ಬ್ಯಾಂಕಿನ ಸದಸ್ಯರ ಮಕ್ಕಳು 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಹಾಗೂ 2023-2024ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಕನ್ನಡಪ್ರಭ ವಾರ್ತೆ ಉಡುಪಿ
ಮಹಾಲಕ್ಮೀ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಬ್ಯಾಂಕಿನ ಅಧ್ಯಕ್ಷ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.ಬ್ಯಾಂಕಿನ ಸದಸ್ಯರ ಮಕ್ಕಳು 2024-25ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.90, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಹಾಗೂ 2023-2024ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.75 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.70 ಅಂಕಗಳಿಸಿದ ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.ಇತರ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.95, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90 ಹಾಗೂ 2023-24ನೇ ಸಾಲಿನ ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ.80 ಮತ್ತು ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಶೇ.75 ಅಂಕ ಪಡೆದಿರಬೇಕು.ಪ್ರತಿಭಾ ಪುರಸ್ಕಾರದ ಅರ್ಜಿಗಳು ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕಿನ ಎಲ್ಲ ಶಾಖೆ ಹಾಗೂ ಬ್ಯಾಂಕಿನ ಅಧಿಕೃತ ವೈಬ್ಸೈಟ್ www.mahalakshmicoopbank.com ನಲ್ಲಿ ಲಭ್ಯವಿದ್ದು, ಜುಲೈ 19 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆಯುವಂತೆ ಪ್ರಕಟಣೆಯಲ್ಲಿ ಅಧ್ಯಕ್ಷರಾದ ಯಶ್ಪಾಲ್ ಎ ಸುವರ್ಣ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.