ನಿವೇಶನ ಹಂಚಿಕೆಯಲ್ಲಿ ಅಕ್ರಮ: ಗ್ರಾಪಂ ವಿರುದ್ಧ ಪ್ರತಿಭಟನೆ

KannadaprabhaNewsNetwork |  
Published : Jan 10, 2025, 12:47 AM IST
ಗುಬ್ಬಿ ತಾಲ್ಲೂಕಿನ ಕಲ್ಲೂರು ಗ್ರಾಮ ಪಂಚಾಯಿತಿ ಆಡಳಿತದ ವಿರುದ್ಧ ನಡೆದ ಬೃಹತ್  ಪ್ರತಿಭಟನೆ ನಡೆಸಿದ ನಂತರ ಸಾಮಾಜಿಕ ಹೋರಾಟಗಾರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಶಿವಪ್ರಕಾಶ್  ನಂತರ ಸಾಮಾಜಿಕ ಹೋರಾಟಗಾರ ಮಂಜುನಾಥ್ ಮನವಿ ಪತ್ರ ನೀಡಿದರು.                           | Kannada Prabha

ಸಾರಾಂಶ

ತಾಲೂಕಿನ ಕಡಬ ಹೋಬಳಿಯ ಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿದೇವನಹಳ್ಳಿ ಗ್ರಾಮದಲ್ಲಿ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಇ-ಖಾತೆ ಮಾಡಿರುವ ಬಗ್ಗೆ ಹಾಗೂ ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಚಾಯಿತಿ ಮುಂಭಾಗದಲ್ಲಿ ದಲಿತಪರ ಸಂಘಟನೆ ನೇತೃತ್ವದಲ್ಲಿ ಸಾಮಾಜಿಕ ಹೋರಾಟಗಾರರು ಹಾಗೂ ಕಲ್ಲೂರು ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಗುಬ್ಬಿ

ತಾಲೂಕಿನ ಕಡಬ ಹೋಬಳಿಯ ಕಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿದೇವನಹಳ್ಳಿ ಗ್ರಾಮದಲ್ಲಿ ನಿವೇಶನಗಳ ಹಂಚಿಕೆಯಲ್ಲಿ ಅಕ್ರಮ ಇ-ಖಾತೆ ಮಾಡಿರುವ ಬಗ್ಗೆ ಹಾಗೂ ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಚಾಯಿತಿ ಮುಂಭಾಗದಲ್ಲಿ ದಲಿತಪರ ಸಂಘಟನೆ ನೇತೃತ್ವದಲ್ಲಿ ಸಾಮಾಜಿಕ ಹೋರಾಟಗಾರರು ಹಾಗೂ ಕಲ್ಲೂರು ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು.ಈ ವೇಳೆ ಮಾತನಾಡಿದ ಸಾಮಾಜಿಕ ಹೋರಾಟಗಾರ, ಗ್ರಾಮದ ಮುಖಂಡ ಕಲ್ಲೂರು ಮಂಜುನಾಥ್, ಹರಿದೇವನಹಳ್ಳಿಯಲ್ಲಿ ದಿವಂಗತ ಮಾಜಿ ಶಾಸಕ ಶಿವನಂಜಪ್ಪನವರ ಕಾಲದಲ್ಲಿ 102 ನಿವೇಶನಗಳನ್ನು ಹಂಚಿಕೆ ಮಾಡಲಾಗಿತ್ತು. ಆದರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಲಿತರಿಗೆ ನೀಡಬೇಕಿದ್ದ ನಿವೇಶನಗಳನ್ನು ಪ್ರಭಾವಿಗಳ ಒತ್ತಡಕ್ಕೆ ಮಣಿದು ಉಳ್ಳವರ ಪರವಾಗಿ ಇ -ಸ್ವತ್ತು ಮಾಡಿಕೊಟ್ಟಿದ್ದಾರೆ. ಕಳೆದ ಮೂರು ವರ್ಷಗಳಿಂದಲೂ ಇದರ ಬಗ್ಗೆ ಹೋರಾಟ ಮಾಡುತ್ತಾ ಬಂದಿದ್ದರೂ ಸ್ಥಳೀಯ ಗ್ರಾಮ ಪಂಚಾಯಿತಿ ಸದಸ್ಯರ ಪ್ರಭಾವದಿಂದ ಕಾನೂನು ಬಾಹೀರವಾಗಿ ನಡೆದಕೊಂಡಿದ್ದಾರೆ. ಈ ಬಗ್ಗೆ ಶಾಸಕ ಕೃಷ್ಣಪ್ಪನವರ ಬಳಿ ಚರ್ಚಿಸಿದ್ದು, ಶಾಸಕರು ಎಲ್ಲ ಸಮುದಾಯದ ಜನರಿಗೂ ಸಮಾನವಾಗಿ ಹಂಚಿಕೆ ಮಾಡಬೇಕೆಂದು ತಿಳಿಸಿದ್ದರೂ ಕೂಡ ಗ್ರಾಮ ಪಂಚಾಯಿತಿ ಪಿಡಿಒ ಇದನ್ನು ಗಮನಿಸದೆ ಪ್ರಭಾವಿಗಳ ಪರವಾಗಿ ನಿಂತಿರುವುದು ದಲಿತರಿಗೆ ಮಾಡುತ್ತಿರುವ ಅನ್ಯಾಯ ಎಂದು ಆಕ್ರೋಶ ಹೊರ ಹಾಕಿದರು.

