ಇ-ಕೆವೈಸಿ, ನರೇಗಾ ಮಾನವ ದಿನಗಳ ಸೃಜನೆಯತ್ತ ಗಮನ ನೀಡಿ: ವಿಶ್ವನಾಥ ಹೊಸಮನಿ

KannadaprabhaNewsNetwork |  
Published : Oct 17, 2025, 01:02 AM IST
ಮುಂಡರಗಿ ಪಟ್ಟಣದ ತಾಪಂ ಕಚೇರಿಯಲ್ಲಿ ನರೇಗಾ ಸಿಬ್ಬಂದಿ ಸಭೆಯಲ್ಲಿ ತಾಪಂ ಇಒ ವಿಶ್ವನಾಥ ಹೊಸಮನಿ ಮಾತನಾಡಿದರು. | Kannada Prabha

ಸಾರಾಂಶ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನೋಂದಾಯಿತವಾಗಿರುವ ತಾಲೂಕಿನ ಎಲ್ಲ ಗ್ರಾಮೀಣ ಕುಟುಂಬಗಳ ಉದ್ಯೋಗ ಚೀಟಿ ಇ-ಕೆವೈಸಿ ಪ್ರಕ್ರಿಯೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಮುಂಡರಗಿ ತಾಲೂಕು ಪಂಚಾಯಿತಿ ನರೇಗಾ ಸಿಬ್ಬಂದಿಗೆ ತಾಪಂ ಇಒ ವಿಶ್ವನಾಥ ಹೊಸಮನಿ ಸೂಚಿಸಿದರು.

ಮುಂಡರಗಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅಡಿಯಲ್ಲಿ ನೋಂದಾಯಿತವಾಗಿರುವ ತಾಲೂಕಿನ ಎಲ್ಲ ಗ್ರಾಮೀಣ ಕುಟುಂಬಗಳ ಉದ್ಯೋಗ ಚೀಟಿ ಇ-ಕೆವೈಸಿ ಪ್ರಕ್ರಿಯೆಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ತಾಲೂಕು ಪಂಚಾಯಿತಿ ನರೇಗಾ ಸಿಬ್ಬಂದಿಗೆ ತಾಪಂ ಇಒ ವಿಶ್ವನಾಥ ಹೊಸಮನಿ ಸೂಚಿಸಿದರು.

ತಾಪಂ ಕಚೇರಿಯಲ್ಲಿ ಗುರುವಾರ ನರೇಗಾ ಸಿಬ್ಬಂದಿ ಸಭೆ ನಡೆಸಿ ಮಾತನಾಡಿದ ಅವರು, ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದಿಂದ ಇ-ಕೆವೈಸಿ ಪ್ರಕ್ರಿಯೆ ಕಡ್ಡಾಯವಾಗಿ ಮಾಡಬೇಕು ಎಂಬ ಆದೇಶ ಇರುವುದರಿಂದ ನರೇಗಾ ಕೂಲಿಕಾರರ ಮನೆ ಮನೆ ಸಂಪರ್ಕಿಸಿ ಸಕ್ರಿಯವಾಗಿ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸಿದರು.

ತಾಲೂಕಿನ 19 ಗ್ರಾಪಂ ಮಟ್ಟದಲ್ಲಿ ನರೇಗಾ ಸಿಬ್ಬಂದಿಯಾದ ಗ್ರಾಮ ಕಾಯಕ ಮಿತ್ರ, ಬಿಎಫ್‌ಟಿ, ತಾಂತ್ರಿಕ ಸಹಾಯಕರಿಗೆ ಇ-ಕೆವೈಸಿ ಕುರಿತು ತರಬೇತಿ ನೀಡಲಾಗಿದೆ. ಗ್ರಾಪಂಗಳ ಇತರ ಸಿಬ್ಬಂದಿ ಬಳಸಿಕೊಂಡು ಸಕ್ರಿಯ ಕೂಲಿಕಾರರ ಜಾಬ್ ಕಾರ್ಡ್‌ಗಳನ್ನು ಇ-ಕೆವೈಸಿ ಮೂಲಕ ಪರಿಶೀಲಿಸುವ ಕಾರ್ಯ ತುರ್ತಾಗಿ ನಡೆಯಲಿ ಎಂದರು.

ನರೇಗಾ ತಾಂತ್ರಿಕ ಸಹಾಯಕರು ಕೃಷಿ ಇಲಾಖೆ ಅಡಿಯ ಕೃಷಿ ಹೊಂಡ ಕಾಮಗಾರಿಗಳನ್ನು ಶೀಘ್ರವೇ ಆರಂಭಿಸಿ ಕೂಲಿಕಾರರಿಗೆ ಉದ್ಯೋಗ ನೀಡಲು ಸೂಚಿಸಿ ಇದರಿಂದ ಮಾನವ ದಿನಗಳ ಸೃಜನೆ ಸಾಧ್ಯವಾಗಲಿದೆ. ಹಾಗಾಗಿ ಆ ನಿಟ್ಟಿನ ಕಡೆಯು ಗಮನಹರಿಸಿ ಎಂದು ತಿಳಿಸಿದರು‌.

ಚಾಲ್ತಿ ಕಾಮಗಾರಿಗಳನ್ನು ಮುಕ್ತಾಯಗೊಳಿಸಿ ಹೊಸ ಕಾಮಗಾರಿಗಳ ಮೂಲಕ ಗ್ರಾಮೀಣ ಭಾಗದಲ್ಲಿ ಕೂಲಿಕಾರರಿಗೆ ಉದ್ಯೋಗ ನೀಡಲು ಗಮನಹರಿಸಲು ತಿಳಿಸಿದರು‌. 2026-27ನೇ ನರೇಗಾ ಕ್ರಿಯಾಯೋಜನೆಗೆ ಈಗಾಗಲೇ ಸುತ್ತೋಲೆ ಬಂದಿದ್ದು, ಕ್ರಿಯಾಯೋಜನೆ ಸಿದ್ಧಪಡಿಸುವ ಕಾರ್ಯವು ನಡೆಯಲಿ ಎಂದರು.

ಈ ವೇಳೆ ಟಿಸಿ ಪ್ರವೀಣ ಸೂಡಿ, ಟಿಎಂಐಎಸ್ ಬಸವರಾಜ ಮಣ್ಣಮ್ಮನವರ, ತಾಂತ್ರಿಕ ಸಹಾಯಕರು, ಬಿಎಫ್‌ಟಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