ಅರಣ್ಯ ಇಲಾಖೆ ಜಾಗದಲ್ಲಿರುವ ಶಾಲೆಗಳ ಬಗ್ಗೆ ಮಾಹಿತಿ ನೀಡಲು ತಾಪಂ ಆಡಳಿತಾಧಿಕಾರಿ ಸೂಚನೆ

KannadaprabhaNewsNetwork |  
Published : May 28, 2026, 01:45 AM IST
 ನರಸಿಂಹರಾಜಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಆಡಳಿತಾಧಿಕಾರಿ  ಕೊಪ್ಪ ಡಿ.ಎಫ್.ಓ ಶಿವಶಂಕರ್ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ನಡೆಯಿತು. | Kannada Prabha

ಸಾರಾಂಶ

ನರಸಿಂಹರಾಜಪುರತಾಲೂಕಿನ ಎಷ್ಟು ಶಾಲೆಗಳು ಅರಣ್ಯ ಇಲಾಖೆ ಸೇರಿದ ಜಾಗದಲ್ಲಿದೆ ಎಂಬ ಬಗ್ಗೆ ಮಾಹಿತಿ ನೀಡಿ ಎಂದು ತಾಪಂ ಆಡಳಿತಾಧಿಕಾರಿ ಕೊಪ್ಪ ಡಿಎಫ್ಒ ಶಿವಶಂಕರ್ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ಅವರಿಗೆ ಸೂಚಿಸಿದರು.

ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ತಾಲೂಕಿನ ಎಷ್ಟು ಶಾಲೆಗಳು ಅರಣ್ಯ ಇಲಾಖೆ ಸೇರಿದ ಜಾಗದಲ್ಲಿದೆ ಎಂಬ ಬಗ್ಗೆ ಮಾಹಿತಿ ನೀಡಿ ಎಂದು ತಾಪಂ ಆಡಳಿತಾಧಿಕಾರಿ ಕೊಪ್ಪ ಡಿಎಫ್ಒ ಶಿವಶಂಕರ್ ಕ್ಷೇತ್ರ ಶಿಕ್ಷಣಾಧಿಕಾರಿ ಶಬಾನಾ ಅಂಜುಮ್ ಅವರಿಗೆ ಸೂಚಿಸಿದರು.

ತಾಪಂ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಯಾವುದಾದರೂ ಶಾಲೆಗಳು ಅರಣ್ಯ ಇಲಾಖೆ ಜಾಗದಲ್ಲಿದ್ದು ಆ ಶಾಲೆಯಲ್ಲಿ ಓದುತ್ತಿರುವ ಅದೇ ಗ್ರಾಮದ ಯಾವುದಾದರೊಂದು ಮಗುವಿನ ಕುಟುಂಬಕ್ಕೆ ಅರಣ್ಯ ಹಕ್ಕು ಸಮಿತಿಯಿಂದ ಹಕ್ಕು ಪತ್ರ ವಿತರಣೆಯಾಗಿದ್ದರೆ ಕಾಲಂ 11 ರ ಆಧಾರದ ಮೇಲೆ ಆ ಶಾಲೆ ಜಾಗಕ್ಕೆ ಪಹಣಿ ಮಾಡಿಸಿಕೊಳ್ಳುವ ಅವಕಾಶವಿದೆ. ಆದ್ದರಿಂದ ಅರಣ್ಯ ಇಲಾಖೆ ಜಾಗದಲ್ಲಿರುವ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಮಗುವಿನ ಕುಟುಂಬಕ್ಕೆ ಅರಣ್ಯ ಹಕ್ಕು ಸಮಿತಿಯಿಂದ ಹಕ್ಕುಪತ್ರ ವಿತರಣೆಯಾಗಿದೆಯೇ ? ಎಂದು ಮೊದಲು ಮಾಹಿತಿ ಕಲೆ ಹಾಕಬೇಕು ಎಂದು ಬಿಇಒ ಶಬಾನಾ ಅಂಜುಮ್ ಅವರಿಗೆ ತಿಳಿಸಿದರು.

ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಮಹೇಂದ್ರ ಕಿರೀಟಿ ಸಭೆಗೆ ಮಾಹಿತಿ ನೀಡಿ, ಎನ್‌.ಆರ್.ಪುರ ತಾಲೂಕಿನಲ್ಲಿ ಮಂಗನ ಖಾಯಿಲೆ 52 ಪಾಸಿಟಿವ್ ಬಂದಿದ್ದು ಎಲ್ಲರಿಗೂ ಚಿಕಿತ್ಸೆ ನೀಡಲಾಗಿದೆ. ಎಲ್ಲರೂ ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ಯಾವುದೇ ಆತಂಕ ಇಲ್ಲ. 14 ವರ್ಷ ಮೇಲ್ಪಟ್ಟ ಹಾಗೂ 15 ವರ್ಷದೊಳಗಿನ ಎಲ್ಲಾ ಹೆಣ್ಣು ಮಕ್ಕಳಿಗೆ ಎಚ್.ಪಿ.ವಿ ವ್ಯಾಕ್ಸಿನೇಷನ್ ನೀಡಲಾಗುತ್ತಿದೆ. ವ್ಯಾಕ್ಸಿನೇಷನ್ ತೆಗೆದುಕೊಂಡರೆ ಮಕ್ಕಳಾಗುವುದಿಲ್ಲ ಹಾಗೂ ಅಡ್ಡ ಪರಿಣಾಮ ಗಳಾಗುತ್ತದೆ ಎಂಬ ಸುಳ್ಳು ವದಂತಿಗಳಿಂದ ವ್ಯಾಕ್ಸಿನೇಷನ್ ಪ್ರಗತಿ ಕಡಿಮೆಯಾಗಿದೆ. ಆರೋಗ್ಯ ಇಲಾಖೆ ಯಿಂದ ಸಾಕಷ್ಟು ಪ್ರಚಾರ ಹಾಗೂ ವ್ಯಾಕ್ಸಿನೇಷನ್ ತೆಗೆದುಕೊಳ್ಳುವಂತೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಪಶು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಪ್ರೀತಮ್ ಸಭೆಗೆ ಮಾಹಿತಿ ನೀಡಿ, ತಾಲೂಕಿನಲ್ಲಿ ಒಟ್ಟು 27,554 ಜಾನುವಾರು ಗಳಿದ್ದು ಕಾಲು ಬಾಯಿ ಜ್ವರ ಹಾಗೂ ಚರ್ಮ ಗಂಟು ರೋಗದ ಲಸಿಕಾ ಕಾರ್ಯಕ್ರಮ ಶೇ. 50 ರಷ್ಟು ಮುಗಿದಿದೆ. ಉಳಿದಂತೆ ಲಸಿಕಾ ಕಾರ್ಯಕ್ರಮ ಪ್ರಗತಿಯಲ್ಲಿದೆ ಎಂದು ತಿಳಿಸಿದರು. ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ್ ಮಾಹಿತಿ ನೀಡಿ, ಯುದ್ಧದ ಪರಿಣಾಮ ಯೂರಿಯಾ ಹಾಗೂ ಡಿಎಪಿ ಗೊಬ್ಬರ ಶೇ.25 ರಷ್ಟು ಕೊರತೆಯಾಗಲಿದೆ. ಮಲೆನಾಡು ಭಾಗದಲ್ಲಿ ಖಾತೆ ಇರುವ ಜಮೀನು, ತೋಟಗಳಿಗಿಂತ ಒತ್ತುವರಿ ಜಮೀನು ಜಾಸ್ತಿ ಇದ್ದು ರಸ ಗೊಬ್ಬರದ ಕೊರತೆ ನೀಗಿಸಲು ಖಾತೆ ಇರುವಷ್ಟು ಜಮೀನಿಗೆ ಅನುಗುಣವಾಗಿ ಗೊಬ್ಬರ ವಿತರಿಸಲಾಗುತ್ತಿದೆ. ಗೊಬ್ಬರದ ದಾಸ್ತಾನು ಕೊರತೆ ಬಗ್ಗೆ ಈಗಾಗಲೇ ಗೊಬ್ಬರ ಮಾರಾಟಗಾರರ ಸಭೆ ನಡೆಸಲಾಗಿದೆ ಎಂದರು.ತಾಪಂ ಆಡಳಿತಾಧಿಕಾರಿ ಶಿವಶಂಕರ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಕಾವಲು ಸಮಿತಿ ಸಭೆಯನ್ನು ಪ್ರತೀ 3 ತಿಂಗಳಿಗೊಮ್ಮೆ ನಡೆಸಬೇಕು. ಸಮಿತಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವಂತೆ ಇಲಾಖೆ ಹಾಗೂ ಸಂಬಂಧಪಟ್ಟ ಗ್ರಾ.ಪಂಚಾಯ್ತಿ ಪಿಡಿಒ ಗಮನಹರಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ತಾಪಂ ಇಒ ಎಚ್.ಡಿ.ನವೀನ್‌ಕುಮಾರ್, ತಾಪಂ ಟಿಪಿಒ ಯಾದವರಾಜ್, ಪ್ರಭಾರ ಪಂಚಾಯತ್ ರಾಜ್ ಸಹಾಯಕ ನಿರ್ದೇಶಕಿ ಮಂಜುಳ, ತಾಲ್ಲೂಲೂಕು ಮಟ್ಟದ ಇಲಾಖಾಧಿಕಾರಿಗಳು ಹಾಗೂ ಗ್ರಾಪಂಗಳ ಪಿಡಿಒ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತೈಲ, ಗೊಬ್ಬರ, ಬಿತ್ತನೆ ಬೀಜ ಬೆಲೆ ಏರಿಕೆಗೆ ರೈತರ ಆಕ್ರೋಶ
ದುರಸ್ತಿ ಕಾಣದ ಅಯ್ಯನಕೆರೆ ತೂಬು: ರೈತರಲ್ಲಿ ಮೂಡಿದ ಆತಂಕ