ಇಂದು, ನಾಳೆ ಅಂತಾರಾಷ್ಟ್ರೀಯ ಸಮ್ಮೇಳನ

KannadaprabhaNewsNetwork |  
Published : Jun 26, 2026, 03:30 AM IST
ಎಂಆರ್ಎನ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜೂ.26 ಮತ್ತು 27ರಂದು ಎಂಆರ್ಎನ್ ಜ್ಞಾನಸಂಕೀರ್ಣ ಅಂತಾರಾಷ್ಟ್ರೀಯ ಸಮ್ಮೇಳನ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬಾಗಲಕೋಟೆನಗರದ ಎಂಆರ್ ಎನ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜೂ.26 ಮತ್ತು 27ರಂದು ಎಂಆರ್ ಎನ್ ಜ್ಞಾನಸಂಕೀರ್ಣ ಅಂತಾರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಶಿವಕುಮಾರ ಗಂಗಾಲ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ನಗರದ ಎಂಆರ್ ಎನ್ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಜೂ.26 ಮತ್ತು 27ರಂದು ಎಂಆರ್ ಎನ್ ಜ್ಞಾನಸಂಕೀರ್ಣ ಅಂತಾರಾಷ್ಟ್ರೀಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಶಿವಕುಮಾರ ಗಂಗಾಲ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಜೂ.26ರಂದು ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮವನ್ನು ರಾಜೀವಗಾಂಧಿ ಆರೋಗ್ಯ ವಿವಿ ಕುಲಪತಿ ಡಾ.ಬಿ.ಸಿ.ಭಗವಾನ ಅವರು ಉದ್ಘಾಟಿಸಲಿದ್ದು, ಮಾಜಿ ಸಚಿವ ಮುರುಗೇಶ ನಿರಾಣಿ, ವಿವಿಯ ಅಧ್ಯಯನ ಮಂಡಳಿ ಸದಸ್ಯರಾದ ಸಿದ್ದನಗೌಡ ಪಾಟೀಲ, ಡಾ.ಡಿ.ವಿ.ಲೀಲಾಧರ, ಸಂಸ್ಥೆಯ ಅಧ್ಯಕ್ಷೆ ಮಾಧುರಿ ಮುಧೋಳ ಉಪಸ್ಥಿತರಿರುವರು ಎಂದರು.

2 ದಿನದ ಕಾರ್ಯಾಗಾರದಲ್ಲಿ ವಿವಿಧ ಗೋಷ್ಠಿಗಳು ಜರುಗಲಿದ್ದು, ಸಂಪನ್ಮೂಲ ವ್ಯಕ್ತಿಗಳಾಗಿ ಡಾ.ಎಸ್.ಗೋಪಕುಮಾರ, ಡಾ.ಚಂದ್ರಕುಮಾರ ದೇಶಮುಖ, ಡಾ.ಪ್ರತಿಮಾ ನಾಗೇಶ, ಡಾ.ಸೈಫುದ್ಧಿನ್ ಗುರುಕಲ್ಲ, ಡಾ.ಸುಜಾತಾ ಕದಂ, ಡಾ.ಮಾಧವ ಡಿಗ್ಗಾವಿ, ಡಾ.ಸಿ.ಸುರೇಶಕುಮಾರ, ಡಾ.ಮೃದುಲ್ ಚಿತ್ರಕಾರ ಪಾಲ್ಗೊಳ್ಳುವರು. ಜೂ.27ರ ಸಂಜೆ ಕಾರ್ಯಕ್ರಮಕ್ಕೆ ತೆರೆಬೀಳಲಿದೆ ಎಂದರು.

ಆಯುರ್ವೇದ ಕ್ಷೇತ್ರದಲ್ಲಿ ಆಳವಾದ ಜ್ಞಾನ, ಅವಿಷ್ಕಾರಗಳು, ಚಿಕಿತ್ಸಾ ವಿಧಾನ, ಅಡ್ಡಪರಿಣಾಮವಿಲ್ಲದ ಚಿಕಿತ್ಸೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದೆ. 1100ಕ್ಕೂ ಅಧಿಕ ವಿದ್ಯಾರ್ಥಿಗಳು, ಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದ ಮುಖ್ಯ ಸಂಘಟನಾ ಕಾರ್ಯದರ್ಶಿಗಳಾದ ಡಾ.ಮಹಾಂತೇಶ ಹಿರೇಮಠ, ಡಾ.ಎ.ಹಬೀಬ್ ಬಾಳಿಕಾಯಿ, ಸಂಘಟನಾ ಕಾರ್ಯದರ್ಶಿ ಡಾ.ಸೌಮ್ಯ ಮಂಗಳೂರೆ, ಸಂಘಟನಾ ಸದಸ್ಯರಾದ ಡಾ.ದೀಪಾ ಗಂಗಲ, ಡಾ.ವಿಜಯಕುಮಾರ ಚವಡಿ, ಡಾ.ಈಶ್ವರ ಪಾಟೀಲ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

52.91 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ವಿತರಣೆ
ಬೆಳೆಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ರೈತರ ಪ್ರತಿಭಟನೆ