ಅಂತರ ಗ್ರಾಮ ಹಾಕಿ: ಬಲ್ಲಮಾವಟಿ ತಂಡಕ್ಕೆ ಪ್ರಶಸ್ತಿ

KannadaprabhaNewsNetwork |  
Published : Dec 26, 2023, 01:32 AM IST
5-ಎನ್ಪಿ ಕೆ-3.ಬಲ್ಲಮಾವಟಿಗ್ರಾಮ ಪಂಚಾಯಿತಿ ವತಿಯಿಂದ ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಸಂಜೀವಿನಿ ಒಕ್ಕೂಟಗಳ ಸಂಯುಕ್ತಆಶ್ರಯದಲ್ಲಿ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಅಂತರಗ್ರಾಮ ಹಾಕಿ ಪಂದ್ಯಾವಳಿಯಅಂತಿಮ ಪಂದ್ಯದಲ್ಲಿ ಬಲ್ಲಮಾವಟಿ ತಂಡವು (ವಿನ್ನರ್ಸ್)ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು .25-ಎನ್ಪಿ ಕೆ-4.ಬಲ್ಲಮಾವಟಿಗ್ರಾಮ ಪಂಚಾಯಿತಿ ವತಿಯಿಂದ ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಸಂಜೀವಿನಿ ಒಕ್ಕೂಟಗಳ ಸಂಯುಕ್ತಆಶ್ರಯದಲ್ಲಿ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಅಂತರಗ್ರಾಮ ಹಾಕಿ ಪಂದ್ಯಾವಳಿಯಅಂತಿಮ ಪಂದ್ಯದಲ್ಲಿ ನೆಲಜಿ –ಎ ತಂಡ (ರನ್ನರ್ಸ್) ದ್ವಿತೀಯ ಸ್ಥಾನತನ್ನದಾಗಿಸಿಕೊಂಡಿತು.  | Kannada Prabha

ಸಾರಾಂಶ

ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಅಂತರ ಗ್ರಾಮ ಹಾಕಿ ಟೂರ್ನಮೆಂಟ್‌ ನಡೆಯಿತು. ಈ ಟೂರ್ನಿಯಲ್ಲಿ ಬಲ್ಲಮಾವಟಿ ತಂಡವು ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಕನ್ನಡಪ್ರಭ ವಾರ್ತೆ ನಾಪೋಕ್ಲು

ಇಲ್ಲಿಗೆ ಸಮೀಪದ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವತಿಯಿಂದ ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಸಂಜೀವಿನಿ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಭಾನುವಾರ ನೇತಾಜಿ ಪ್ರೌಢಶಾಲೆಯ ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಗ್ರಾಮೀಣ ಕ್ರೀಡಾಕೂಟ ಹಾಗೂ ಅಂತರಗ್ರಾಮ ಹಾಕಿ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಬಲ್ಲಮಾವಟಿ ತಂಡವು ಪ್ರಶಸ್ತಿ ಮುಡಿಗೇರಿಸಿಕೊಂಡಿತು.

ಅಂತಿಮ ಪಂದ್ಯದಲ್ಲಿ ನೆಲಜಿ –ಎ ತಂಡದ ವಿರುದ್ಧ ಆಟವಾಡಿದ ಬಲ್ಲಮಾವಟಿ ತಂಡವು 1-0 ಅಂತರದಿಂದ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಪೇರೂರು-ಎ ತಂಡ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು. ಹಾಕಿ ಪಂದ್ಯಾವಳಿಯಲ್ಲಿ ವಿಜೇತ ತಂಡಕ್ಕೆ ಕಾಫಿ ಬೆಳೆಗಾರ ಮೂವೇರ ನಾಣಪ್ಪ ನೀಡಿದ ರೋಲಿಂಗ್ ಟ್ರೋಫಿ ಹಾಗೂ ಅಪ್ಪಚೆಟ್ಟೋಳಂಡ ಕುಟುಂಬ ನೀಡಿದ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು. ದ್ವಿತೀಯ ಸ್ಥಾನ ಪಡೆದ ನೆಲಜಿ-ಎ ತಂಡಕ್ಕೆ ಮೂವೇರ ನಾಣಪ್ಪ ನೀಡಿದ ನಗದು ಬಹುಮಾನವನ್ನು ನೀಡಿ ಪುರಸ್ಕರಿಸಲಾಯಿತು.

