ಮಳೆಗಾಲ ನಿರ್ವಹಣೆಗೆ ಉಡುಪಿ, ಕಾಪು ಶಾಸಕರಿಂದ ಸೂಚನೆ

KannadaprabhaNewsNetwork |  
Published : Jun 11, 2024, 01:39 AM IST
ಶಾಸಕ10 | Kannada Prabha

ಸಾರಾಂಶ

ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಕಡತಗಳ ಬಗ್ಗೆ ಆದ್ಯತೆಯ ಮೇರೆಗೆ ಕ್ರಮ ವಹಿಸುವಂತೆ ಗ್ರಾ.ಪಂ. ಅಧಿಕಾರಿಗಳಿಗೆ ಸೂಚನೆ ನೀಡುವಂತೆ ಶಾಸಕರು ತಿಳಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಮಳೆಗಾಲ ತೀವ್ರವಾಗಿರುವುದರಿಂದ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಕ್ರಮವಹಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಅವರನ್ನು ಭೇಟಿ ಮಾಡಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಚರ್ಚೆ ನಡೆಸಿದರು.

ಚುನಾವಣೆ ನೀತಿಸಂಹಿತೆ ಹಿನ್ನೆಲೆಯಲ್ಲಿ ಬಾಕಿ ಉಳಿದಿರುವ ಗ್ರಾಮ ಪಂಚಾಯಿತಿ ಮಟ್ಟದ ವಿವಿಧ ಕಡತಗಳ ಬಗ್ಗೆ ಆದ್ಯತೆಯ ಮೇರೆಗೆ ಕ್ರಮ ವಹಿಸುವಂತೆ ಗ್ರಾ.ಪಂ. ಅಧಿಕಾರಿಗಳಿಗೆ ಸೂಚನೆ ನೀಡುವಂತೆಯೂ ತಿಳಿಸಿದರು.

* ಕಾಪು ಶಾಸಕರ ಸಭೆ

ಕಾಪು ಶಾಸಕ ಸುರೇಶ್ ಶೆಟ್ಟಿ ಅವರು ವಿವಿಧ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಮಳೆಗಾಲದ ವಿಕೋಪಗಳ ನಿರ್ವಹಣೆಗೆ ಸೂಕ್ತ ಮುಂಜಾಗ್ರತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ವಿದ್ಯುತ್ ಅವಘಡ ತಪ್ಪಿಸಲು ರಸ್ತೆ ಇಕ್ಕೆಲಗಳಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸುವಂತೆ ಮತ್ತು ಅಪಾಯಕಾರಿ ಹಳೆಯ ವಿದ್ಯುತ್ ಕಂಬ - ತಂತಿಗಳನ್ನು ಬದಲಾಯಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಹಾಗೂ ಮುಖ್ಯ ರಸ್ತೆಗಳ ಚರಂಡಿಗಳನ್ನು ಹೂಳು ತೆಗೆದು ನೀರು ಸರಾಗವಾಗಿ ಹರಿಯುವಂತೆ ಕ್ರಮ ಕೈಗೊಳ್ಳಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಲ್ಲದೇ ಪುರಸಭಾ ವ್ಯಾಪ್ತಿಯಲ್ಲಿನ ಕೆರೆ ಹಾಗೂ ಮದಗಗಳಲ್ಲಿ ನೀರು ತುಂಬಿಕೊಂಡಿದ್ದು, ಅಪಾಯದ ಸೂಚನಾ ಫಲಕಗಳನ್ನು ಅಳವಡಿಸಬೇಕು, ಸಾರ್ವಜನಿಕರಿಂದ ಯಾವುದೇ ದೂರುಗಳು ಬಂದಲ್ಲಿ ತಕ್ಷಣ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಪುರಸಭೆಯ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!