ಕನ್ನಡಪ್ರಭ ವಾರ್ತೆ ಪುತ್ತೂರು
ಉತ್ತಮ ಬೌಲರ್ ಆಗಿ ಬ್ರಹ್ಮಾವರ ಎಸ್ಎಂಸ್ ಕಾಲೇಜಿನ ಸ್ವರ್ಣ ಗೌರಿ, ಉತ್ತಮ ಬ್ಯಾಟರ್ ಆಗಿ ಆಳ್ವಾಸ್ ಕಾಲೇಜಿನ ಧನುಶ್ರೀ, ಉತ್ತಮ ಸರ್ವಾಂಗೀಣ ಆಟಗಾರಳಾಗಿ ಬ್ರಹ್ಮಾವರ ಎಸ್ಎಂಎಸ್ ಕಾಲೇಜಿನ ಲಕ್ಷ್ಮೀ ಅವರು ಆಯ್ಕೆಯಾದರು.
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ.ಜೆರಾಲ್ಡ್ ಸಂತೋಷ್ ಡಿಸೋಜ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು. ಫಿಲೋಮಿನಾ ಕಾಲೇಜಿನ ಉಪ ಪ್ರಾಂಶುಪಾಲ ಡಾ.ವಿಜಯ ಕುಮಾರ್ ಮೊಳೆಯಾರ್ ಮಾತನಾಡಿ, ಓಗಾಗಲೇ ಐಪಿಎಲ್ ಪಂದ್ಯಾಟ ನಡೆಯುತ್ತಿದೆ. ಕ್ರಿಕೆಟ್ನಲ್ಲಿ ಸಾಧನೆ ಮಾಡಬೇಕಾದರೆ ಬದ್ಧತೆ ಬಹಳ ಮುಖ್ಯ. ಕ್ರಿಕೆಟ್ನಲ್ಲಿ ಸಚಿನ್ ತೆಂಡೂಲ್ಕರ್ರವರು ನಮ್ಮ ಮುಂದೆ ದಂತಕತೆಯಾಗಿ ಬೆಳೆದು ನಿಂತಿದ್ದಾರೆ. ಕಠಿಣ ಪರಿಶ್ರಮ ಮತ್ತು ಬದ್ಧತೆ ಇದ್ದಾಗ ಸಾಧನೆ ಮಾಡಲು ಸಾಧ್ಯ ಎಂದರು.ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಡಾ.ಪ್ರಸನ್ನ, ಕ್ರಿಕೆಟ್ ಪಂದ್ಯಾಟದ ವೀಕ್ಷಕ ಡಾ.ಪೊಡಿಯ ಉಪಸ್ಥಿತರಿದ್ದರು. ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಸ್ವಾಗತಿಸಿ, ವಿಜೇತರ ಪಟ್ಟಿ ವಾಚಿಸಿದರು. ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯ ಸಹಕರಿಸಿದರು.