ಕನ್ನಡಪ್ರಭ ವಾರ್ತೆ ಹರಪನಹಳ್ಳಿ
ಈ ಕುರಿತು ಮಾಹಿತಿ ನೀಡಿರುವ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಆರ್. ಗಂಗಪ್ಪ, ತಾಲೂಕಿನಲ್ಲಿ 253 ಮತಗಟ್ಟೆಗಳಿದ್ದು, ಒಂದು ಮತ ಗಟ್ಟೆಗೆ ಒಬ್ಬ ಗಣತಿದಾರರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದರು.
ಗಣತಿದಾರರ ಮೇಲೆ ಮೇಲ್ವಿಚಾರಕರು ಇರುತ್ತಾರೆ, ಸಮೀಕ್ಷಾ ಕಾರ್ಯ ಸುಗಮವಾಗಿ ನಡೆಯಲು ತಾಲೂಕು ಮಟ್ಟದ ಸಮಿತಿ ರಚನೆ ಮಾಡಲಾಗಿದ್ದು, ಅದರಲ್ಲಿ ಉಪವಿಭಾಗಾಧಿಕಾರಿಗಳು ಅಧ್ಯಕ್ಷರಾಗಿರುತ್ತಾರೆ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಗಳು, ತಹಶೀಲ್ದಾರರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಪುರಸಭಾ ಮುಖ್ಯಾಧಿಕಾರಿಗಳು, ಕ್ಷೇತ್ರಶಿಕ್ಷಣಾಧಿಕಾರಿ ಸದಸ್ಯರಾಗಿರುತ್ತಾರೆ. ಎಲ್ಲಾ ಗಣತಿದಾರರಿಗೆ ತರಬೇತಿ ನೀಡಲಾಗಿದ್ದು, ಸೋಮವಾರ ಮಾಜಿ ಸಚಿವ ದಿ.ಡಿ. ನಾರಾಯಣದಾಸ ಅವರ ನಿವಾಸಕ್ಕೆ ತೆರಳಿ ಗಣಿತಿಗೆ ಚಾಲನೆ ನೀಡಲಾಯಿತು ಎಂದು ಹೇಳಿದರು.ಈ ಸಂದರ್ಭ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಆರ್. ಗಂಗಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಲೇಪಾಕ್ಷಪ್ಪ, ಮಾಸ್ಟರ್ ತರಬೇತುದಾರ ಅಜ್ಜಯ್ಯ, ಗಣತಿದಾರ ಜಮೀರ ಅಹ್ಮದ್ ಖಾನ್, ಅಧೀಕ್ಷಕಿ ಯಾಸ್ಮೀನ್ ಹಾಜರಿದ್ದರು.ಜಾತಿಗಣತಿಯಲ್ಲಿ ಪರಿಶಿಷ್ಟ ಜಾತಿ ಎಂದು ಸ್ಪಷ್ಟವಾಗಿ ದಾಖಲಿಸಿ:
ಬಳ್ಳಾರಿ ಜಿಲ್ಲೆಯ ಅಲೆಮಾರಿ ಪರಿಶಿಷ್ಟ ಜಾತಿಯ ಪಟ್ಟಗೆ ಸೇರಿರುವ ಸಿಂದೋಳು, ಬೇಡ, ಬುಡ್ಗ, ದಕ್ಕಲಿಗ, ಹಂಡಿಜೋಗಿ, ಸಿಳ್ಳೇಕ್ಯಾತ, ದೊಂಬರು, ಚನ್ನಬಾಸರು, ಸುಡುಗಾಡುಸಿದ್ದ ಜನರ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯ ಔದ್ಯೋಗಿಕ ಪ್ರಾತಿನಿಧ್ಯತೆ ಮತ್ತಿತರ ಸ್ಥಿತಿಗತಿಗಳ ಬಗ್ಗೆ ಸಮೀಕ್ಷೆ ಮಾಡುವುದು ಆಯೋಗದ ಉದ್ದೇಶವಾಗಿದೆ. ದತ್ತಾಂಶ ಸಂಗ್ರಹ ಮಾಡುವುದರಿಂದ ಅಲೆಮಾರಿ ಪರಿಶಿಷ್ಟ ಜಾತಿಗೆ ಸೇರಿರುವ ಈ ಸಮೂದಾಯಗಳ ಜನಾಂಗದ ಜನಸಂಖ್ಯೆ ಎಷ್ಟು ಇದೆ ಎಂಬ ಮಾಹಿತಿ ಸರ್ಕಾರದ ಗಮನಕ್ಕೆ ಹೋಗುತ್ತದೆ.ಯಾವುದೇ ಕುಟುಂಬಗಳು ಬಿಟ್ಟು ಹೋಗದಂತೆ ಸಮೀಕ್ಷೆ ಮಾಡುವುದು ಮುಖ್ಯವಾಗಿದೆ. ನಮ್ಮ ಸಂಘದ ರಾಜ್ಯ ಪದಾಧಿಕಾರಿಗಳು ಜಿಲ್ಲಾ, ತಾಲೂಕು, ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಮುಖಂಡರು, ಖಜಾಂಚಿ, ಸಮಾಜದ ಕುಲಬಾಂಧವರು ಈ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಬೇಕೆಂದು ಹೇಳಿದರು.