ಅಯೋಧ್ಯೆಯ ಶ್ರೀರಾಮಮಂದಿರ ಲೋಕಾರ್ಪಣೆಗೆ ಕೋಡಿಮಠದ ಶ್ರೀಗಳಿಗೆ ಆಹ್ವಾನ

KannadaprabhaNewsNetwork |  
Published : Dec 16, 2023, 02:00 AM IST
ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರಮಹಾಸ್ವಾಮಿ  | Kannada Prabha

ಸಾರಾಂಶ

ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ಅಭಿಜಿನ್ ಮುಹೂರ್ತದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ಆ ಪುಣ್ಯ ಹಾಗೂ ಐತಿಹಾಸಿಕ ಕ್ಷಣಕ್ಕೆ ಪೂಜ್ಯರಾದ ತಾವುಗಳೂ ಹಾಜರಿರಬೇಕು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿ ಕೋಡಿಮಠ ಶ್ರೀಗಳನ್ನು ಆಹ್ವಾನಿಸಿದೆ. ಜ.೨೧ರೊಳಗೆ ತಾವು ಅಯೋಧ್ಯೆಗೆ ಭೇಟಿ ನೀಡುವಂತೆ ಕೋರಲಾಗಿದ್ದು, ವಾಸ್ತವ್ಯಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದೆ.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಮುಂದಿನ ವರ್ಷದ ಜನವರಿ ೨೨ರಂದು ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗೃಹದಲ್ಲಿ ಜರುಗುವ ಪವಿತ್ರ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಹಾರನಹಳ್ಳಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಅವರಿಗೆ ಆಹ್ವಾನ ನೀಡಲಾಗಿದೆ. ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಸಾರಥ್ಯದಲ್ಲಿ ಅಭಿಜಿನ್ ಮುಹೂರ್ತದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ಆ ಪುಣ್ಯ ಹಾಗೂ ಐತಿಹಾಸಿಕ ಕ್ಷಣಕ್ಕೆ ಪೂಜ್ಯರಾದ ತಾವುಗಳೂ ಹಾಜರಿರಬೇಕು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಸಮಿತಿ ಆಹ್ವಾನಿಸಿದೆ. ಜ.೨೧ರೊಳಗೆ ತಾವು ಅಯೋಧ್ಯೆಗೆ ಭೇಟಿ ನೀಡುವಂತೆ ಕೋರಲಾಗಿದ್ದು, ವಾಸ್ತವ್ಯಕ್ಕೆ ಎಲ್ಲಾ ರೀತಿಯ ವ್ಯವಸ್ಥೆ ಮಾಡಲಾಗಿದೆ. ತಡವಾದರೆ ಬೇರೆ ಬೇರೆ ತೊಂದರೆ ಎದುರಾಗಲಿವೆ. ಹಾಗಾಗಿ ಮುಂಚಿತವಾಗಿ ಪೂಜ್ಯರು ಉಪಸ್ಥಿತರಿರುವಂತೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂಪಲ್ ರೈ ವಿನಂತಿಸಿದ್ದಾರೆ.

ಉದ್ಘಾಟನೆಗೆ ಸಜ್ಜಾಗಿರುವ ಅಯೋಧ್ಯಾ ಶ್ರೀರಾಮ ಮಂದಿರ ಹತ್ತು ಹಲವು ವಿಶೇಷತೆ ಹೊಂದಿರುವುದರ ಜೊತೆಗೆ ಇಲ್ಲಿನ ಪೂಜೆ, ಪುನಸ್ಕಾರಗಳೂ ವಿಶಿಷ್ಟವಾಗಿ ನಡೆಯಲಿವೆ. ಆದರೆ, ರಾಮ ಮಂದಿರದಲ್ಲಿ ಭಕ್ತರಿಗೆ ಹರಕೆ ಸೇವೆಗಳೇ ಇರೋದಿಲ್ಲವಂತೆ. ಭಾರತ ದೇಶ ಮಾತ್ರವಲ್ಲ, ವಿಶ್ವದೆಲ್ಲೆಡೆ ಹಿಂದೂಗಳಿಗೆ ಜ.೨೨ ಅತ್ಯಂತ ಮಹತ್ವದ ದಿನ. ಶತಮಾನಗಳ ಕಾಲ ಹಿಂದೂ ಸಮುದಾಯ ಕಾದು ಕುಳಿತಿದ್ದ ಮಹತ್ವದ ಕಾರ್ಯಕ್ರಮವೊಂದು ಆ ದಿನ ನಡೆಯಲಿದೆ. ಶ್ರೀರಾಮ ಮಂದಿರ ಇನ್ನೇನು ಮುಕ್ತಾಯ ಹಂತದಲ್ಲಿದೆ. ಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ಮೂರ್ತಿ, ಅಂದರೆ ಬಾಲ ರಾಮನ ವಿಗ್ರಹದ ಪ್ರಾಣ ಪ್ರತಿಷ್ಠಾಪನೆಗೆ ಜ.೨೨ರಂದು ಮುಹೂರ್ತ ನಿಗದಿ ಆಗಿದೆ.

ಪ್ರಧಾನಿ ಮೋದಿ ಅವರು ರಾಮ ಮಂದಿರದಿಂದ ೫೦೦ ಮೀಟರ್ ದೂರದಲ್ಲಿ ಇರುವ ತಾತ್ಕಾಲಿಕ ನೆಲೆಯಿಂದ ಬಾಲ ರಾಮನ ಮೂರ್ತಿಯನ್ನು ತಮ್ಮ ಕೈಗಳಲ್ಲಿ ಹೊತ್ತು ತಂದು ಕಾಲ್ನಡಿಗೆ ಮೂಲಕವೇ ಶ್ರೀರಾಮ ಮಂದಿರದ ಗರ್ಭಗೃಹ ತಲುಪಲಿದ್ದಾರೆ. ಅಭಿಜಿನ್ ಮುಹೂರ್ತದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಆಗಲಿದೆ. ಈ ಮೂಲಕ ಶ್ರೀರಾಮನ ಭವ್ಯ ಮಂದಿರವನ್ನ ಪ್ರಧಾನಿ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ.

ಗರ್ಭ ಗೃಹದಲ್ಲಿ ಮೂರ್ತಿ ಪ್ರತಿಷ್ಠಾಪನೆ ಆದ ಬೆನ್ನಲ್ಲೇ ಬ್ರಹ್ಮ ಕಲಶೋತ್ಸವ ಕೂಡ ಶುರುವಾಗಲಿದೆ. ಜ.೨೨ರಿಂದ ಮಾರ್ಚ್ ೧೦ರವರೆಗೆ ೪೮ ದಿನಗಳ ಕಾಲ ಬ್ರಹ್ಮ ಕಲಶೋತ್ಸವ ನಡೆಯಲಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶಿವಶಂಕರ ಶ್ರೀಗಳ ಜ್ಞಾನಮಾರ್ಗ ನಮಗೆ ಆದರ್ಶ
ಮುಂದಿನ ಪೀಳಿಗೆ ಧರ್ಮವಂತರಾಗಿಸೋದೆ ಜೈನ ಧರ್ಮದ ಉದ್ದೇಶ: ಜೈನಮುನಿ ಕುಲರತ್ನಭೂಷಣ ಮಹಾರಾಜರು