ಬೆದರಿಕೆ ಹಾಕೋದು ಸಂವಿಧಾನ‌ ಭಕ್ತರ ಲಕ್ಷಣವಲ್ಲ: ಆಂದೋಲಾ ಶ್ರೀ

KannadaprabhaNewsNetwork |  
Published : May 24, 2024, 12:45 AM IST
ಫೋಟೋ- ಆಂದೋಲಾ ಶ | Kannada Prabha

ಸಾರಾಂಶ

ಒಬ್ಬ ಶಹಜಾದಿ (ಯುವರಾಜ) ಯಿಂದ ಕಲಬುರಗಿ ಬರಬಾದಿ ಆಗುತ್ತಿದೆ. ಇಂಥವರಿಂದ ಆಜಾದಿ (ಸ್ವಾತಂತ್ರ್ಯ) ಗಾಗಿ ಹೋರಾಟ ನಡೆಸಿದರೆ, ಅವರು ತಮ್ಮ ಮೈಮೇಲೆ ಹಲ್ಲಿ ಬಿದ್ದವರಂತೆ ಆಡುತ್ತಿದ್ದಾರೆಂದು ಆಂದೋಲಾ ಶ್ರೀಗಳು ಮಾತಿನಲ್ಲೇ ಸಚಿವ ಪ್ರಿಯಾಂಕ್‌ ಖರ್ಗೆಗೆ ಕುಟುಕಿದ್ದಾರೆ.

ಕನ್ನಡಪ್ರಭ ವಾರ್ತೆ ಕಲಬುರಗಿ

ಕೆಲವು ಫಸ್ಟ್ ರೇಟ್ ರಾಜಕಾರಣಿಗಳು ಬಸವಣ್ಣನವರ ಉತ್ತರಾಧಿಕಾರಿಗಳಂತೆ ಬಿಂಬಿಸಿಕೊಳ್ಳುತ್ತಿದ್ದು, ಇಲ್ಲದ ವಿಚಾರಗಳನ್ನು ಜನರ ತಲೆಯಲ್ಲಿ ತುಂಬಿ ವೀರಶೈವ ಲಿಂಗಾಯತ ಧರ್ಮ ಒಡೆಯಲು ಯತ್ನಿಸಿ ಆ ಪ್ರಯತ್ನಕ್ಕೆ ಅಂದಿನ ಕಾಂಗ್ರೆಸ್ ಸರಕಾರವೇ ನೇತೃತ್ವ ವಹಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿ ಮಾಡಿ ತನ್ನ ಬೆಳೆ ಬೇಯಿಸಿಕೊಂಡು ಚುನಾವಣೆಯಲ್ಲಿ ಸೋಲು ಅನುಭವಿಸಿದವರು ಇಂದು ಬಸವಣ್ಣನವರ ಬಗ್ಗೆ ಉಪದೇಶ ನೀಡುತ್ತಿದ್ದಾರೆಂದು ಆಂದೋಲಾ ಸಿದ್ದಲಿಂಗ ಶ್ರೀಗಳು ತಮ್ಮಕುರಿತಂತೆ ಸಚಿವ ಪ್ರಿಯಾಂಕ್‌ ಖರ್ಗ ಮಾಡಿರುವ ಟೀಕಿಗೆ ಮಾರುತ್ತರ ನೀಡಿದ್ದಾರೆ.

ಒಬ್ಬ ಶಹಜಾದಿ (ಯುವರಾಜ) ಯಿಂದ ಕಲಬುರಗಿ ಬರಬಾದಿ ಆಗುತ್ತಿದೆ. ಇಂಥವರಿಂದ ಆಜಾದಿ (ಸ್ವಾತಂತ್ರ್ಯ) ಗಾಗಿ ಹೋರಾಟ ನಡೆಸಿದರೆ, ಅವರು ತಮ್ಮ ಮೈಮೇಲೆ ಹಲ್ಲಿ ಬಿದ್ದವರಂತೆ ಆಡುತ್ತಿದ್ದಾರೆಂದು ಶ್ರೀಗಳು ಮಾತಿನಲ್ಲೇ ಸಚಿವರಿಗೆ ಕುಟುಕಿದ್ದಾರೆ.

