ಜ.18ಕ್ಕೆ ಅಂತಾರಾಷ್ಟ್ರೀಯ ಕವಿ ಸಮ್ಮೇಳನ: ಡಾ.ಶ್ರೀಪತಿ

KannadaprabhaNewsNetwork |  
Published : Jan 16, 2026, 03:30 AM IST
ಪೊಟೊ: 19ಎಸ್‌ಎಂಜಿಕೆಪಿ03ಶಿವಮೊಗ್ಗದ ಪತ್ರಿಕಾಭವನದಲ್ಲಿ ಗುರುವಾರ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಹೊಸನಗರ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಪತಿ ಅಳಗುಂದ ಮಾತನಾಡಿದರು.  | Kannada Prabha

ಸಾರಾಂಶ

ಅಂಜಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಕಾರಗಡಿ ಐಕ್ಯೂಎಸಿ, ಸಾಂಸ್ಕೃತಿಕ ವೇದಿಕೆ ಹಾಗೂ ಕನ್ನಡ ಸಾಹಿತ್ಯ ವೇದಿಕೆ, ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸನಗರ ಇವರ ಸಹಯೋಗದಲ್ಲಿ ರಾಷ್ಟ್ರೀಯ ನವಚೇತನ ಪ್ರಶಸ್ತಿ ಪುರಸ್ಕೃತ ಕವಿ-ಸಾಹಿತಿ ಪ್ರವೀಣ್ ಎಂ. ಕಾರ್ಗಡಿ ಇವರ ಸಾರಥ್ಯದಲ್ಲಿ ಹೊಸನಗರದ ಕೊಡಚಾದ್ರಿ ಕಾಲೇಜು ಕುವೆಂಪು ಸಭಾಂಗಣದಲ್ಲಿ ಜ.18ರಂದು ಬೆಳಗ್ಗೆ 10.30ಕ್ಕೆ ಅಂತಾರಾಷ್ಟ್ರೀಯ ಕವಿ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಪತಿ ಅಳಗುಂದ ತಿಳಿಸಿದರು.

ಶಿವಮೊಗ್ಗ: ಅಂಜಲಿ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಕಾರಗಡಿ ಐಕ್ಯೂಎಸಿ, ಸಾಂಸ್ಕೃತಿಕ ವೇದಿಕೆ ಹಾಗೂ ಕನ್ನಡ ಸಾಹಿತ್ಯ ವೇದಿಕೆ, ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸನಗರ ಇವರ ಸಹಯೋಗದಲ್ಲಿ ರಾಷ್ಟ್ರೀಯ ನವಚೇತನ ಪ್ರಶಸ್ತಿ ಪುರಸ್ಕೃತ ಕವಿ-ಸಾಹಿತಿ ಪ್ರವೀಣ್ ಎಂ. ಕಾರ್ಗಡಿ ಇವರ ಸಾರಥ್ಯದಲ್ಲಿ ಹೊಸನಗರದ ಕೊಡಚಾದ್ರಿ ಕಾಲೇಜು ಕುವೆಂಪು ಸಭಾಂಗಣದಲ್ಲಿ ಜ.18ರಂದು ಬೆಳಗ್ಗೆ 10.30ಕ್ಕೆ ಅಂತಾರಾಷ್ಟ್ರೀಯ ಕವಿ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಡಾ.ಶ್ರೀಪತಿ ಅಳಗುಂದ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೊಸನಗರದ ಇತಿಹಾಸದಲ್ಲಿ ಮೊದಲ ಬಾರಿಗೆ ಹೊಸನಗರದಲ್ಲಿ ಈ ಸಮ್ಮೇಳನ ನಡೆಯಲಿದೆ. ಶಾಸಕ ಬೇಳೂರು ಗೋಪಾಲಕೃಷ್ಣ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರವೀಣ್ ಎಂ.ಕಾರ್ಗಡಿ ಅಧ್ಯಕ್ಷತೆ ವಹಿಸಲಿದ್ದು, ಎಚ್.ಎಸ್.ಭಾರತಿ ಚಂದ್ರಶೇಖರ್ ಸರ್ವಾಧ್ಯಕ್ಷರಾಗಿ ಭಾಗವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಕಸಾಪ ಜಿಲ್ಲಾಧ್ಯಕ್ಷ ಡಿ.ಮಂಜುನಾಥ್, ಯುವ ನಟಿ ರಿಯಾಭಾಸ್ಕರ್, ಸಂಗೀತ ನಿರ್ದೇಶಕ ರಿಷಿಕುಮಾರ್, ಸಿನಿಮಾ ನಿರ್ಮಾಪಕರಾದ ಭಾಸ್ಕರ್ ಕುಂದಾಪುರ, ಹೊಸನಗರ, ಕಸಾಪ ಅಧ್ಯಕ್ಷ ಗಣೇಶ್ ಮೂರ್ತಿ ನಾಗರಕುಡಿಗೆ, ಪ್ರಾಂಶುಪಾಲ ಡಾ.ಕೆ.ಉಮೇಶ್ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಅಂಜಲಿ ಪಿ.ಕಾರಗಡಿ ಅವರಿಂದ ಭಾರತನಾಟ್ಯ ಪ್ರದರ್ಶನವಿದ್ದು, ದಾವಣಗೆರೆಯ ಲೇಖಕಿ ವೀರಮ್ಮ ಎಸ್.ಹಿರೇಬಿದ್ರಿ ಅವರ ಹೊಂಬೆಳಕು ಪ್ರತಿ ಲೋಕಾರ್ಪಣೆಗೊಳ್ಳಲಿದೆ. ಕೆ.ಎಸ್.ವಿನಾಯಕ ಅವರ ವಿಶೇಷವಾದ ಗೋಡೆ ಚಿತ್ರಗಳ ಅಮ್ಮನ ಮಡಿಲು ಪ್ರದರ್ಶನವಿರುತ್ತದೆ ಎಂದರು.

