ಲಗೋರಿ ಆಡುವ ಮೂಲಕ ಮಕ್ಕಳ ಶಿಬಿರಕ್ಕೆ ಚಾಲನೆ

KannadaprabhaNewsNetwork |  
Published : Apr 17, 2024, 01:15 AM IST
ಶಿಬಿರ16 | Kannada Prabha

ಸಾರಾಂಶ

ಶಿಬಿರದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ದೈಹಿಕ ಬೌದ್ಧಿಕ ಬೆಳವಣಿಗೆ ವೈವಿಧ್ಯಮಯ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ಕೋಟ

ಇಲ್ಲಿನ ಮಣೂರು ಪಡುಕರೆಯ ಸರ್ಕಾರಿ ಸಂಯುಕ್ತ ಪ್ರೌಢಶಾಲಾ ವಠಾರದಲ್ಲಿ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ. ಕುಂದರ್ ಅವರ ಮಾರ್ಗದರ್ಶನದಲ್ಲಿ ‘ಎಳೆಬಿಸಿಲು- ಇದು ಶಾಲೆಯಲ್ಲ ಬಯಲು’ ಎಂಬ ಬೇಸಿಗೆ ಶಿಬಿರವನ್ನು ಏ.೧೫ರಿಂದ ೨೧ರ ವರೆಗೆ ಆಯೋಜಿಸಲಾಗಿದೆ.

ಶಿಬಿರವನ್ನು ಸ್ಥಳೀಯ ಮಣೂರು ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡೆನ್ನಿಸ್ ಬಾಂಜಿ, ಆಯೋಜಕರಾದ ರಮೇಶ ಎಚ್. ಕುಂದರ್, ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಜಯರಾಮ ಶೆಟ್ಟಿ, ಪದವಿ ಪೂರ್ವ ಕಾಲೇಜು ಉಪನ್ಯಾಸಕ ಸತ್ಯನಾರಾಯಣ, ಪ್ರಾಥಮಿಕ ವಿಭಾಗದ ಮುಖ್ಯೋಪಾದ್ಯಾಯ ಮಂಜುನಾಥ ಹೊಳ್ಳ ಮತ್ತು ಗೀತಾನಂದ ಫೌಂಡೇಶನ್ ಸಂಯೋಜಕ ರವಿಕಿರಣ್ ಅವರು ಶಿಬಿರಾರ್ಥಿಗಳೊಂದಿಗೆ ಲಗೋರಿ ಆಡುವುದರ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗೀತಾನಂದ ಟ್ರಸ್ಟ್‌ ನಿರ್ದೇಶಕಿ ವ್ಯೆಷ್ಣವಿ ರಕ್ಷಿತ್ ಕುಂದರ್ ಮತ್ತು ಜನತಾ ಸಿಬ್ಬಂದಿ ಅಶ್ವಿನಿ, ಸಚಿನ್ ಮತ್ತು ಶಿಬಿರಾರ್ಥಿಗಳು ಹಾಜರಿದ್ದರು. ಶಿಬಿರದಲ್ಲಿ ಸ್ಥಳೀಯ ಶಾಲಾ ಮಕ್ಕಳಿಗೆ ದೈಹಿಕ ಬೌದ್ಧಿಕ ಬೆಳವಣಿಗೆ ವೈವಿಧ್ಯಮಯ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