ಬೆಳಿಗ್ಗೆ 6ರ ನಂತರವೇ ಬಿರಿಯಾನಿ ಮಾರಾಟಕ್ಕೆ ಸೂಚನೆ

KannadaprabhaNewsNetwork |  
Published : Aug 20, 2026, 01:30 AM IST
ಫೋಟೋ: 19 ಹೆಚ್‌ಎಸ್‌ಕೆ 1 ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕ ಬಿಟಿ ಗೋವಿಂದ್ ರವರು ಬಿರಿಯಾನಿ ಹೋಟಲ್ ಮಾಲೀಕರು ಹಾಗೂ ಹೆದ್ದಾರಿ ಬದಿ ಚಿಲ್ಲರೆ ಅಂಗಡಿ ವ್ಯಾಪಾರಿಗಳ ಸಭೆಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಹೊಸಕೋಟೆ: ಹೊಸಕೋಟೆಯ ಬಿರಿಯಾನಿ ತುಂಬಾ ಪ್ರಸಿದ್ದಿಯಾಗಿದ್ದು, ಬೆಳ್ಳಂಬೆಳಗ್ಗೆ ೪ ಗಂಟೆಗೆ ಬಿರಿಯಾನಿ ಮಾರಾಟದ ಹೋಟಲ್‌ಗಳ ಮುಂದೆ ನೂರಾರು ಜನ ಸರದಿಯಲ್ಲಿ ನಿಲ್ಲುತ್ತಿದ್ದು, ಇನ್ನು ಮುಂದೆ ಬೆಳಗ್ಗೆ 6 ಗಂಟೆ ನಂತರವೇ ಬಿರಿಯಾನಿ ಮಾರಾಟ ಮಾಡಬೇಕು ಎಂದು ಹೊಸಕೋಟೆ ಠಾಣಾ ನಿರೀಕ್ಷಕ ಬಿ.ಟಿ.ಗೋವಿಂದ್ ತಿಳಿಸಿದ್ದಾರೆ

ಹೊಸಕೋಟೆ: ಹೊಸಕೋಟೆಯ ಬಿರಿಯಾನಿ ತುಂಬಾ ಪ್ರಸಿದ್ದಿಯಾಗಿದ್ದು, ಬೆಳ್ಳಂಬೆಳಗ್ಗೆ ೪ ಗಂಟೆಗೆ ಬಿರಿಯಾನಿ ಮಾರಾಟದ ಹೋಟಲ್‌ಗಳ ಮುಂದೆ ನೂರಾರು ಜನ ಸರದಿಯಲ್ಲಿ ನಿಲ್ಲುತ್ತಿದ್ದು, ಇನ್ನು ಮುಂದೆ ಬೆಳಗ್ಗೆ 6 ಗಂಟೆ ನಂತರವೇ ಬಿರಿಯಾನಿ ಮಾರಾಟ ಮಾಡಬೇಕು ಎಂದು ಹೊಸಕೋಟೆ ಠಾಣಾ ನಿರೀಕ್ಷಕ ಬಿ.ಟಿ.ಗೋವಿಂದ್ ತಿಳಿಸಿದ್ದಾರೆ.

ನಗರದ ಪೊಲೀಸ್ ಠಾಣೆಯಲ್ಲಿ ಬಿರಿಯಾನಿ ಹೋಟಲ್ ಮಾಲೀಕರು ಹಾಗೂ ಹೆದ್ದಾರಿ ರಸ್ತೆ ಬದಿ ವ್ಯಾಪಾರಿಗಳ ಸಭೆಯಲ್ಲಿ ಖಡಕ್ ಸೂಚನೆ ನೀಡಿದ ನೀಡಿದ ಅವರು, ಬಿರಿಯಾನಿ ಪ್ರಿಯರು ಮುಂಜಾನೆ 4 ಗಂಟೆಗೆ ಬಿರಿಯಾನಿ ಹೋಟಲ್‌ಗಳ ಮುಂದೆ ಸರದಿಯಲ್ಲಿ ನಿಲ್ಲುವ ಭರದಲ್ಲಿ ತಮ್ಮ ವಾಹನಗಳನ್ನು ರಸ್ತೆಯಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸುತ್ತಿರುವ ಕಾರಣ ರಸ್ತೆ ಅಪಘಾತಗಳು ಸಂಭವಿಸುತ್ತಿವೆ. ತಿಂದು ಹೋಗುವ ಸಂದರ್ಭದಲ್ಲಿಯೂ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಇನ್ನೂ ಕೆಲವರಿಗೆ ಕೈ ಕಾಲು ಮುರಿದು ಅಂಗವಿಕಲರಾಗಿದ್ದಾರೆ. ಮದ್ಯಸೇವಿಸಿ ಹಲವು ಬಾರಿ ಗಲಾಟೆಗಳೂ ನಡೆದಿರುವ ವರದಿಯಾಗಿದೆ. ಈ ಅಪರಾಧ ಪ್ರಕರಣಗಳನ್ನು ತಪ್ಪಿಸುವುದಕ್ಕಾಗಿ ಈ ಕ್ರಮ ಕೈಗೊಂಡಿದ್ದು, ಹೋಟಲ್ ಮಾಲೀಕರು ಸಹಕರಿಸಬೇಕು ಎಂದು ಸೂಚಿಸಿದರು.

