ಕನ್ನಡಪ್ರಭ ವಾರ್ತೆ ಉಡುಪಿ
ಅವರು ಇಲ್ಲಿನ ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ವಾಣಿಜ್ಯ ಮತ್ತು ವ್ಯವಹಾರ ಅಧ್ಯಯನ ವಿಭಾಗ, ಐ.ಕ್ಯೂ.ಎ.ಸಿ. ಹಾಗೂ ಪ್ಲೇಸ್ಮೆಂಟ್ ಘಟಕಗಳ ಸಹಯೋಗದೊಂದಿಗೆ ಆಯೋಜಿದ ಇನ್ವೆಸ್ಟ್ಮೆಂಟ್ ಬ್ಯಾಂಕಿಂಗ್ ಮತ್ತು ಉದ್ಯೋಗಾವಕಾಶ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲ ಪ್ರೊಫೆಸರ್ ಸುರೇಶ್ ರೈ ಕೆ. ಅಧ್ಯಕ್ಷತೆ ವಹಿಸಿದ್ದರು. ಈ ಕಾರ್ಯಾಗಾರದ ನಿರ್ದೇಶಕ ಸೂರಜ್ ವಿದ್ಯಾರ್ಥಿಗಳಿಗೆ ತರಬೇತಿಯೊಂದಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಿಕೊಟ್ಟರು.ವ್ಯವಹಾರ ಅಧ್ಯಯನ ವಿಭಾಗ ಮುಖ್ಯಸ್ಥ ಪ್ರೊ. ರಘು ನಾಯ್ಕ, ಆಂತರಿಕ ಗುಣಮಟ್ಟ ಮತ್ತು ಭರವಸೆ ಕೋಶದ ಸಂಚಾಲಕಿ ಡಾ. ಮೇವಿ ಮಿರಾಂದ, ಪ್ಲೇಸ್ಮೆಂಟ್ ಸಂಚಾಲಕ ದಿನೇಶ್ ಎಂ., ಉಮೇಶ್ ಪೈ, ಡಾ. ಗೀತಾ ಎನ್., ಉಪನ್ಯಾಸಕರಾದ ಸ್ಮಿತಾ ಹೆಗ್ಡೆ, ನಮಿತಾ ಹೆಗ್ಡೆ, ಧನ್ಯ, ಆರತಿ, ಮುಂತಾದವರು ಉಪಸ್ಥಿತರಿದ್ದರು.