಿನ ತೂಬಗೆರೆಯಲ್ಲಿ ನಡೆದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್‌ ವಿಶೇಷ ಶಿಬಿರದ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಗರಿಕರ ಹಕ್ಕುಗಳು ಪರಿಣಾಮವಾಗಿ ಉಳಿಯಲು ಕಾನೂನು ಶಕ್ತಿ ನೀಡುತ್ತದೆ. ಕೇವಲ ಉದ್ಯೋಗಕ್ಕಾಗಿ ಉನ್ನತ ಶಿಕ್ಷಣ ಎನ್ನುವಂತಹ ಕಾಲಮಾನದಲ್ಲಿ ಪ್ರತಿಯೊಬ್ಬ ವ್ಯಕ್ತಿಯು ಸಮಾಜದಲ್ಲಿ ಸುಸ್ಥಿರವಾಗಿ ನಿಲ್ಲಲು ಸ್ವ ಜಾಗೃತಿ ಬಹಳ ಮುಖ್ಯವಾಗಿದೆ. ನಮ್ಮ ಬೆರಳ ತುದಿಯಲ್ಲಿ ಜಗತ್ತನ್ನು ಅರಿಯುವ ಸಂದರ್ಭದಲ್ಲಿ ನಾವಿದ್ದೇವೆ. ಈ ಮಹತ್ವವನ್ನು ಪ್ರತಿ ಯುವಕರೂ ಅರಿಯಬೇಕಿದೆ. ನಮ್ಮ ಯುವಕರು ಯುವಸಮದಾಯ ಅನಗತ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಮಯ ವ್ಯರ್ಥ ಮಾಡದೆ ತಮ್ಮ ಬೆಳವಣಿಗೆ ಹಾಗೂ ಕಲಿಕೆಗೆ ಅನುಕೂಲಿಸುವಂತಹ ವಿಷಯಗಳನ್ನು ಹರಿಯುವ ಕಡೆ ಗಮನಹರಿಸಬೇಕಿದೆ ಎಂದರು.

ನಾವು ಬಯಸುವ ಬದಲಾವಣೆ ನಮ್ಮಿಂದಲೇ ಕಾಣುವಂತಾಗಬೇಕು. ಈ ಮೂಲಕ ಸಮಾಜವನ್ನು ಬದಲಿಸಬಹುದು. ವಿವಿಧ ಇಲಾಖೆಗಳಲ್ಲಿನ ಕಾರ್ಯಕ್ರಮಗಳನ್ನು ಅರಿತುಕೊಳ್ಳುವುದರಿಂದ ಸಂಬಂಧಿಸಿದ ಫಲಾನುಭವಿಗಳಿಗೆ ಸಹಕರಿಸಲು ಅನುಕೂಲವಾಗುತ್ತದೆ ಈ ಪ್ರಕ್ರಿಯೆಯಿಂದ ಯುವ ಸಮುದಾಯವು ಹಿರಿಯ ನಾಗರೀಕರಿಗೆ, ಮಹಿಳೆಯರಿಗೆ ಮತ್ತು ಮಕ್ಕಳಿಗೆ ಅಗತ್ಯವಿರುವ ಸಹಾಯ ಹಸ್ತ ನೀಡಲು ಸಹಕಾರಿಯಾಗುತ್ತದೆ ಎಂದು ಹೇಳಿದರು.

ಸಮಾಜದಲ್ಲಿನ ದುಶ್ಚಟಗಳಿಗೆ ಯುವ ಸಮುದಾಯ ಬಲಿಯಾಗದೆ ದೇಶದ ಮಾನವ ಸಂಪನ್ಮೂಲವನ್ನು ಸದೃಢಗೊಳಿಸಲು ಉನ್ನತ ಶಿಕ್ಷಣದೊಂದಿಗೆ ವಿವಿಧ ಕೌಶಲ್ಯಗಳನ್ನು ಅಳವಡಿಸಿಕೊಳ್ಳುವ ಅಗತ್ಯವಿದೆ ಇದರಿಂದ ಮುಂದಿನ ದಿನಗಳಲ್ಲಿ ಜೀವನವನ್ನು ರೂಪಿಸಿಕೊಳ್ಳಲು ಮತ್ತು ತಮ್ಮ ಸುತ್ತಲಿನ ಸಮಾಜಕ್ಕೆ ಮಹತ್ವವಾದ ಅಂತಹ ಕೊಡುಗೆ ನೀಡಲು ಸಹಕಾರಿಯಾಗುತ್ತದೆ ಎಂದರು.

ರಾಷ್ಟ್ರೀಯ ಸೇವಾ ಯೋಜನಾಧಿಕಾರಿಗಳಾದ ಪ್ರೊ.ನೀರಜಾದೇವಿ ಹಾಗೂ ಡಾ.ಪ್ರಕಾಶ್ ಮಂಟೇದ ಹಾಜರಿದ್ದರು.

24ಕೆಡಿಬಿಪಿ2-

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ನಡೆದ ಸರ್ಕಾರಿ ಕಾಲೇಜಿನ ಎನ್‌ಎಸ್‌ಎಸ್‌ ಶಿಬಿರದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!