ನೀಟ್ ಅಕ್ರಮ ಸಿಬಿಐ ತನಿಖೆ ನಡೆಸಿ ತಪ್ಪಿತಸ್ಥರ ಕ್ರಮ ಕೈಗೊಳ್ಳಿ

KannadaprabhaNewsNetwork | Published : Jun 12, 2024 12:30 AM

ಸಾರಾಂಶ

ಬೀದರ್‌ನಲ್ಲಿ ನೀಟ್ ಪರೀಕ್ಷೆಯ ತನಿಖೆ ನಡೆಸುವಂತೆ ಆಗ್ರಹಿಸಿ ಮಂಗಳವಾರ ಎಬಿವಿಪಿಯಿಂದ ಮಾನವ ಸರಪಳಿ ಮೂಲಕ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬೀದರ್

ನೀಟ್ ಯುಜಿ 2024ಅನ್ನು ನಡೆಸುವಲ್ಲಿ ಮತ್ತು ಮೌಲ್ಯಮಾಪನ ಮಾಡುವಲ್ಲಿ ಅಸಮರ್ಥತೆ, ಭ್ರಷ್ಟಾಚಾರ ಬಹಿರಂಗಪಡಿಸಲಾಗಿದೆ. ತಕ್ಷಣವೇ ಸಿಬಿಐ ತನಿಖೆಗೆ ಆಗ್ರಹಿಸಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ಮಾಡಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಪ್ರಧಾನಿಗೆ ಬರೆದ ಮನವಿಯನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿ, ನೀಟ್ ಯುಜಿ ಫಲಿತಾಂಶವನ್ನು ಪ್ರಕಟಿಸುವ ಮೂಲಕ ಎನ್‌ಡಿಎ ಎನನ್ನು ಮರೆಮಾಚಲು ಹೊರಟಿದೆ? ನೀಟ್ ಯುಜಿ 2024ರ ಪರೀಕ್ಷಾ ಪ್ರಕ್ರಿಯೆ ಮತ್ತು ಫಲಿತಾಂಶಗಳ ಕುರಿತು ಉದ್ಭವಿಸುವ ಪ್ರಶ್ನೆ ಪರಿಹರಿಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಿಬಿಐ ತನಿಖೆಗೆ ಒತ್ತಾಯಿಸುತ್ತದೆ.

ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ಮಾತನಾಡಿ, ವಿವಿಧ ಕಡೆಯಿಂದ ಅಕ್ರಮಗಳ ವರದಿಯಾಗಿವೆ. ಪರೀಕ್ಷೆ ದಿನವೇ ದೇಶದ ಕೆಲವು ಭಾಗಗಳಲ್ಲಿ, ವಿವಿಧ ಸ್ಥಳಗಳಲ್ಲಿ ಪರಿಹಾರಕಾರರು ಸಿಕ್ಕಿಬಿದ್ದಿದ್ದಾರೆ ಮತ್ತು ಕೆಲವು ಸ್ಥಳಗಳಲ್ಲಿ ಪ್ರಶ್ನೆ ಪತ್ರಿಕೆಗಳ ವಿತರಣೆಯಲ್ಲೂ ಅಕ್ರಮ ನಡೆದಿವೆ. ಎಬಿವಿಪಿ ನೀಟ್ ಪರೀಕ್ಷೆ ಅಭ್ಯರ್ಥಿಗಳ ಸಮರ್ಥನಿಯ ಬೇಡಿಕೆಗಳೊಂದಿಗೆ ಎಬಿವಿಪಿ ನಿಂತಿದೆ.

ವೈದ್ಯಕೀಯ ಸಂಸ್ಥೆಗಳ ಪ್ರವೇಶಕ್ಕೆ ನಡೆಸುವ ಈ ಪರೀಕ್ಷೆ ಪಾರದರ್ಶಕತೆ ಬಗ್ಗೆ, ವಿದ್ಯಾರ್ಥಿಗಳಲ್ಲಿ ತೀವ್ರ ಅಪನಂಬಿಕೆ ಇದೆ. ನೀಟ್ ಪರೀಕ್ಷೆ ದಿನದಂದು ದೇಶದ ವಿವಿಧ ಭಾಗಗಳಿಂದ ವ್ಯವಸ್ಥೆಗಳಲ್ಲಿ ಆಕ್ರಮಗಳು ವರದಿಯಾಗಿವೆ. ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು ಪರೀಕ್ಷೆ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಲ್ಲ ಎಂಬುದು ಸ್ಪಷ್ಟವಾಗಿದೆ.

ಪರೀಕ್ಷೆ ಫಲಿತಾಂಶಗಳ ಬಗ್ಗೆ ನೀಟ್ ಅಕಾಂಕ್ಷಿಗಳಲ್ಲಿ ಅಪನಂಬಿಕೆ ಹೆಚ್ಚುತ್ತಿದೆ. ಇದನ್ನು ಪರಿಹರಿಸಲು ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ತಪ್ಪಿತಸ್ಥರನ್ನು ನ್ಯಾಯಕ್ಕೆ ತರಲು ಈ ವರ್ಷದ ನೀಟ್ ಪರೀಕ್ಷೆ ಅನೇಕ ಟಾಪರ್‌ಗಳು ಅದೇ ಕೇಂದ್ರದಿಂದ ಬಂದಿದ್ದು, ಇದು ಈ ವರ್ಷದ ಪರೀಕ್ಷಾ ಫಲಿತಾಂಶದ ಮೇಲೆ ಸಾಕಷ್ಟು ಪ್ರಶ್ನೆಗಳನ್ನು ಹುಟ್ಟು ಹಾಕಿ ಯುಜಿಸಿ-ನೆಟ್ ಮತ್ತು ಇತರ ಪರೀಕ್ಷೆಗಳ ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯಲ್ಲಿ ಸಾಕಷ್ಟು ಪ್ರಶ್ನೆಗಳು ಉದ್ಭವಿಸಿವೆ.

ನೀಟ್ ಪರೀಕ್ಷೆ ನಿರ್ವಹಣೆಯಲ್ಲಿ ಎದ್ದು ಕಾಣುವ ಲೋಪದೋಷಗಳಿಗೆ ಪರೀಕ್ಷೆಗಳ ನಿರ್ವಹಣೆಗೆ ಸಂಬಂಧಿಸಿದ ಅಧಿಕಾರಿಗಳೇ ಹೊಣೆ ಎಂದು ನಾವು ಬಲವಾಗಿ ನಂಬುತ್ತೇವೆ. ನೀಟ್ ಪರೀಕ್ಷೆ ಫಲಿತಾಂಶ ಪ್ರಕಟವಾದ ನಂತರ ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಗಳು ನಡೆಯುತ್ತಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ. ಪರೀಕ್ಷೆ ನಡೆಸುವ ಬಗ್ಗೆ, ವಿದ್ಯಾರ್ಥಿಗಳಲ್ಲಿ ವಿಶ್ವಾಸದ ವಾತಾವರಣ ಮೂಡುವಂತೆ ಈ ವಿಚಾರದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಗ್ರಹಿಸುತ್ತದೆ.

ಈ ವೇಳೆ ಸಾಯಿ ಭೋಸ್ಲೆ, ರಾಜ್ಯಕಾರಣಿ ಸದಸ್ಯರು ನಾಗರಾಜ್ ಪವನ್, ಸಾಯಿ, ಕಿರಣ್ ಅಭಿಷೇಕ್ ಶಂಭು, ಆನಂದ್ ಮಹೇಶ್ ಇನ್ನಿತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share this article