ಆಪತ್ಕಾಲದಲ್ಲಿ ವಿಮೆಯೇ ರಕ್ಷಾ ಕವಚ

KannadaprabhaNewsNetwork |  
Published : Jun 29, 2026, 02:30 AM IST
ಹರಪನಹಳ್ಳಿ ತಾಲೂಕಿನ ಶಿಂಗ್ರಿಹಳ್ಳಿಯಲ್ಲಿ ಜನ ಸುರಕ್ಷಾ ಯೋಜನೆಗಳ ಸಂಪೂರ್ಣ ಅಭಿಯಾನ ಮಾಹಿತಿ ಶಿಬಿರದಲ್ಲಿ ಪ್ರಾದೇಶಿಕ ವ್ಯವಸ್ಥಾಪಕಿ ನಮಿತಾ ಸಾನ್ವಿಕರ್ ಅವರು ಫಲಾನುಭವಿಗೆ ಪಿಎಂಜಿಜಿ‌ಬಿವೈ ವಿಮೆಯ 2 ಲಕ್ಷ ಮೊತ್ತದ ಚೆಕ್‌ ವಿತರಿಸಿದರು. | Kannada Prabha

ಸಾರಾಂಶ

ಆಪತ್ಕಾಲದಲ್ಲಿ ವಿಮೆಯೇ ರಕ್ಷಾ ಕವಚವಾಗಿ ಕಾರ್ಯನಿರ್ವಹಿಸುತ್ತದೆ

ಹರಪನಹಳ್ಳಿ: ನಮ್ಮ ಬದುಕಿನಲ್ಲಿ ಎದುರಾಗುವ ಅವಘಡಗಳಿಂದ ನಮ್ಮನ್ನು ರಕ್ಷಿಸಿಕೊಳ್ಳಲು ವಿಮೆ ಮಾಡಿಸಿಕೊಳ್ಳುವುದು ಅಗತ್ಯ. ಆಪತ್ಕಾಲದಲ್ಲಿ ವಿಮೆಯೇ ರಕ್ಷಾ ಕವಚವಾಗಿ ಕಾರ್ಯನಿರ್ವಹಿಸುತ್ತದೆ ಎಂದು ಕರ್ನಾಟಕ ಗ್ರಾಮೀಣ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕಿ ನಮಿತಾ ಸಾನ್ವಿಕರ್ ಹೇಳಿದರು.

ತಾಲೂಕಿನ ಶಿಂಗ್ರಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ವತಿಯಿಂದ ನಡೆದ ಜನ ಸುರಕ್ಷಾ ಯೋಜನೆಗಳ ಸಂಪೂರ್ಣ ಅಭಿಯಾನ ಮಾಹಿತಿ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನಾವು ವಿಮೆ ಮಾಡಿಸಿಕೊಳ್ಳುವ ಜತೆಗೆ ಕುಟುಂಬದವರನ್ನೂ ವಿಮೆಗೆ ಒಳಪಡಿಸುವುದು ಅಗತ್ಯ. ಪ್ರತಿಯೊಬ್ಬರೂ ಪಿಎಂಎಸ್‌ಬಿವೈ ಮತ್ತು ಪಿಎಂಜೆಜೆಬಿವೈ ವಿಮೆಯನ್ನು ಮಾಡಿಸಿಕೊಳ್ಳಬೇಕು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳನ್ನು ಮಾಡಿಸುವ ಮೂಲಕ ಜನ ಸುರಕ್ಷಾ ಅಭಿಯಾನ ಪ್ರಯೋಜನ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಬ್ಯಾಂಕ್ ಗ್ರಾಹಕರು ಪ್ರಧಾನ್ ಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆ (ಪಿಎಂಜೆಜೆಬಿವೈ) ಅಡಿ ವಾರ್ಷಿಕವಾಗಿ 436 ವಿಮೆ ಮೊತ್ತ ಪಾವತಿಸಿದರೆ, ಪಾವತಿಸಿದ ವರ್ಷದ ಅವಧಿಯೊಳಗೆ ಅಕಾಲಿಕ ನಿಧನರಾದರೆ ಮೃತರ ವಾರಸುದಾರರಿಗೆ ₹2 ಲಕ್ಷ ಮೊತ್ತದ ವಿಮಾ ಪರಿಹಾರ ದೊರೆಯಲಿದೆ ಎಂದು ಹೇಳಿದರು.

