ಕನ್ನಡಪ್ರಭ ವಾರ್ತೆ ದಾವಣಗೆರೆ
ಒಳ ಮೀಸಲಾತಿ ನೀಡಲು ರಾಜ್ಯ ಸರ್ಕಾರಕ್ಕೆ ಇದ್ದ ಅಡ್ಡಿ ಆತಂಕಗಳು ನಿವಾರಣೆಯಾಗಿವೆ. ಈ ಹಿನ್ನೆಲೆಯಲ್ಲಿ ಕಾನೂನು ತಜ್ಞರ ಜೊತೆಗೆ ಚರ್ಚಿಸಿ, ಪರಿಶಿಷ್ಟ ಜಾತಿಗೆ ಒಳ ಮೀಸಲಾತಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸುವ ವಿಶ್ವಾಸವಿದೆ. ಸಾಮಾಜಿಕ ನ್ಯಾಯ ಎತ್ತಿ ಹಿಡಿಯುವ ಕೆಲಸವನ್ನು ಸುಪ್ರೀಂ ಕೋರ್ಟ್ನ ತೀರ್ಪು ಮಾಡಿದೆ. ಅದನ್ನು ಜಾರಿಗೊಳಿಸುವ ಕೆಲಸವನ್ನು ರಾಜ್ಯ ಸರ್ಕಾರ ಈಗ ಮಾಡಲಿ ಎಂದು ಹೇಳಿದರು.
ಶೈಕ್ಷಣಿಕ, ಆರ್ಥಿಕವಾಗಿ ತುಳಿತಕ್ಕೊಳಗಾದ ಸಮಾಜ ನಮ್ಮದು. ನಮ್ಮ ಸಮಾಜದಲ್ಲೇ ಒಳ ಪಂಗಡಗಳು ಇವೆ. ಈ ತೀರ್ಪು ಅಂತಹವರಿಗೂ ಅನ್ವಯಿಸಲಿದೆ. ಸುಪ್ರೀಂ ಕೋರ್ಟ್ನ ನ್ಯಾಯಾಧೀಶರು ಸುಧೀರ್ಘ 565 ಪುಟಗಳನ್ನು ಒಳಗೊಂಡ ಐತಿಹಾಸಿಕ ತೀರ್ಪನ್ನು ನೀಡಿದ್ದಾರೆ. ಎಂದು ತಿಳಿಸಿದರು. ಸಮಾಜದ ಮುಖಂಡ ಜಯಪ್ರಕಾಶ ಮಾತನಾಡಿ, ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ನೀಡಬೇಕೆಂಬ ಹೋರಾಟಕ್ಕೆ, ಕೂಗಿಗೆ ಕೊನೆಗೂ ನ್ಯಾಯ ಸಿಕ್ಕಂತಾಗಿದೆ. ಸುಪ್ರೀಂ ಕೋರ್ಟ್ನ ನ್ಯಾಯಾಧೀಶರನ್ನು ಒಳಗೊಂಡ ನ್ಯಾಯ ಪೀಠದ ತೀರ್ಪನ್ನು ನಮ್ಮ ಛಲವಾದಿ ಸಮಾಜವು ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ತಳ ಸಮುದಾಯವನ್ನು ಗುರುತಿಸಿ, ನ್ಯಾಯಬದ್ಧ ಸಾಂವಿಧಾನಿಕ ತೀರ್ಪು ನೀಡಲಾಗಿದೆ. ಈ ತೀರ್ಪು ನಮಗೆಲ್ಲರಿಗೂ ಸಂತೋಷ ತಂದಿದೆ ಎಂದರು.ಸಮಾಜದ ಹಿರಿಯ ಮುಖಂಡ, ನಿವೃತ್ತ ಅಧಿಕಾರಿ ಎಸ್. ಶೇಖರಪ್ಪ ಮಾತನಾಡಿ, ವಿಧಾನ ಪರಿಷತ್ನ ವಿಪಕ್ಷ ನಾಯಕರಾಗಿ ಛಲವಾದಿ ಸಮಾಜದ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿರುವ ಬಿಜೆಪಿ ರಾಜ್ಯ, ರಾಷ್ಟ್ರೀಯ ನಾಯಕರಿಗೆ ಅಭಿನಂದಿಸುತ್ತೇವೆ. ನಾರಾಯಣ ಸ್ವಾಮಿ ಸಹ ತಮಗೆ ವಹಿಸಿದ ಜವಾಬ್ಧಾರಿಯನ್ನು ಪ್ರಾಮಾಣಿಕವಾಗಿ ನಿರ್ವಹಿಸಲಿ. ಅಷ್ಟೇ ಅಲ್ಲ, ಸಮಾಜಕ್ಕೆ ಅನ್ಯಾಯವಾದಾಗ ಪಕ್ಷಾತೀತವಾಗಿ, ನಿಷ್ಟುರವಾಗಿ ಸಮಾಜದ ಪರ ಧ್ವನಿ ಎತ್ತುವ ಮೂಲಕ ಸಮಾಜದ ಬೆನ್ನಿಗೆ ನಿಲ್ಲಬೇಕು ಎಂದು ಹೇಳಿದರು.