ಕನ್ನಡಪ್ರಭ ವಾರ್ತೆ ಎಚ್.ಡಿ. ಕೋಟೆ
ಪಟ್ಟಣದ ನಿಸರ್ಗ ಫೌಂಡೇಷನ್ ಕಚೇರಿಯಲ್ಲಿ ನಡೆದ ಆದಿವಾಸಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಸಮಾನತೆ ಹೊಂದಬೇಕು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ, ಹಾಗೆಯೇ ನಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ನಾವೇ ಹೊರಾಟ ಮಾಡಬೇಕೆಂದು ಕರೆ ನೀಡಿದರು.ಮೈಸೂರು ಜೆ.ಎಸ್.ಎಸ್ ಕಾಲೇಜಿನ ಉಪನ್ಯಾಸಕಿ ಕುಮುದಿನಿ ಸ್ಟ್ಯಾನ್ಲಿ ಮಾತನಾಡಿ, ಮೊದಲು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು 125 ವರ್ಷಗಳ ಹಿಂದೆ ಇಂಗ್ಲೆಂಡ್ ಹಾಗೂ ಅಮೇರಿಕಾ ದೇಶಗಳಲ್ಲಿ ಮಾತ್ರ ಆಚರಿಸುತ್ತಿದ್ದರು. ಹೆಣ್ಣು ಮಕ್ಕಳ ಸಾಧನೆಯನ್ನು ಕಂಡು 51 ವರ್ಷಗಳ ನಂತರ ಭಾರತದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲು ಪ್ರಾರಂಭ ಮಾಡಲಾಯಿತು. ಮಹಿಳೆಯರು ಸರ್ಕಾರದಿಂದ ಸಿಗುವ ಸೌಲಭ್ಯದಿಂದ ವಂಚಿತರಾಗದೆ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಬಾಲ್ಯವಿವಾಹವನ್ನು ಮಾಡದೇ, ಅವರಿಗೆ ಉತ್ತಮ ಶಿಕ್ಷಣವನ್ನು ಕೊಡಿಸಬೇಕು. ಹಾಗೇಯೆ ಮಹಿಳೆಯರು ನಮ್ಮ ಸಂಸ್ಕೃತಿಯನ್ನು ಮರೆಯಬಾರದು ಎಂದು ತಿಳಿಸಿದರು.
ಅಂಗನವಾಡಿ ಮೇಲ್ವಿಚಾರಕಿ ಚಿನ್ನಮ್ಮ ಮಾತನಾಡಿ, ತಮ್ಮ ಇಲಾಖೆಯಿಂದ ಸಿಗುವ ಯೋಜನೆಗಳ ಬಗ್ಗೆ ತಿಳಿಸಿದರು.
ಹಿರಿಯ ಮಹಿಳಾ ಹೋರಾಟಗಾರರಾದ ಅರಳಿಕಟ್ಟೆ ಹಾಡಿಯ ಜವರಮ್ಮ, ಅಣ್ಣೂರು ಹಾಡಿಯ ಅಮ್ಮಣಮ್ಮ, ನಿಸರ್ಗ ಸಂಸ್ಥೆಯ ಕಾರ್ಯಕರ್ತರಾದ ಚಿಕ್ಕತಿಮ್ಮನಾಯ್ಕ, ಕನ್ಯಾಕುಮಾರಿ, ಜ್ಯೋತಿ, ತಂಝಿಲ ನಾಜ್, ಶ್ರುತಿ, ಆದಿವಾಸಿ ಮಹಿಳೆಯರು ಹಾಗೂ ಮುಖಂಡರು ಭಾಗವಹಿಸಿದ್ದರು.