ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ತಾಲೂಕಿನ ಢವಳಗಿ ಗ್ರಾಮದಲ್ಲಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಆಯೋಜಿಸಿದ್ದ ರೈತರ ಸಭೆಯಲ್ಲಿ ಅವರು ಮಾತನಾಡಿದರು.
ಕೆಲವು ದಿನಗಳ ಹಿಂದೆ ಕೆಇಬಿ ಇಲಾಖೆಯ ವಿವಿಧ ಸಮಸ್ಯೆಗಳ ಕುರಿತು ರೈತ ಸಂಘ ಹೋರಾಟ ನಡೆಸಿದ ಸಂದರ್ಭದಲ್ಲಿ ಅಧಿಕಾರಿಗಳು ರೈತರ ಬೇಡಿಕೆಗಳನ್ನು ಶೀಘ್ರ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ ಒಂದು ತಿಂಗಳಿಗೂ ಹೆಚ್ಚು ಕಾಲ ಕಳೆದರೂ ಯಾವುದೇ ಮಹತ್ವದ ಕ್ರಮ ಕೈಗೊಳ್ಳದಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ ಎಂದವರು ಹೇಳಿದರು.ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿದ್ಯುತ್ ಮೂಲಸೌಕರ್ಯ ಬಲಪಡಿಸುವುದು ಅಗತ್ಯವಾಗಿದೆ. ಢವಳಗಿ ಉಪಕೇಂದ್ರದ ಮೇಲಿನ ಓವರ್ಲೋಡ್ ಸಮಸ್ಯೆ ನಿವಾರಣೆಗಾಗಿ ವನಹಳ್ಳಿ 110 ಕೆ.ವಿ. ಉಪಕೇಂದ್ರದಲ್ಲಿ ಹೆಚ್ಚುವರಿ 20 ಎಂ.ವಿ.ಎ. ಸಾಮರ್ಥ್ಯದ ಟ್ರಾನ್ಸ್ಫಾರ್ಮರ್ ಅಳವಡಿಸಬೇಕು. ಅಗಸಬಾಳ ಭಾಗದ ರೈತರಿಗೆ ಕಣಕಾಲ ಲೈನ್ನಿಂದ ಹಾಗೂ ಬಿದರಕುಂದಿ ಭಾಗದ ರೈತರಿಗೆ ಮುದ್ದೇಬಿಹಾಳ ಸ್ಟೇಷನ್ ಲೈನ್ನಿಂದ ಸಂಪರ್ಕ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ಸಭೆಯಲ್ಲಿ ಮಾತನಾಡಿದ ಬಸನಗೌಡ ಬಿರಾದಾರ, ಸಿದ್ದನಗೌಡ ಜಾಲಿಕಟ್ಟಿ ಹಾಗೂ ಜಾಕೀರ್ ಅವರು, ಅಗಸಬಾಳ, ಹಳ್ಳೂರ, ರೂಡಗಿ ಸೇರಿ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸಮಸ್ಯೆಗಳು ಪದೇ ಪದೆ ಎದುರಾಗುತ್ತಿವೆ. ಸುಟ್ಟ ಟ್ರಾನ್ಸ್ಫಾರ್ಮರ್ಗಳ ಬದಲಾವಣೆಯಲ್ಲಿ ವಿಳಂಬವಾಗುತ್ತಿದ್ದು, ರೈತರಿಗೆ ತೊಂದರೆಯಾಗುತ್ತಿದೆ. ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ ಎಂದು ಆರೋಪಿಸಿದರು.
ನಂತರ ರೈತರು ತಮ್ಮ ವಿವಿಧ ಬೇಡಿಕೆಗಳ ಮನವಿಯನ್ನು ಹೆಸ್ಕಾಂ ಬಸವ ಬಾಗೇವಾಡಿ ವಿಭಾಗದ ಇಇಇ ಸಿದ್ದರಾಮ ಬಿರಾದಾರ ಅವರಿಗೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಯುವ ಮುಖಂಡ ದೇವರಾಜ ಗುಂಡಕನಾಳ ನಾಗೂರ,ಮುದ್ದೇಬಿಹಾಳ ಹೆಸ್ಕಾಂ ಅಧಿಕಾರಿ ಆರ್.ಎನ್. ಹಾದಿಮನಿ, ಢವಳಗಿ ಹೆಸ್ಕಾಂ ಶಾಖಾಧಿಕಾರಿ ಭೀಮಣ್ಣ ಯಲಗೋಡ,ವಿದ್ಯುತ್ ಸ್ಟೇಷನ್ ಅಧಿಕಾರಿ ಸುನಂದಾ ಜಬಂಗಿ,ಆರ್ ಎಸ್ ಚಿತ್ತಾಪುರ,ಕ್ರೈಂ ಪಿಎಸ್ಐ ಆರ್.ಎಸ್. ಬಂಗಿ, ಪೊಲೀಸ್ ಸಿಬ್ಬಂದಿ, ರೈತ ಮುಖಂಡರು ಹಾಗೂ ವಿವಿಧ ಗ್ರಾಮಗಳ ರೈತರು ಉಪಸ್ಥಿತರಿದ್ದರು.