75ನೇ ಅಂತಾರಾಷ್ಟ್ರೀಯ ನಿರಂತರ ಕಲೆಮನೆ ಉತ್ಸವ

KannadaprabhaNewsNetwork |  
Published : Jul 27, 2026, 01:15 AM IST
45 | Kannada Prabha

ಸಾರಾಂಶ

ಕೇಂದ್ರದ ಅತ್ಯುತ್ತಮ ವಿದ್ಯಾರ್ಥಿನಿಯರಿಗೆ ಕನ್ನಡಪರ ಹೋರಾಟಗಾರ ಕೊ.ಸು. ನರಸಿಂಹಮೂರ್ತಿ ಅವರು ಸ್ಥಾಪಿಸಿರುವ ನಗದು ಬಹುಮಾನಗಳನ್ನು ನೀಡಲಾಯಿತು.

ಕನ್ನಡಪ್ರಭ ವಾರ್ತೆ ಮೈಸೂರು

ಕುಮಾರ್ ಪ್ರದರ್ಶಕ ಕಲೆಗಳ ಕೇಂದ್ರವು ನಗರದ ಮಂಚೇಗೌಡನ ಕೊಪ್ಪಲಿನ ಕಲೆಮನೆ ಸಭಾಂಗಣದಲ್ಲಿ ಭಾನುವಾರ 75ನೇ ಅಂತಾರಾಷ್ಟ್ರೀಯ ನಿರಂತರ ಕಲೆಮನೆ 7 ಉತ್ಸವ ಏರ್ಪಡಿಸಿತ್ತು.

ಇದೇ ಸಂದರ್ಭದಲ್ಲಿ ಕಲಾಪೋಷಕರಾದ ವಿಜ್ಞಾನ ಲೇಖಕ ಎಸ್. ರಾಮಪ್ರಸಾದ್‌ ಹಾಗೂ ಶಸ್ತ್ರಚಿಕಿತ್ಸಕ ಡಾ.ಸಿ.ಜಿ. ನರಸಿಂಹನ್‌ ಅವರಿಗೆ ಕಲೆಮನೆ ಕಲಾಶ್ರೀ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡಿತು.

ಕರ್ನಾಟಕ ಕಲಾಶ್ರೀ ವಿದ್ವಾನ್ ವಿ. ನಂಜುಂಡಸ್ವಾಮಿ, ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್, ನಿವೃತ್ತ ತಹಸೀಲ್ದಾರ್‌ ಡಾ.ವಿ. ರಂಗನಾಥ್‌ ಮುಖ್ಯ ಅತಿಥಿಗಳಾಗಿದ್ದರು. ಜಮುನಾ ರಾಣಿ ವಿ. ಮಿರ್ಲೆ, ರಂಗನಾಥ್‌ ಮೈಸೂರು, ಶಾಂತಿ, ಪ್ರೊ.ಎಚ್.ಎಸ್. ಉಮಾದೇವಿ, ಶಾಂತಿ, ನಂದಿನಿ, ಕುಮಾರ್‌ ಪ್ರದರ್ಶಕ ಕಲೆಗಳ ಕೇಂದ್ರದ ಸಂಸ್ಥಾಪಕ ಡಾ.ಕೆ. ಕುಮಾರ್‌, ಅಧ್ಯಕ್ಷೆ ಡಾ.ಜಿ. ಮಾಲತಿ, ಖಜಾಂಚಿ ಕೆ.ಎಂ. ಲೇಖಾ, ಜಂಟಿ ಕಾರ್ಯದರ್ಶಿ ಕೆ.ಎಂ. ನಿಧಿ ಇದ್ದರು.

ಇದೇ ಸಂದರ್ಭದಲ್ಲಿ ಏರ್ಪಡಿಸಿದ್ದ ಭರತನಾಟ್ಯ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಅಲ್ಲದೇ ಕೇಂದ್ರದ ಅತ್ಯುತ್ತಮ ವಿದ್ಯಾರ್ಥಿನಿಯರಿಗೆ ಕನ್ನಡಪರ ಹೋರಾಟಗಾರ ಕೊ.ಸು. ನರಸಿಂಹಮೂರ್ತಿ ಅವರು ಸ್ಥಾಪಿಸಿರುವ ನಗದು ಬಹುಮಾನಗಳನ್ನು ನೀಡಲಾಯಿತು. ನಂತರ ಕುಮಾರ್‌ ಪ್ರದರ್ಶಕ ಕಲೆಗಳ ಕೇಂದ್ರದ ವಿದ್ಯಾರ್ಥಿನಿಯರು ಆಕರ್ಷಕವಾಗಿ ಭರತನಾಟ್ಯ ಪ್ರದರ್ಶಿಸಿ, ಸಭಿಕರನ್ನು ರಂಜಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೊಡ್ಡದಾಳವಟ್ಟದ ಶ್ರೀಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವ ಸಂಪನ್ನ
ಸಮಾಜಕ್ಕೆ ಉಪಯುಕ್ತ ವ್ಯಕ್ತಿಯಾಗುವುದು ಮುಖ್ಯ: ಸಂಸದ