ಮೇ ೨೨ಕ್ಕೆ ಅಂತರಾಷ್ಟ್ರೀಯ ಜೀವ ವೈವಿಧ್ಯತಾ ಅಭಿಯಾನ

KannadaprabhaNewsNetwork |  
Published : May 06, 2025, 12:22 AM IST
ಫೋಟೋ ಮೇ.೫ ವೈ.ಎಲ್.ಪಿ. ೦೪ | Kannada Prabha

ಸಾರಾಂಶ

ಮೇ ೨೨ರಂದು ತಾಲೂಕಿನ ಆನಗೋಡಿನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು.

ಯಲ್ಲಾಪುರ: ಪಶ್ಚಿಮ ಘಟ್ಟದ ಗ್ರಾಮಭೂಮಿ ಸಂರಕ್ಷಣೆಗಾಗಿ ಪಾರಂಪರಿಕ ಬೆಟ್ಟ, ಕಾನು, ದೇವರ ಕಾಡು, ಗೋಮಾಳ ಸೇರಿದಂತೆ ಜೀವವೈವಿಧ್ಯದ ಉಳಿವಿಗಾಗಿ ಮಲೆನಾಡಿನ ರೈತರ ಸಾಮೂಹಿಕ ನೈಸರ್ಗಿಕ ಸಂಪತ್ತಿನ ಸುಸ್ಥಿರ ಅಭಿವೃದ್ಧಿಗಾಗಿ ವೃಕ್ಷಲಕ್ಷ ಆಂದೋಲನ ಜಿಲ್ಲಾ ಅಡಿಕೆ, ಸಾಂಬಾರು, ಬೆಳೆಗಾರರ ಸಂಘ, ಕದಂಬ ಸಾವಯವ ಸಂಸ್ಥೆ, ಜಿಲ್ಲಾ ಸಾವಯವ ರೈತ ಒಕ್ಕೂಟ, ಟಿಎಂಎಸ್, ವೃಕ್ಷಲಕ್ಷ ಆಂದೋಲನಗಳ ಸಂಯುಕ್ತ ಆಶ್ರಯದಲ್ಲಿ ಜಾಗೃತಿ ಅಭಿಯಾನ ನಡೆಸಲು ನಿರ್ಣಯಿಸಲಾಗಿದೆ ಎಂದು ವೃಕ್ಷಲಕ್ಷ ಆಂದೋಲನದ ಅಣಮತ ಹೆಗಡೆ ಅಶಿಸರ ಹೇಳಿದರು.ಜಾಗೃತಿ ಅಭಿಯಾನದ ರೂಪುರೇಷೆ ವಿವರಿಸಿದ ಅವರು, ಮೇ ೨೨ರಂದು ತಾಲೂಕಿನ ಆನಗೋಡಿನಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಅಂತರಾಷ್ಟ್ರೀಯ ಜೀವ ವೈವಿಧ್ಯತಾ ದಿನಾಚರಣೆಯ ಪ್ರಯುಕ್ತ ಈ ಅಭಿಯಾನ ನಡೆಯಲಿದ್ದು, ಯಲ್ಲಾಪುರದಲ್ಲಿ ಅರ್ಥಪೂರ್ಣವಾಗಿ ನಡೆಯುತ್ತದೆಯೆಂಬ ವಿಶ್ವಾಸ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಟಿ.ಎಂ.ಎಸ್. ಅಧ್ಯಕ್ಷ ಎನ್.ಕೆ.ಭಟ್ಟ ಅಗ್ಗಾಶಿಕುಂಬ್ರಿ ಮಾತನಾಡಿ, ಕೆನರಾ ಪ್ರಿವಲೇಜ್ ಅಡಿಯಲ್ಲಿ ಜಿಲ್ಲೆಯ ೫೩೦೦೦ ಹೆಕ್ಟೇರ್ ಅರಣ್ಯ ಪ್ರದೇಶ, ಬೆಟ್ಟ ಸ್ವಾತಂತ್ರ್ಯ ಪೂರ್ವದಿಂದ ಇದ್ದು, ಇದು ೧೯೮೦ರ ಅರಣ್ಯ ಕಾಯ್ದೆಯಡಿ ಬರುವ ಬೆಟ್ಟ ಅಡಿಕೆ ಬೆಳೆಗಾರರ ನಿರ್ವಹಣೆಯಲ್ಲಿದೆ. ಕಂದಾಯ ಮತ್ತು ಅರಣ್ಯ ಇಲಾಖೆಗಳ ಜಂಟಿ ಅಧಿಕಾರವಿದ್ದರೂ ಜಿಲ್ಲೆಯ ಬೆಟ್ಟಗಳ ಮೇಲೆ ಅರಣ್ಯ ಇಲಾಖೆಯದೇ ಹೆಚ್ಚಿನ ಜವಾಬ್ದಾರಿಯಿದೆ. ಇಂತಹ ಬೆಟ್ಟಗಳಲ್ಲಿ ಸಂರಕ್ಷಣೆಯ ಉದ್ದೇಶದಿಂದ ಕಾಫಿ ಬೆಳೆಯುವ ಕುರಿತಂತೆ ರೈತರು ಚಿಂತಿಸಬೇಕಾಗಿದೆ ಎಂದರು.

ರವಿ ಭಟ್ಟ ಬರಗದ್ದೆ ಮಾತನಾಡಿ, ಬೆಟ್ಟಗಳಲ್ಲಿ ಯಾವುದೇ ಬಗೆಯ ಹಣ್ಣು-ಹಂಪಲು ಬೆಳೆದರೂ ವನ್ಯಜೀವಿಗಳ ಕಾಟ ಮಿತಿಮೀರಿದೆ. ನಮ್ಮ ಪ್ರದೇಶದಲ್ಲಿ ಅವುಗಳ ನಿರ್ವಹಣೆ ಬಲು ಕಷ್ಟ ಎಂದರು.

ಕದಂಬ ಸಂಸ್ಥೆಯ ಪ್ರಮುಖ ವಿಶ್ವೇಶ್ವರ ಭಟ್ಟ, ಯಡಳ್ಳಿ ಸೇ.ಸ.ಸಂಘದ ಅಧ್ಯಕ್ಷ ಜಿ.ಆರ್.ಹೆಗಡೆ ಬೆಳ್ಳೇಕೇರಿ, ತಾಲೂಕು ರೈತ ಸಂಘದ ಅಧ್ಯಕ್ಷ ನಾಗೇಶ ಹೆಗಡೆ ಪಣತಗೇರಿ, ಗಣಪತಿ ಬಿಸಲಕೊಪ್ಪ, ದತ್ತಾತ್ರೇಯ ಬೊಳಗುಡ್ಡೆ ಇದ್ದರು. ಕೆ.ಎಸ್.ಭಟ್ಟ ಸ್ವಾಗತಿಸಿದರು. ನರಸಿಂಹ ಸಾತೊಡ್ಡಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ 2 ದಿನ ಮೋಡಕವಿದ ವಾತಾವರಣ, ಮಳೆ
ಜಾಲಹಳ್ಳಿ ಕೆಳಸೇತುವೆ ನಿರ್ಮಾಣ ಸಂಬಂಧ ಶಾಸಕರ ಸಭೆ-ಮಿ. ಮುನಿ ಪ್ರಶ್ನೆಗೆ ಉತ್ತರಿಸಲ್ಲ: ಡಿಸಿಎಂ