ದೂರದೂರುಗಳಿಂದ ಬರುವವರು ತಡರಾತ್ರಿವರೆಗೆ ಪಾರ್ಟಿ ಮಾಡಿ ಮುಂಜಾನೆ ೪ ಗಂಟೆಗೆ ಹೊಸಕೋಟೆಯಲ್ಲಿ ಬಿರಿಯಾನಿ ಅಂಗಡಿಗಳಿಗೆ ಬರುವುದು ಸಾಮಾನ್ಯವಾಗಿತ್ತು. ಬಿರಿಯಾನಿ ಪಾರ್ಸಲ್ ಪಡೆದು ಅವರ ಕಾರುಗಳಲ್ಲೇ ಮದ್ಯ ಸೇವನೆ, ಗಾಂಜಾ ಸೇವಿಸುವ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದು ಇದಕ್ಕೆಲ್ಲಾ ಹಾಕಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಇನ್ನು ಮುಂದೆ ಹೊಸಕೋಟೆಯಲ್ಲಿ ಬಿರಿಯಾನಿ ಹೋಟಲ್‌ಗಳಲ್ಲಿ ೬ ಗಂಟೆ ನಂತರ ಮಾತ್ರ ಬಿರಿಯಾನಿ ದೊರೆಯಲಿದೆ ಎಂದು ಸೂಚನಾ ಫಲಕಗಳನ್ನು ಕಡ್ಡಾಯವಾಗಿ ನಮೂದಿಸಿರಬೇಕು. ಹಾಗೂ ಬಿರಿಯಾನಿ ತಿನ್ನುವವರು ಕಾರುಗಳಲ್ಲಿ ಕುಳಿತು ಮದ್ಯ ಸೇವಿಸಿದರೆ ಕೂಡಲೆ ಪೊಲೀಸರಿಗೆ ತಿಳಿಸಲಾಗುವುದು ಎಂಬ ಮಾಹಿತಿ ಇರಬೇಕು. ವಾಹನ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಿರಬೇಕು, ಸೆಕ್ಯುರಿಟಿ ಗಾರ್ಡ್‌ಗಳ ನೇಮಕ ಆಗಿರಬೇಕು, ರಸ್ತೆ ವಾಹನ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಹೆದ್ದಾರಿ ಬದಿ ಚಿಲ್ಲರೆ ಅಂಗಡಿಯವರೂ ಸಹ ರಾತ್ರಿವೇಳೆ ಹೆಚ್ಚಿನ ದರಕ್ಕೆ ಪದಾರ್ಥಗಳನ್ನು ಮಾರುವಂತಿಲ್ಲ. ಹಾಗೂ ರಾತ್ರಿ ೧೧ ಗಂಟೆಗೆ ಅಂಗಡಿಗಳನ್ನು ಮುಚ್ಚಬೇಕು ಎಂದು ಸೂಚಿಸಿದರು.

ಫೋಟೋ: 19 ಹೆಚ್‌ಎಸ್‌ಕೆ 1

ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪೊಲೀಸ್ ನಿರೀಕ್ಷಕ ಬಿ.ಟಿ.ಗೋವಿಂದ್ ಅಧ್ಯಕ್ಷತೆಯಲ್ಲಿ ಬಿರಿಯಾನಿ ಹೋಟಲ್ ಮಾಲೀಕರು ಹಾಗೂ ಹೆದ್ದಾರಿ ಬದಿ ಚಿಲ್ಲರೆ ಅಂಗಡಿ ವ್ಯಾಪಾರಿಗಳ ಸಭೆಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಾವೊಬ್ಬ ವಿದ್ಯಾರ್ಥಿಯೂ ಶಿಕ್ಷಣದಿಂದ ವಂಚಿತರಾಗದಿರಲಿ: ಶಾಸಕ ಸಿ.ಬಿ.ಸುರೇಶ್‌ಬಾಬು
ರಸ್ತೆ ಮಾರ್ಜಿನ್ ನಿಂದ 30 ಅಡಿ ಬಿಟ್ಟು ಮನೆ ಕಟ್ಟಲು ಅನುಮತಿಸಿ: ಖಾತೆದಾರರ ಆಗ್ರಹ