ಕನ್ನಡಪ್ರಭ ವಾರ್ತೆ, ಕಡೂರು
ಸೋಮವಾರ ಪಟ್ಟಣದ ತಾಪಂ ಸಭಾಂಗಣದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಕುರಿತ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚಿಕ್ಕಮಗಳೂರು, ತರೀಕೆರೆ ಒಳಗೊಂಡು ಮುಖ್ಯವಾಗಿ ಕಡೂರು ತಾಲೂಕಿನ ಉದ್ದೇಶಿತ ಕಾಮಗಾರಿಯಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಶೇ.54 ರಷ್ಟು ಕಾಮಗಾರಿ ಪೂರ್ಣ ಗೊಂಡಿದೆ. ಕೆಲ ತಾಂತ್ರಿಕ ಅಡಚಣೆಯಿಂದ ಕಾಮಗಾರಿ ಪ್ರಗತಿ ಕುಂಠಿತವಾಗಿದೆ. 920 ಕಿ.ಮೀ ಪೈಪ್ ಲೈನ್ ಅಳವಡಿಸುವ ಕಾಮಗಾರಿ ₹900 ಕೋಟಿ ವೆಚ್ಚದಲ್ಲಿ ಚಿಕ್ಕಮಗಳೂರು, ತರೀಕೆರೆ, ಕಡೂರು ತಾಲೂಕಿನಲ್ಲಿ ನಡೆಯುತ್ತಿದೆ. ಪೈಪ್ ಲೈನ್ ನ ಶೇ.75 ರಷ್ಟು ಕಾಮಗಾರಿ ಪೂರ್ಣಗೊಂಡಿದೆ ಎಂದು ತಿಳಿಸಿದರು.ಟ್ಯಾಂಕ್ ನಿರ್ಮಾಣಕ್ಕೆ ಅರಣ್ಯ ಇಲಾಖೆ, ಖಾಸಗಿ ಜಮೀನಿನ ಸಮಸ್ಯೆಗಳನ್ನು ಅಧಿಕಾರಿಗಳು ಬಗೆಹರಿಸಿಕೊಳ್ಳಬೇಕು. ಈ ಕಾಮಗಾರಿಯಲ್ಲಿ 41 ಓವರ್ ಹೆಡ್ ಟ್ಯಾಂಕ್ ನಿರ್ಮಾಣವಾಗಬೇಕಿದೆ. 12 ಕಡೆಗಳಲ್ಲಿ ರೈಲ್ವೆ ಕ್ರಾಸಿಂಗ್ ಬರಲಿದ್ದು ಇದಕ್ಕಾಗಿ ಇಲಾಖೆಯೊಂದಿಗೆ ಪತ್ರ ವ್ಯವಹಾರ ನಡೆಸಲಾಗಿದೆ. ಅರಣ್ಯ ಇಲಾಖೆ ಸಮಸ್ಯೆ ಬಗ್ಗೆ ಅರಣ್ಯ ಸಚಿವರ ಒಪ್ಪಿಗೆಗೆ ಕಾಯಲಾಗುತ್ತಿದೆ. ಭದ್ರಾ ನೀರನ್ನು ತಾಲೂಕಿನ ಎಲ್ಲ ಗ್ರಾಮಗಳಿಗೆ ನೀಡುವ ಕಾಮಗಾರಿ ನಿಗಧಿತ ಅವಧಿಯಲ್ಲಿ ಮುಕ್ತಾಯಗೊಳಿಸಬೇಕು ಎಂದರು.
ಭದ್ರಾ ಮೇಲ್ದಂಡೆ ಯೋಜನೆಯಡಿ ನಾಲ್ಕು ಗ್ರಾಮಗಳ ಜಮೀನಿನ ಸಮಸ್ಯೆ ಇತ್ತು. ಅಣ್ಣೀಗೆರೆ, ವೈಮಲ್ಲಾ ಪುರ. ಕುರುಬರಹಳ್ಳಿ ಗ್ರಾಮದ ರೈತರು ಜಮೀನನ್ನು ನೇರ ಖರೀದಿಗೆ ಒಪ್ಪಿ ನೀಡಿದ್ದಾರೆ. ಎಕರೆಗೆ ₹30 ಲಕ್ಷ ರು. ಪರಿಹಾರ ಸಿಗಲಿದೆ. ಇನ್ನೂ ಒಂದು ಗ್ರಾಮದ ಸಮಸ್ಯೆ ಮುಗಿದರೆ ಕಾಮಗಾರಿ ಪ್ರಗತಿ ವೇಗಗೊಳಿಸಲು ಸಾಧ್ಯವಾಗಲಿದ್ದು ರೈತರು ಸಹಕರಿಸಬೇಕು ಎಂದರು.
ಸಭೆಯಲ್ಲಿ ತಹಸೀಲ್ದಾರ್ ಸಿ.ಎಸ್.ಪೂರ್ಣಿಮಾ, ತಾಪಂ ಇಒ ಸಿ.ಆರ್.ಪ್ರವೀಣ್, ವಿಶ್ವೇಶ್ವರಯ್ಯ ಜಲ ನಿಗಮದ ಎಇಇ ಹರ್ಷ, ತ್ಯಾಗರಾಜ್, ಪ್ರವೀಣ್, ಮೋಹನ್, ಗ್ರಾಮೀಣ ಕುಡಿಯುವ ನೀರು ನೈರ್ಮಲ್ಯ ವಿಭಾಗದ ಎಇಇ ಪ್ರಕಾಶ್, ಹರಿರಾಮ್, ಕೆಎಲ್ಎಸ್ ಆರ್ ಸಂಸ್ಥೆಯ ಜನರಲ್ ಮ್ಯಾನೇಜರ್ ಸೋಮ ಸುಂದರ್, ಅರುಳ್ ಮುರುಗನ್, ಮನೋಹರ್, ಸುಧಾಕರ್, ರೇಣುಕಯ್ಯ, ದಿವಾಕರ್, ಎ.ಡಿ.ಎಚ್. ಜಯದೇವಪ್ಪ, ಆರ್ಎಫ್ಒ ಹರೀಶ್, ಸಿಪಿಐಗಳಾದ ರಫೀಕ್, ಹಾಲಪ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಕಡೂರು ಪಟ್ಟಣದ ತಾ.ಪಂ ಸಭಾಂಗಣದಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮತ್ತು ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಶಾಸಕ ಕೆ.ಎಸ್.ಆನಂದ್ ಮಾತನಾಡಿದರು.