ಕನ್ನಡಪ್ರಭ ವಾರ್ತೆ ಮಡಿಕೇರಿ
ಮಾಜಿ ಸೈನಿಕರು, ಕೊಡವ ಸಮಾಜಗಳ ಪ್ರತಿನಿಧಿಗಳು ಫೀ.ಮಾ.ಕಾರ್ಯಪ್ಪ ವೃತ್ತದಲ್ಲಿ ಸೇರಿ, ವೀರ ಸೇನಾನಿಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಪ್ರತಿಭಟನೆ ಆರಂಭಿಸಿದರು.
ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೊಟ್ಟುಕರ ಸೋಮಣ್ಣ ಮಾತನಾಡಿ, ರಾಷ್ಟ್ರದ ಪ್ರಥಮ ಮಹಾ ದಂಡ ನಾಯಕ ಫೀ.ಮಾ.ಕೆ.ಎಂ.ಕಾರ್ಯಪ್ಪ ಹಾಗೂ ಸೈನಿಕರ ಸೇನಾನಿ ಎಂದೇ ಖ್ಯಾತರಾದ ಜ.ತಿಮ್ಮಯ್ಯ ಭಾರತದ ಹೆಮ್ಮೆಯ ಶ್ರೇಷ್ಠ ಪುತ್ರರು. ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿರುವುದು ಭಾರತೀಯರಿಗೆಲ್ಲರಿಗೂ ಮಾಡಿರುವ ಅವಹೇಳನ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಪೊನ್ನಂಪೇಟೆ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಐನಂಡ ಕೆ.ಮಂದಣ್ಣ ಮಾತನಾಡಿ, ವೀರ ಸೇನಾನಿಗಳಾದ ಫೀ.ಮಾ.ಕಾರ್ಯಪ್ಪ ಹಾಗೂ ಜ.ತಿಮ್ಮಯ್ಯ ಅವರನ್ನು ಅವಹೇಳನ ಮಾಡಿರುವುದು ಕೇವಲ ಜಿಲ್ಲೆಯ ಮಾಜಿ ಸೈನಿಕರಿಗೆ ಮಾತ್ರ ನೋವನ್ನುಂಟು ಮಾಡಿಲ್ಲ. ಬದಲಾಗಿ ದೇಶದ ಇಡೀ ಸೈನಿಕ ಸಮೂಹಕ್ಕೆ ಆಘಾತವನ್ನುಂಟು ಮಾಡಿದೆ ಎಂದು ಹೇಳಿದರು.
ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಮಾತನಾಡಿ, ವೀರಸೇನಾನಿಗಳನ್ನು ತನ್ನ ಅವಹೇಳನಕಾರಿ ಸಂದೇಶದ ಮೂಲಕ ತೇಜೋವಧೆ ಮಾಡಲು ಮುಂದಾದ ವ್ಯಕ್ತಿಯನ್ನು ಸಂಘ ಶಾಶ್ವತವಾಗಿ ಮಡಿಕೇರಿ ವಕೀಲರ ಅಮಾನತುಗೊಳಿಸುವ ನಿರ್ಧಾರ ತೆಗೆದುಕೊಳ್ಳಬೇಕು ಹಾಗೂ ಪೊಲೀಸರು ಆರೋಪಿಯ ವಿರುದ್ಧ ಕಠಿಣ ಕ್ರಮ
ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷ ಮಂಡುವಂಡ ಪಿ.ಮುತ್ತಪ್ಪ, ಕೊಡಗು
ಜ.ತಿಮ್ಮಯ್ಯ ಫೋರಂ, ಚೇರಂಬಾಣೆ, ಪೊನ್ನಂಪೇಟೆ, ಮೂರ್ನಾಡು, ಸೋಮವಾರಪೇಟೆ, ಮಡಿಕೇರಿ ಸೇರಿದಂತೆ ವಿವಿಧೆಡೆಗಳ ಕೊಡವ ಸಮಾಜಗಳು, ಸಿಎನ್ಸಿ, ಕೊಡವ
ಕರ್ನಾಟಕ ಮಾಜಿ ಸೈನಿಕ ಸಂಘದ ಅಧ್ಯಕ್ಷ ಡಾ.ಶಿವಣ್ಣ, ಕರ್ನಾಟಕ ಮಾಜಿ ಸೈನಿಕ ಸಂಘದ ಕೊಡಗು ಘಟಕದ ಕಾರ್ಯದರ್ಶಿ ಸಿ.ಜಿ.ತಿಮ್ಮಯ್ಯ, ಸಹ ಕಾರ್ಯದರ್ಶಿ ಎಂ.ಕೆ.ನಾಚಪ್ಪ, ಸಂಚಾಲಕರಾದ ನಾಟೋಳಂಡ ಸೋಮಯ್ಯ, ಫೀ.ಮಾ. ಕಾರ್ಯಪ್ಪ, ಜ.ತಿಮ್ಮಯ್ಯ ಫೋರಂ