ಶ್ರೀರಾಮನ ಬಗ್ಗೆ ಅವಹೇಳನ: ಭಗವಾನ್‌ ವಿರುದ್ಧ ದೂರು ದಾಖಲು

KannadaprabhaNewsNetwork |  
Published : Jun 13, 2026, 02:00 AM IST
ಸಾಹಿತಿ ಪ್ರೊ. ಕೆ.ಎಸ್‌. ಭಗವಾನ್‌ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಶಿವಸೇನಾ ಪಕ್ಷದ ಪದಾಧಿಕಾರಿಗಳು ಶುಕ್ರವಾರ ಇಲ್ಲಿಯ ಶಹರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು. | Kannada Prabha

ಸಾರಾಂಶ

ಕೆ.ಎಸ್‌. ಭಗವಾನ್‌ ಅವರು ಸಾರ್ವಜನಿಕ ವೇದಿಕೆಯಲ್ಲಿ ಶ್ರೀರಾಮನು ದಶರಥನ ಮಗನಲ್ಲ ಎನ್ನುವುದಲ್ಲದೇ, ಹಿಂದೂ ಧರ್ಮಗ್ರಂಥಗಳ ಕುರಿತು ಅವಹೇಳನಕಾರಿ, ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಈ ಹೇಳಿಕೆ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ.

ಧಾರವಾಡ:

ಪ್ರಭು ಶ್ರೀರಾಮಚಂದ್ರನ ಬಗ್ಗೆ ಹಾಗೂ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟುಮಾಡುವ ಹೇಳಿಕೆ ನೀಡಿರುವ ಸಾಹಿತಿ ಪ್ರೊ. ಕೆ.ಎಸ್‌. ಭಗವಾನ್‌ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಶಿವಸೇನಾ ಪಕ್ಷದ ಪದಾಧಿಕಾರಿಗಳು ಶುಕ್ರವಾರ ಇಲ್ಲಿಯ ಶಹರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದರು.

ದಾವಣಗೆರೆ ಜಿಲ್ಲೆಯ ಹರಿಹರದ ಬಿ. ಕೃಷ್ಣಪ್ಪ ಮೈತ್ರಿವನದಲ್ಲಿ ಜೂ. 9ರಂದು ದಲಿತ ಸಂಘರ್ಷ ಸಮಿತಿ ವತಿಯಿಂದ ಆಯೋಜಿಸಿದ್ದ ಸಮಾರಂಭದಲ್ಲಿ ಕೆ.ಎಸ್‌. ಭಗವಾನ್‌ ಅವರು ಸಾರ್ವಜನಿಕ ವೇದಿಕೆಯಲ್ಲಿ ಶ್ರೀರಾಮನು ದಶರಥನ ಮಗನಲ್ಲ ಎನ್ನುವುದಲ್ಲದೇ, ಹಿಂದೂ ಧರ್ಮಗ್ರಂಥಗಳ ಕುರಿತು ಅವಹೇಳನಕಾರಿ, ಪ್ರಚೋದನಕಾರಿ ಭಾಷಣ ಮಾಡಿದ್ದಾರೆ. ಈ ಹೇಳಿಕೆ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ. ಈ ಹಿಂದೆಯೂ ಭಗವಾನ್, ಶ್ರೀರಾಮ, ಶ್ರೀಕೃಷ್ಣ, ಭಗವದ್ಗೀತೆ ಹಾಗೂ ಹಿಂದೂ ಧರ್ಮಗ್ರಂಥಗಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದೀಗ ಮತ್ತದೆ ರೀತಿಯ ಹೇಳಿಕೆಗಳನ್ನು ನೀಡಿದ್ದು, ಧಾರ್ಮಿಕ ಭಾವನೆಗೆ ಉದ್ದೇಶಪೂರ್ವಾಗಿ ಧಕ್ಕೆ ತರಲು ಮಾಡಿರುವ ಪ್ರಯತ್ನವಿದು. ಆದ್ದರಿಂದ ಅವರ ವಿರುದ್ಧ ಕಾನೂನು ವಿಧಿಗಳ ಅಡಿ ಪ್ರಕರಣ ದಾಖಲಿಸಿ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು. ಅವರನ್ನು ಒಂದು ವಾರದಲ್ಲಿ ಬಂಧಿಸದೆ ಹೋದಲ್ಲಿ ಮೈಸೂರಿನ ಅವರ ಮನೆ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಈ ವೇಳೆ ಶಿವಸೇನೆ ಜಿಲ್ಲಾಧ್ಯಕ್ಷ ಗಂಗಾಧರ ಕುಲಕರ್ಣಿ, ಸಿದ್ಧಾರ್ಥ ಶಿವಶರಣವರ, ಭರತ ಸಾವಂತ, ಪ್ರಸಾದ ತೋಷಿ, ನವೀನ ರಾಟಿ, ಅಕ್ಷಯ ಕದಂ ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆಚ್ಚಿನ ಬೆಲೆಗೆ ರಸಗೊಬ್ಬರ ಮಾರಾಟ, ಕ್ರಮಕ್ಕೆ ಆಗ್ರಹ
ವಿದ್ಯಾರ್ಥಿಗಳು ತಂತ್ರಜ್ಞಾನ ಅಭಿವೃದ್ಧಿ ಸಂಶೋಧನೆಗಳಲ್ಲಿ ತೊಡಗಿಸಿಕೊಳ್ಳಿ