ಪಾಂಡುರಂಗ ದೇವಸ್ಥಾನದ ಸಮೀಪದ ನಿವೇಶನವು ಅಕ್ರಮವಾಗಿ ಉಳ್ಳವರ ಪಾಲಾಗಿದೆ ಈ ಸ್ವತ್ತನ್ನು ಗ್ರಾಮ ಪಂಚಾಯತಿ ಆಡಳಿತ ಈ ನಿವೇಶನದ ಖಾತೆಯನ್ನು ವಜಾಗೊಳಿಸಬೇಕು. ದಲಿತರಿಗೆ ಮೀಸಲಿರಿಸಿರುವ ನಿವೇಶನಗಳನ್ನು ಹಂಚಿಕೆ ಮಾಡಿ ಉಳಿದ ನಿವೇಶನಗಳನ್ನು ಎಲ್ಲಾ ಸಮುದಾಯಗಳಿಗೆ ಜಾತ್ಯತೀತವಾಗಿ ಹಂಚಿಕೆ ಮಾಡಬೇಕೆಂದು ಒತ್ತಾಯಿಸಿದರು. ದಲಿತ ಮುಖಂಡ ಚೇಳೂರು ಶಿವನಂದಪ್ಪ ಮಾತನಾಡಿ ಕಲ್ಲೂರು ಗ್ರಾಮ ಪಂಚಾಯಿತಿಯಲ್ಲಿ ನಿವೇಶನಗಳ ಹಂಚಿಕೆಯಲ್ಲಿ ಭಾರಿ ಅಕ್ರಮ ನಡೆದಿದೆ. ಗ್ರಾಮ ಪಂಚಾಯಿತಿ ಪಿಡಿಒ ಪ್ರಭಾವಿಗಳ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ಘಟನೆಗಳು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲೂ ನಡೆಯುತ್ತಿದೆ. ತಾಲೂಕು ಮಟ್ಟದ ಅಧಿಕಾರಿಗಳು ಇತ್ತ ಗಮನ ಹರಿಸಿ ದಲಿತರಿಗೆ, ಬಡವರಿಗೆ ಶೋಷಿತರಿಗೆ ನ್ಯಾಯ ಒದಗಿಸಬೇಕು ಹಾಗೂ ನಿವೇಶನಗಳ ಈ ಸ್ವತ್ತು ಖಾತೆ ಮಾಡಿಕೊಡಲು ಅಕ್ರಮ ಭ್ರಷ್ಟಾಚಾರ ಎಸುಗುತ್ತಿರುವುದು ಬೆಳಕಿಗೆ ಬಂದಿದ್ದು ಇದಕ್ಕೆ ಅಧಿಕಾರಿಗಳು ಕಡಿವಾಣ ಹಾಕಬೇಕು. ಇಲ್ಲದೆ ಹೋದರೆ ಭ್ರಷ್ಟಾಚಾರದ ವಿರುದ್ಧ ತಾಲೂಕಿನಲ್ಲಿ ಬೃಹತ್ ಪಟ್ಟದ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಶಿವಪ್ರಕಾಶ್ ಪ್ರತಿಭಟನಾಕಾರರನ್ನು ಮನವೊಲಿಸಿ, ಸಮಸ್ಯೆಯನ್ನು ಶೀಘ್ರ ಪರಿಹರಿಸುವುದಾಗಿ ಮನವೊಲಿಸಿ ಮಾತನಾಡಿದ ಅವರು ಹರಿದೇವನಹಳ್ಳಿಯಲ್ಲಿ ನಡೆದಿರುವ ನಿವೇಶನಗಳ ಹಂಚಿಕೆಗಳಲ್ಲಿನ ಅಕ್ರಮದ ಬಗ್ಗೆ ಪರಿಶೀಲಿಸಿ ಸೂಕ್ತ ಕಾನೂನು ಕ್ರಮ ತೆಗೆದುಕೊಂಡು ನಿವೇಶನ ರಹಿತರಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು. ನಂತರ ಪ್ರತಿಭಟನಾಕಾರರು ಪ್ರತಿಭಟನೆಯನ್ನು ಹಿಂಪಡೆದರು.ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜುಲೇಖಾಬಿ, ಮಹಮದ್ ಯೂಸುಫ್, ಉಪಾಧ್ಯಕ್ಷೆ ಸುಮಿತ್ರ ಶಿವಯ್ಯ, ನರಸಿಯಪ್ಪ, ರುದ್ರ ಪ್ರಕಾಶ್, ಶಾಂತರಾಜು, ಗಿರೀಶ್, ಗೋವಿಂದರಾಜು, ಶ್ರೀನಿವಾಸ್, ನಾರನಹಳ್ಳಿ ಶಿವು, ನಾರಾಯಣಪ್ಪ, ಶಿವಲಿಂಗಯ್ಯ, ಶಿವಸ್ವಾಮಿ, ಬಾರೆಮನೆ ಗೋಪಿ, ಚಿದನಂದ್, ಶೇಷಪ್ಪ, ಸುರೇಶ್, ಮಹದೇವಯ್ಯ, ಸೇರಿದಂತೆ ನೂರಾರು ಪ್ರತಿಭಟನಾಕಾರರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!