ನಾಗಮಂಗಲ:
ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಸುಮಾರು 14 ವಿವಿಧ ಧರ್ಮಗಳನ್ನು ಪ್ರತಿನಿಧಿಸಿದ ಧಾರ್ಮಿಕ ನಾಯಕರು ಭಾಗವಹಿಸಿ ವಿಶ್ವಶಾಂತಿ, ಮಾನವೀಯತೆ, ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಸಹಬಾಳ್ವೆಯ ಕುರಿತು ತಮ್ಮ ಸಂದೇಶ ಹಂಚಿಕೊಂಡರು.
ಡಾ.ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ಧರ್ಮ, ದೇಶ, ಭಾಷ, ಸಂಸ್ಕೃತಿ ಹಾಗೂ ವಿವಿಧ ನಂಬಿಕೆಗಳ ವೈವಿಧ್ಯತೆಯನ್ನು ಗೌರವಿಸುವುದರ ಜೊತೆಗೆ, ಇಡೀ ಮಾನವಕುಲ ಒಂದೇ ಎಂಬ ಅರಿವು ಮತ್ತು ಭಾವನೆಯನ್ನು ಬೆಳೆಸುವ ಅಗತ್ಯವಿದೆ ಎಂದರು.ವಿಭಿನ್ನ ಧರ್ಮಗಳ ನಾಯಕರು ಒಂದೇ ವೇದಿಕೆಯಲ್ಲಿ ಒಟ್ಟಾಗಿ ಸೇರಿ ಒಂದು ಜಗತ್ತು ಒಂದು ಮಾನವಕುಲ ಎಂಬ ಸಾರ್ವತ್ರಿಕ ಸಂದೇಶವನ್ನು ಸಾರಿರುವುದು ವಿಶ್ವ ಸಾಮರಸ್ಯದ ದೃಷ್ಟಿಯಿಂದ ಮಹತ್ವದ ಹೆಜ್ಜೆಯಾಗಿದೆ. ಮಾನವ ಸಮಾಜವು ವಿಭಜನೆಗಳನ್ನು ಮೀರಿ ಪ್ರೀತಿ, ಕರುಣೆ, ಪರಸ್ಪರ ಗೌರವ ಮತ್ತು ಸಹಕಾರದೊಂದಿಗೆ ಮುನ್ನಡೆಯಬೇಕು. ಧರ್ಮಗಳು ಮಾನವೀಯತೆ ಬೆಸೆಯುವ ಸೇತುವೆಗಳಾಗಬೇಕು ಎಂಬ ಆಶಯ ಸಮ್ಮೇಳನದಲ್ಲಿ ಪ್ರತಿಧ್ವನಿಸಿತು.
ಗೆಜ್ಜಲಗೆರೆ ಗ್ರಾಪಂ ಆಗಿ ಉಳಿಸಲು ಸಿಎಂ, ಅಧಿಕಾರಿಗಳ ಬಳಿ ಚರ್ಚೆ: ಕೆ.ಎಂ.ಉದಯ್
ಗೆಜ್ಜಲಗೆರೆ ಗ್ರಾಪಂ ನಗರಸಭೆಗೆ ಸೇರ್ಪಡೆ ಖಂಡಿಸಿ ಗ್ರಾಪಂ ಕಚೇರಿ ಎದುರು 251 ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಶಾಸಕರು 2ನೇ ಬಾರಿಗೆ ಭೇಟಿ ನೀಡಿ ಪ್ರತಿಭಟನಾ ನಿರತರೊಂದಿಗೆ ಮಾತನಾಡಿದರು.ಇನ್ನೊಂದು ವಾರದೊಳಗೆ ವಿಧಾನಸೌಧದಲ್ಲಿ ಅಧಿಕಾರಿಗಳು ಮತ್ತು ಗ್ರಾಮದ ಕೆಲವು ಪ್ರಮುಖ ಹೋರಾಟಗಾರರ ಜೊತೆಗೆ ಸಭೆ ನಡೆಸಲಾಗುವುದು. ಗ್ರಾಪಂ ನಗರಸಭೆಯಾದರೂ ಅಭಿವೃದ್ಧಿಯಲ್ಲಿ ತಾರತಮ್ಯ ಮಾಡುವುದಿಲ್ಲ. ಇನ್ನು ಎರಡು ವರ್ಷಗಳಲ್ಲಿ ಎಷ್ಟು ಸಾಧ್ಯವೋ ಅಷ್ಟು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುವುದು ಎಂದರು.