- ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾ.ಕಸಾಪ ದಿಂದ ಕೆಂಪೇಗೌಡ ಜಯಂತಿ । ರಸ ಪ್ರಶ್ನೆ, ಶಿಕ್ಷಕರಿಗೆ ಸನ್ಮಾನ
ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆದ ದೊಡ್ಡ ನಗರವಾಗಿ ಬೆಳೆದಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಪೂರ್ವಾಧ್ಯಕ್ಷ ಹಾಗೂ ವಕೀಲ ಎಸ್.ಎಸ್.ಸಂತೋಷ್ ಕುಮಾರ್ ತಿಳಿಸಿದರು.
ಶನಿವಾರ ತಾಲೂಕಿನ ಅಳಲಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ತಾಲೂಕು ಕಸಾಪ ಹಮ್ಮಿಕೊಂಡಿದ್ದ ನಾಡ ಪ್ರಭು ಕೆಂಪೇಗೌಡ ಜಯಂತಿಯಲ್ಲಿ ರಸ ಪ್ರಶ್ನೆಯಲ್ಲಿ ವಿಜೇತ ಮಕ್ಕಳಿಗೆ ಪ್ರಶಸ್ತಿ ಪತ್ರ ವಿತರಿಸಿ ಮಾತನಾಡಿದರು. ಮುಂದಾಲೋಚನೆಯಿಂದ ಬೆಂಗಳೂರು ನಗರ ಕಟ್ಟಿರುವುದರಿಂದ 1 ಕೋಟಿ ಜನರಿಗೆ ನೀರು, ವಸತಿ ಸೌಕರ್ಯ ಕಲ್ಪಿಸಲು ಅನುಕೂಲವಾಗಿದೆ. ಮಕ್ಕಳು ದಿನಪತ್ರಿಕೆ, ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು.ಇದರಿಂದ ಮಕ್ಕಳಲ್ಲಿ ಮುಂದಿನ ಜೀವನಕ್ಕೆ ಬೇಕಾದ ಜ್ಞಾನ, ಕೌಶಲ್ಯ ತಿಳಿಯಲಿದೆ ಎಂದರು.ಮುಖ್ಯ ಅತಿಥಿಯಾಗಿದ್ದ ಸಮಾಜ ಸೇವಕಿ ಜುಬೇದ ಮಾತನಾಡಿ ಕೆಂಪೇಗೌಡರು ಅವರ ಕಸುಬಿಗೆ ತಕ್ಕ ಹಾಗೆ ಪೇಟೆ ಗಳನ್ನು ನಿರ್ಮಿಸಿದ್ದರು.ಇಂದು ಬೆಂಗಳೂರು ಸಿಲಿಕಾನ್ ಸಿಟಿ ಎಂಬ ಹೆಸರು ಪಡೆಯಲು ಕೆಂಪೇಗೌಡರ ದೂರ ದೃಷ್ಟಿಯೇ ಕಾರಣ. ದೇಶದ ಬೇರೆ ನಗರಕ್ಕಿಂತ ಬೆಂಗಳೂರಿನಲ್ಲೇ ಐಟಿಬಿಟಿ ಕಂಪನಿಗಳು ಹೆಚ್ಚಾಗಿ ನೆಲೆಸಿದೆ ಎಂದರು.
ಇದಕ್ಕೂ ಮೊದಲು ವಿದ್ಯಾರ್ಥಿಗಳಿಗೆ ನಾಡಪ್ರಭು ಕೇಂಪೇಗೌಡರ ಆದರ್ಶ ಆಡಳಿತ ಮತ್ತು ಜೀವನ ಚರಿತ್ರೆ ಬಗ್ಗೆ ತಾಲೂಕು ಕಸಾಪ ಅಧ್ಯಕ್ಷ ಪೂರ್ಣೇಶ್ ರಸಪ್ರಶ್ನೆ ನಡೆಸಿಕೊಟ್ಟರು. ಇದರಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದ ತಂಡದವರಿಗೆ ಪ್ರಶಸ್ತಿ ಪತ್ರ ನೀಡಲಾಯಿತು. ಇದೇ ಸಂದರ್ಭದಲ್ಲಿ 2025-26 ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಶೇ.100 ರಷ್ಟು ಫಲಿತಾಂಶ ಬರಲು ಕಾರಣರಾದ ಶಾಲೆ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿಗೆ ಕಸಾಪದಿಂದ ಸಾಧಕ ಪ್ರತಿಷ್ಟಾಪಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.