ಒಬ್ಬ ಮಂತ್ರಿ ಸಾರ್ವಜನಿಕ ಜೀವನದಲ್ಲಿ ಹೇಗೆ ಮಾತಾಡಬೇಕು ಎಂಬುದನ್ನೇ ಮರೆತು ಅಸಂವಿಧಾನಿಕ ಭಾಷೆ ಬಳಸಿ ತೋಳು ಏರಿಸಿ ಬೆದರಿಕೆ ಹಾಕುವುದು ಅದೆಷ್ಟು ಸರಿ? ಅದೆಷ್ಟು ಸಮಂಜಸವಾದದ್ದು ಇವರ ವರ್ತನೆ, ಧೋರಣೆ? ಇದು ಸಂವಿಧಾನ‌ ಭಕ್ತರ ಲಕ್ಷಣವಲ್ಲ ಎಂದು ಶ್ರೀಗಳು ಹೇಳಿಕೆಯಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆಗೆ ತಿವಿದಿದ್ದಾರೆ.

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಇದಕ್ಕೆ ನಾಡು ಆಳುವ ದೊರೆಗಳೇ ಕಾರಣ .ಪಂಚ ಗ್ಯಾರಂಟಿಗಳಿಗೆ ಹಣ ಹೊಂದಿಸುವಲ್ಲಿ ಹೆಣಗಾಡುತ್ತಿರುವ ಸರಕಾರ ಪ್ರಜೆಗಳ ರಕ್ಷಣೆ ಮರೆತು ಬಿಟ್ಟ ಪರಿಣಾಮ. ರಾಜ್ಯದಲ್ಲಿ ಕೊಲೆ ಸುಲಿಗೆ ಅತ್ಯಾಚಾರದಂತ ಪ್ರಕರಣಗಳು ವ್ಯಾಪಕವಾಗಿ ಹರಡುತ್ತಿವೆ ಎಂದು ರಾಮಸೇನೆಯ ಮುಖಂಡರೂ ಆಗಿರುವ ಆಂದೋಲಾ ಶ್ರೀಗಳು ರಾಜ್ಯ ಸರಕಾರವನ್ನು, ಅದರ ಆಡಳಿತದ ನಿಷ್ಕ್ರೀಯತೆಯನ್ನೂ ದೂಷಿಸಿದ್ದಾರೆ.

ಕೊಲೆಯಾದ ಹುಬ್ಬಳಿ ಅಂಜಲಿ ಅಂಬಿಗೇರ ಯುವತಿ ಪೋಷಕರು ದೂರುಸಲ್ಲಿಸಿದ್ದರೂ ಕ್ರಮಕೈಗೊಳ್ಳದ ಪೋಲಿಸ ಇಲಾಖೆ ಅಂಜಲಿ ಸಾವಿಗೆ ಕಾರಣರಾಗಿದ್ದಾರೆ. ನೇಹಾ ಹಿರೇಮಠ ಹತ್ಯೆಯಾದ ನಂತರವೂ ಪೋಲಿಸ ಇಲಾಖೆ ಎಚ್ಚೆತ್ತಿಲ್ಲ. ಹುಬ್ಬಳ್ಳಿ ಪೊಲೀಸರ ಗಾಢ ನಿದ್ರೆಯಿಂದಾಗಿಯೇ , ಇದೇ ಕಾರಣದಿಂದನೇ ಅಂಜಲಿ ಹತ್ಯೆಯಾಗಿದೆ.

ಇಂತಹ ಘೋರಾತೀಘೋರ ಕೃತ್ಯಗಳು ನಡೆದ್ದಾಗಿಯೂ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ರೇಸಾರ್ಟ ಕ್ರೀಕೇಟ್ ಎಂದು ಎಂಜಾಯ್ ಮಾಡುತ್ತಿದ್ದಾರೆ. ನೇಹಾ ಅಂಜಲಿ ಕೊಲೆಗಳಿಂದಾಗಿ ಯುವತಿಯರು ಮಹಿಳೆಯರು ಭಯದಿಂದ ಬದುಕು ಸಾಗಿಸುತ್ತಿದ್ದಾರೆ. ರಾಜ್ಯ ಸರಕಾರ ಮೊದಲು ಕುಸಿದ ಕಾನೂನು ಸುವ್ಯವಸ್ಥೆಯನ್ನ ಸರಿಪಡಿಸಲಿ ಎಂದು ಸಿದ್ದಲಿಂಗ ಶ್ರೀಗಳು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಲೀಲಾ ಪಾಟೀಲರಿಗೆ ‘ಸೌಭಾಗ್ಯವತಿ ಸಿಂಧು ಸುಭಾಷ ಮ್ಹಮಾಣೆ ಮಾತೃಶಕ್ತಿ ಪ್ರಶಸ್ತಿ’ ಪ್ರದಾನ
ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ : ಸೂರಜ್‌ ರೇವಣ್ಣಗೆ ಕೋರ್ಟ್‌ ಶಾಕ್‌