ಈಗಾಗಲೇ ಕರ್ನಾಟಕ, ಅಮೆರಿಕ, ಶ್ರೀಲಂಕಾ ಸೇರಿದಂತೆ ಭಾರತದ ಹಲವು ರಾಜ್ಯಗಳಿಗೆ 100ಕ್ಕೂ ಹೆಚ್ಚಿನ ಕವಿಗಳ ಕಲರವ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಿದ್ದು, ಬೆಳಿಗ್ಗೆ 10ಕ್ಕೆ ಆರಂಭವಾಗುವ ಈ ಕಾರ್ಯಕ್ರಮದಲ್ಲಿ ಕವಿತೆ ವಾಚನ ಮಾಡುವವರಿಗೆ ಹಲವು ಗೋಷ್ಠಿಗಳಿಗೆ. ಮತ್ತು ಭಾಗವಹಿಸುವ ಎಲ್ಲರಿಗೂ ಪ್ರಶಸ್ತಿ ಪತ್ರವಿದ್ದು, ಮಧ್ಯಾಹ್ನ ಊಟದ ವ್ಯವಸ್ಥೆ ಇರುತ್ತದೆ. ದೂರದಿಂದ ಬರುವ ಆಸಕ್ತ ಕವಿಗಳಿಗೆ ಬಯಸಿದಲ್ಲಿ ಸರಳವಾದ ವಸತಿ ವ್ಯವಸ್ಥೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಮೊ:6360435514ನ್ನು ಸಂಪರ್ಕಿಸುವಂತೆ ಕೋರಿದರು.

ಪತ್ರಿಕಾಗೋಷ್ಠಿಯಲ್ಲಿ ತಾಯಿಮನೆ ಸುದರ್ಶನ್, ಪ್ರವೀಣ್ ಎಂ.ಕಾರ್ಗಡಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚನ್ನಮ್ಮ ಮಹಿಳೆಯರ ಸ್ವಾಭಿಮಾನ ಸಂಕೇತ: ತರಳಬಾಳು ಶಿವಮೂರ್ತಿ ಶ್ರೀ
ಜ.19ರಿಂದ ನಾನ್ ಯುಜಿಸಿ ಅತಿಥಿ ಉಪನ್ಯಾಸಕರ ಅನಿರ್ಧಿಷ್ಟಾವಧಿ ಮುಷ್ಕರ