ರಸಗೊಬ್ಬರ, ಬಿತ್ತನೆಬೀಜ ಮಳಿಗೆಗಳಲ್ಲಿ ದಾಸ್ತಾನು ಪರಿಶೀಲನೆ

KannadaprabhaNewsNetwork |  
Published : May 23, 2026, 01:30 AM IST
22ಎಚ್.ಎಲ್.ಐ3ಎ. ಹೊನ್ನಾಳಿ ಮತ್ತು ನ್ಯಾಮತಿ ರಸಗೊಬ್ಬರ ಮಾರಾಟ ಮಳಿಗೆಗಳಿಗೆ ಕೃಷಿ ಅಧಿಕಾರಿ ವಿಶ್ವನಾಥ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.  | Kannada Prabha

ಸಾರಾಂಶ

ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನಲ್ಲಿ ಬಿತ್ತನೆಬೀಜ, ರಸಗೊಬ್ಬರ, ಔಷಧಗಳ ಮಾರಾಟ ಮಳಿಗೆಗಳಿಗೆ ಕೃಷಿ ಸಹಾಯಕ ನಿರ್ದೇಶಕ ವಿಶ್ವನಾಥ್ ಹಾಗೂ ತಂಡದವರು ಭೇಟಿ ನೀಡಿ ದಾಸ್ತಾನು ಕುರಿತು ಪರಿಶೀಲನೆ ನಡೆಸಿದ್ದಾರೆ.

ಹೊನ್ನಾಳಿ: ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕಿನಲ್ಲಿ ಬಿತ್ತನೆಬೀಜ, ರಸಗೊಬ್ಬರ, ಔಷಧಗಳ ಮಾರಾಟ ಮಳಿಗೆಗಳಿಗೆ ಕೃಷಿ ಸಹಾಯಕ ನಿರ್ದೇಶಕ ವಿಶ್ವನಾಥ್ ಹಾಗೂ ತಂಡದವರು ಭೇಟಿ ನೀಡಿ ದಾಸ್ತಾನು ಕುರಿತು ಪರಿಶೀಲನೆ ನಡೆಸಿದರು.

ಅಧಿಕಾರಿ ವಿಶ್ವನಾಥ್‌ ಮಾತನಾಡಿ, ಕೃಷಿ ಪರಿಕರ ಮಾರಾಟಗಾರರಿಗೆ ಸಮರ್ಪಕ ರಸಗೊಬ್ಬರ ಪೂರೈಕೆ ಹಾಗೂ ವಿತರಣೆ ಕುರಿತಂತೆ ಸೂಚಿಸಲಾಗಿದೆ. ಕೃಷಿ ಪರಿಕರ ಮಾರಾಟಗಾರರಿಗೆ ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವುದು ಕಂಡುಬಂದಲ್ಲಿ ಅಗತ್ಯ ವಸ್ತುಗಳ ಕಾಯ್ದೆ 1955 ಹಾಗೂ ರಸಗೊಬ್ಬರ ನಿಯಂತ್ರಣ ಆದೇಶ 1985 ರಂತೆ ಕಠಿಣ, ಕ್ರಮ ಕೈಗೊಳ್ಳಲಾಗುವುದು. ರೈತರಿಗೆ ಕಡ್ಡಾಯವಾಗಿ ಎಫ್.ಐ.ಡಿ. ಮೂಲಕ ಯೂರಿಯಾ ಗೊಬ್ಬರವನ್ನು ವಿತರಣೆ ಮಾಡಿ ಅಧಿಕೃತ ಬಿಲ್ಲುಗಳನ್ನು ನೀಡಲು ಸೂಚಿಸಿದರು.

ತಾಲೂಕಿನ ರೈತರು ಯಾವುದೇ ಕಾರಣಕ್ಕೂ ಬಿಡಿಯಾಗಿ ಬಿತ್ತನೆ ಬೀಜಗಳನ್ನು ಖರೀದಿಸಬಾರದು. ಅಧಿಕೃತ ಮಾರಾಟಗಾರರಿಂದಲೇ ಬಿಲ್ಲುಗಳನ್ನು ಪಡೆದು ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಕೃಷಿಗೆ ಬಳಕೆ ಮಾಡಬೇಕು. ಅನಧಿಕೃತ ಲೂಸ್ ಬಿತ್ತನೆ ಬೀಜ ದಾಸ್ತಾನು ಹಾಗೂ ಮಾರಾಟ ಮಾಡುವವರು ಕಂಡುಬಂದಲ್ಲಿ ತಕ್ಷಣ ತಾಲೂಕು ಕೃಷಿ ಸಹಾಯಕ ನಿರ್ದೇಶಕರು ಅಥವಾ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳಿಗೆ ಮಾಹಿತಿ ನೀಡಲು ತಿಳಿಸಿದರು.

ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲೂಕುಗಳಲ್ಲಿ ಆರು ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆಬೀಜ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಗಳ ದಾಸ್ತಾನು ಸಮರ್ಪಕವಾಗಿದ್ದು, ರೈತರು ಎಫ್.ಐ.ಡಿ, ಮತ್ತು ಆಧಾರ್ ಕಾರ್ಡ್‌ಗಳ ವಿವರ ನೀಡಿ ಅವಶ್ಯವಿರುವ ರಸಗೊಬ್ಬರ ಪಡೆಯಬಹುದಾಗಿದೆ. ಅವಳಿ ತಾಲೂಕಿನಲ್ಲಿ ರೈತರು ಮೆಕ್ಕೆಜೋಳ ಬದಲಾಗಿ ರಾಗಿ, ಜೋಳ, ದ್ವಿದಳ ಧಾನ್ಯ, ಎಣ್ಣೆಕಾಳು ಬೆಳೆಗಳನ್ನು ಹೆಚ್ಚಾಗಿ ಬೆಳೆಯಲು ಹಾಗೂ ನೈಸರ್ಗಿಕ ಕೃಷಿಯೊಂದಿಗೆ ರಸಗೊಬ್ಬರಗಳ ಬಳಕೆ ಕಡಿಮೆ ಮಾಡಿ ಮಣ್ಣಿನ ಫಲವತ್ತತೆ ಹೆಚ್ಚಿಸಲು ಸೂಚಿಸಿದರು.

- - -

-22ಎಚ್.ಎಲ್.ಐ3:

-22ಎಚ್.ಎಲ್.ಐ3ಎ:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಗೀತೋತ್ಸವದಲ್ಲಿ ವಿವಿಧ ಕಲಾವಿದರಿಂದ ನಾದ ಝೇಂಕಾರ
ಉತ್ತಮ ಸಮಾಜ ನಿರ್ಮಾಣವೇ ಭೀಮ್‌ ಆರ್ಮಿ ಉದ್ದೇಶ