ಕನ್ನಡಪ್ರಭ ವಾರ್ತೆ ಮಂಗಳೂರು
ಬ್ರಹ್ಮೋಪದೇಶದ ಸಮಯದಲ್ಲಿ ಜನಿವಾರ ಧರಿಸಿ, ಗಾಯತ್ರೀ ಮಂತ್ರೋಪದೇಶ ಪಡೆಯುವುದು ಬ್ರಾಹ್ಮಣ ಹಕ್ಕು ಹಾಗೂ ಕರ್ತವ್ಯವಾಗಿದೆ. ಜನಿವಾರಕ್ಕೆ ಧಾರ್ಮಿಕ ಮಹತ್ವವಿದ್ದು, ಪರಮಪವಿತ್ರ ಜನಿವಾರವನ್ನು ಸಿ.ಇ.ಟಿ ಕೇಂದ್ರಗಳಲ್ಲಿ ತುಂಡರಿಸಿರುವುದು ಆತಂಕಕಾರಿಯಾಗಿದ್ದು, ಸಂವಿಧಾನ ದತ್ತವಾದ ಧಾರ್ಮಿಕ ಹಕ್ಕು ಮೊಟಕುಗೊಳಿಸುವ ಕೃತ್ಯವಾಗಿದೆ ಎಂದು ಮಹಾಸಭಾ ಅಧ್ಯಕ್ಷ ಗಿರಿಧರ್ ಕಜೆ ಪ್ರಕಟಣೆಯಲ್ಲಿ ಖಂಡಿಸಿದ್ದಾರೆ.
ಪ್ರಕರಣಕ್ಕೆ ಕಾರಣರಾದವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಈ ಕುರಿತು ಸರ್ಕಾರದಿಂದ ಯಾವುದಾದರೂ ಸೂಚನೆಗಳಿದ್ದಲ್ಲಿ ಅದನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಮಹಾಸಭಾ ಆಗ್ರಹಿಸಿದೆ.ಜಾತಿ ಸಮೀಕ್ಷೆ ಅವೈಜ್ಞಾನಿಕ:
ಹವ್ಯಕ ಬ್ರಾಹ್ಮಣರು ರಾಜ್ಯದ ಉತ್ತರಕನ್ನಡ, ಶಿವಮೊಗ್ಗ, ದಕ್ಷಿಣಕನ್ನಡ ಜಿಲ್ಲೆಗಳಲ್ಲಿ ಪ್ರಬಲ ಸಮಾಜವಾಗಿದೆ. ಕಳೆದ ಡಿಸೆಂಬರ್ನಲ್ಲಿ ಬೆಂಗಳೂರಿನಲ್ಲಿ ಆಯೋಜಿತವಾಗಿದ್ದ ತೃತೀಯ ವಿಶ್ವ ಹವ್ಯಕ ಸಮ್ಮೇಳನದಲ್ಲಿ ಸುಮಾರು 2 ಲಕ್ಷ ಜನ ಭಾಗವಹಿಸಿದ್ದನ್ನೂ ನಾವು ಗಮನಿಸಬಹುದಾಗಿದ್ದು, ಹವ್ಯಕ ಸಮಾಜದ ಜನಸಂಖ್ಯೆ ಸುಮಾರು 5 ಲಕ್ಷಕ್ಕೂ ಅಧಿಕವಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಜಾತಿ ಸಮೀಕ್ಷೆಯನ್ನು ಖಂಡಿಸಿದ್ದು, ಅವೈಜ್ಞಾನಿಕ ಸಮೀಕ್ಷೆ ತಿರಸ್ಕರಿಸುವಂತೆ ಹವ್ಯಕ ಮಹಾಸಭಾ ಆಗ್ರಹಿಸಿದೆ.