ವಿವಿಧ ಗ್ರಾಮಗಳ ಮಹಿಳೆಯರಿಗಾಗಿ ಏರ್ಪಡಿಸಲಾಗಿದ್ದ ಹಗ್ಗ ಜಗ್ಗಾಟದ ಪಂದ್ಯದ ಅಂತಿಮ ಸ್ಪರ್ಧೆಯಲ್ಲಿ ಬಲ್ಲಮಾವಟಿ ತಂಡವು ಪ್ರಶಸ್ತಿ ಗಳಿಸಿತು. ದೊಡ್ಡಪುಲಿಕೋಟು ತಂಡವು ದ್ವಿತೀಯ ಬಹುಮಾನ ಪಡೆದುಕೊಂಡಿತು.

ಇವರಿಗೆ ನೆರವಂಡ ಅಪ್ಪಣ್ಣ ನೀಡಿದ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು. ಪೇರೂರು- ಎ ತಂಡವು ದ್ವಿತೀಯ ಬಹುಮಾನವನ್ನು ಪಡೆದುಕೊಂಡಿತು. ಈ ತಂಡಕ್ಕೆ ನೆರವಂಡ ದರ್ಶನ್ ನೀಡಿದ ನಗದು ಬಹುಮಾನ ನೀಡಿ ಪುರಸ್ಕರಿಸಲಾಯಿತು.

ಅಂತರ ಗ್ರಾಮ ಹಾಕಿ ಟೂರ್ನಿಯಲ್ಲಿ ಏಳು ತಂಡಗಳು ಹಾಗೂ ಮಹಿಳೆಯರ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಐದು ತಂಡಗಳು ಪಾಲ್ಗೊಂಡಿದ್ದವು. ಹಾಕಿ ಟೂರ್ನಿಯ ತೀರ್ಪುಗಾರರಾಗಿ ಹಾಕಿ ಕೂರ್ಗ್ ನ ತೀರ್ಪುಗಾರರಾದ ಕರವಂಡ ಅಪ್ಪಣ್ಣ ತಂಡ ಕಾರ್ಯ ನಿರ್ವಹಿಸಿದರು. ಟೂರ್ನಿಯ ಉತ್ತಮ ಆಟಗಾರ ಪ್ರಶಸ್ತಿಯನ್ನು ಅಪ್ಪಚೆಟ್ಟೋಳಂಡ ಅಯ್ಯಪ್ಪ ಪಡೆದುಕೊಂಡರು. ಅಪ್ಪಚೆಟ್ಟೋಳಂಡ ಅಯ್ಯಪ್ಪ, ತಾಪಂಡ ಅಪ್ಪಣ್ಣ ಟೂರ್ನಿಯ ಯಶಸ್ಸಿಗೆ ಸಹಕರಿಸಿದರು.

ಅತಿಥಿಗಳಾಗಿ ನೇತಾಜಿ ವಿದ್ಯಾಸಂಸ್ಥೆಯ ಅಧ್ಯಕ್ಷ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ, ಪ್ರಮುಖರಾದ ನೆರವಂಡ ಬೇಬಿ ಈರಪ್ಪ, ನೆರವಂಡ ಮೀರಾ ಮಂದಣ್ಣ ಪಾಲ್ಗೊಂಡರು.

ಬಲ್ಲಮಾವಟಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆ ಎಂ.ಪಿ.ಶಾಂತಿ, ಮಾಜಿ ಅಧ್ಯಕ್ಷ ಮಣವಟ್ಟಿರ ಹರೀಶ್ ಕುಶಾಲಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಮಚ್ಚುರ ರವೀಂದ್ರ, ಮುಕ್ಕಾಟಿರ ಸುತನ್ ಸುಬ್ಬಯ್ಯ, ಬಾಳೆಯಡ ದೀನಾ ಮಾಯಮ್ಮ, ಗ್ರಾಮೀಣ ಕ್ರೀಡಾಕೂಟದ ಅಧ್ಯಕ್ಷ ಬಾಬಿ ಭೀಮಯ್ಯ, ಪಿಡಿಒ ಶರತ್ ಪೂಣಚ್ಚ, ಟ್ರೋಫಿ ದಾನಿಗಳಾದ ಮೂವೇರ ಸಿ.ನಾಣಪ್ಪ, ಮಂಡಿರ ಜಯದೇವಯ್ಯ ಗ್ರಾಮಸ್ಥರು ಪಾಲ್ಗೊಂಡಿದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