ಪ್ರಧಾನ್ ಮಂತ್ರಿ ಸುರಕ್ಷಾ ಬಿಮಾ ಯೋಜನೆ (ಪಿಎಂಎಸ್‌ಬಿವೈ) ಸೇರಿ ಎರಡು ಮಹತ್ವದ ವಿಮಾ ಯೋಜನೆಗಳು ಕಡಿಮೆ ಪ್ರಿಮಿಯಮ್ ಮೊತ್ತದ್ದಾಗಿದ್ದು, ಗ್ರಾಹಕರು ಎರಡು ವಿಮಾ ಯೋಜನೆಗಳ ಬಗ್ಗೆ ಶಾಖೆಯ ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆದು ವಿಮೆ ಪಡೆಯಬಹುದಾಗಿದೆ ಎಂದು ಹೇಳಿದರು.

ಹಿರಿಯ ವ್ಯವಸ್ಥಾಪಕ ಜಗದೀಶ್ ಮಾತನಾಡಿ, ಬ್ಯಾಂಕಿನಲ್ಲಿ ಈಗಾಗಲೇ ಹಲವರು ವಿಮಾ ಯೋಜನೆಗೆ ನೋಂದಣಿ ಮಾಡಿಸಿಕೊಂಡಿದ್ದು, ಇಬ್ಬರು ಮೃತರ ಫಲಾನುಭವಿಗಳ ಕುಟುಂಬಕ್ಕೆ ₹2 ಲಕ್ಷ ಪರಿಹಾರ ವಿತರಿಸಲಾಗಿದೆ ಎಂದರು.

ಶಿಂಗ್ರಿಹಳ್ಳಿ ಶಾಖೆಯ ವ್ಯವಸ್ಥಾಪಕ ವಂಶಿ ಕೃಷ್ಣ, ಕೆನರಾ ಬ್ಯಾಂಕ್, ಗಿರಿ ಗೌಡ್ರು ಮತ್ತು ಸಹಕಾರ ಸಂಘದ ಸದಸ್ಯೆ ಫಕೀರಮ್ಮ ಅವರು ವಿಮೆ ಬಳಕೆ ಮತ್ತು ಕೆವೈಸಿ ಕಡ್ಡಾಯದ ಕುರಿತು ಮಾಹಿತಿ ನೀಡಿದರು.

ಅಪಘಾತದಲ್ಲಿ ಈಚೆಗೆ ನಿಧನರಾದ ಇಲ್ಲಿನ ಶಿಂಗ್ರಿಹಳ್ಳಿ ನಿವಾಸಿ ಅಜಮರ ದೇವಪ್ಪ ಹಾಗೂ ಜಂಭುಲಿಂಗನಹಳ್ಳಿ ನಿವಾಸಿ ದೇವಮ್ಮ ಅವರ ಕುಟುಂಬಕ್ಕೆ ಪ್ರಾದೇಶಿಕ ವ್ಯವಸ್ಥಾಪಕರಾದ ನಮಿತಾ ಸಾನ್ವಿಕರ್ ಅವರು ಪಿಎಂಜಿಜಿ‌ಬಿವೈ ವಿಮೆಯ ₹2 ಲಕ್ಷ ಮೊತ್ತದ ಚೆಕ್‌ ವಿತರಿಸಿದರು.

ಮುಖಂಡರಾದ ಹಾಲೇಶ್, ರಾಮಚಂದ್ರಪ್ಪ, ಬಿ. ಮಲ್ಲಿಕಾರ್ಜುನ, ಟಿ. ಶೇಖರಪ್ಪ, ಟಿ. ನಾಗರಾಜಪ್ಪ, ಸಿ. ಗೋಣಿಬಸಪ್ಪ, ಕೆ. ನಿಂಗಪ್ಪ, ಬಿ. ಮಂಜಪ್ಪ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಲಾರಂಗ 100ನೇ ಮನೆ ಶತಸ್ಕೃತಿ ಹಸ್ತಾಂತರ
ಆರೋಗ್ಯವಂತ ಮಕ್ಕಳು ಭವಿಷ್ಯದ ನಾಯಕರು: ಯಶ್ ಪಾಲ್