- ಬೇಸಾಯ ತಜ್ಞ ಬಿ.ಒ.ಮಲ್ಲಿಕಾರ್ಜುನ ಸಲಹೆ । ‘ಖೇತ್ ಬಚಾವ್ ಅಭಿಯಾನ’ ಕಾರ್ಯಕ್ರಮ - - -
ರೈತರು ಕೇವಲ ಏಕಬೆಳೆಗೆ ಮೊರೆಹೋಗದೆ ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡರೆ ಮಣ್ಣಿನ ಫಲವತ್ತತೆ ಹೆಚ್ಚಿಸಿಕೊಳ್ಳುವುದರ ಜೊತೆಗೆ ಸಾವಯವ ಹಾಗೂ ನೈಸರ್ಗಿಕ ಕೃಷಿ ಮಾಡಲು ಸಾಧ್ಯವಾಗುತ್ತದೆ ಎಂದು ದಾವಣಗೆರೆ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಬೇಸಾಯ ತಜ್ಞರಾದ ಮಲ್ಲಿಕಾರ್ಜುನ ಬಿ.ಒ. ಅಭಿಪ್ರಾಯಪಟ್ಟರು.
ತಾಲೂಕಿನ ದೊಣ್ಣೆಹಳ್ಳಿ, ಕಲೆದೇವರಪುರ, ಅರಸಿನಗುಂಡಿ ಹಾಗೂ ರಸ್ತೆಮಾಕುಂಟೆ ಗ್ರಾಮಗಳಲ್ಲಿ ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ಕೃಷಿ ಇಲಾಖೆ ಹಾಗೂ ಆತ್ಮ ಯೋಜನೆ ಜಗಳೂರು ಜಂಟಿ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಖೇತ್ ಬಚಾವ್ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಪರಿಸರ ಸಂರಕ್ಷಣೆ-ಮಣ್ಣಿನ ಸಮೃದ್ಧಿ:
ಇಳುವರಿ ಹೆಚ್ಚಳಕ್ಕೆ ಬೀಜೋಪಚಾರ ಅತ್ಯಗತ್ಯ:
ಇದೇ ವೇಳೆ ಪ್ರಾತ್ಯಕ್ಷಿಕೆ ಮೂಲಕ ತೊಗರಿ ಬೀಜಕ್ಕೆ ಪ್ರತಿ ಎಕರೆಗೆ 500 ಗ್ರಾಂ ಜೈವಿಕ ಗೊಬ್ಬರಗಳಾದ ರೈಸೋಬಿಯಂ, ರಂಜಕ ಕರಗಿಸುವ ಬ್ಯಾಕ್ಟೀರಿಯಾ ಹಾಗೂ ಪ್ರತಿ ಕೆಜಿ ಬೀಜಕ್ಕೆ 4 ಗ್ರಾಂ ಜೈವಿಕ ಪೀಡೆನಾಶಕ ಟ್ರೈಕೋಡರ್ಮ ಬಳಸಿ ಬೀಜೋಪಚಾರ ಮಾಡುವ ವಿಧಾನ ರೈತರಿಗೆ ಮನವರಿಕೆ ಮಾಡಿಕೊಡಲಾಯಿತು.
ಕೃಷಿ ಅಧಿಕಾರಿ ಜೀವಿತ ಮಾತನಾಡಿ, ಕೃಷಿ ಇಲಾಖೆಯಿಂದ ಸಿಗುವ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಇಲಾಖೆಯಿಂದ ಉಚಿತವಾಗಿ ವಿತರಿಸಲಾಗಿರುವ ತೊಗರಿ ಬಿತ್ತನೆ ಬೀಜಗಳನ್ನು ಸಮರ್ಪಕವಾಗಿ ಬಳಸಿ ಉತ್ತಮ ಬೆಳೆ ತೆಗೆಯುವಂತೆ ಕೋರಿದರು.
- - -
- ರೇಣುಕುಮಾರ್, ತಾಲೂಕು ಅಧಿಕಾರಿ, ಆತ್ಮ ಯೋಜನೆ.
-12ಜೆಜಿಎಲ್1:
ಜಗಳೂರು ತಾಲೂಕಿನ ದೊಣ್ಣೆಹಳ್ಳಿ, ಕಲೆದೇವರಪುರ, ಅರಸಿನಗುಂಡಿ ಹಾಗೂ ರಸ್ತೆಮಾಕುಂಟೆ ಗ್ರಾಮಗಳಲ್ಲಿ ‘ಖೇತ್ ಬಚಾವ್ ಅಭಿಯಾನ’ ಕಾರ್ಯಕ್ರಮ ನಡೆಯಿತು.