ಹುಬ್ಬಳ್ಳಿ:
ದೆಹಲಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ನೇತೃತ್ವದಲ್ಲಿ ಸಚಿವ ಗೋಯಲ್ ಅವರನ್ನು ಭೇಟಿಯಾಗಿ ಕಾರ್ಯಕ್ರಮದ ಉದ್ದೇಶ, ವ್ಯಾಪ್ತಿ, ಕೈಗಾರಿಕೆ-ವ್ಯಾಪಾರ ಅಭಿವೃದ್ಧಿಗೆ ಈ ಕಾರ್ಯಕ್ರಮದಿಂದ ಆಗುವ ಪ್ರಯೋಜನಗಳನ್ನು ವಿವರಿಸಲಾಯಿತು.
ಬಳಿಕ ಕೇಂದ್ರ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯಿಂದ ಸಹಕಾರ ನೀಡುವ ಜತೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಕೋರಲಾಯಿತು. ಮನವಿಗೆ ಸ್ಪಂದಿಸಿದ ಸಚಿವರು ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವುದಾಗಿ ಭರವಸೆ ನೀಡಿದರು.ಈ ವೇಳೆ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಉಪಾಧ್ಯಕ್ಷ ವೀರಣ್ಣ ಕಲ್ಲೂರ, ಗೌರವ ಕಾರ್ಯದರ್ಶಿ ಉದಯ ರೇವಣಕರ, ಜಂಟಿ ಗೌರವ ಕಾರ್ಯದರ್ಶಿ ಪ್ರಕಾಶ ಶೃಂಗೇರಿ ಹಾಗೂ ಇನ್ಕಾಮೆಕ್ಸ್ 2026ರ ಚೇರಮನ್ ಎಂ.ವಿ. ಕರಮರಿ ಹಾಗೂ ಗೋವಿಂದ ಜೋಶಿ ಉಪಸ್ಥಿತರಿದ್ದರು.