ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಗುರುವಾರ ಸುದ್ದಿಗಾರೊರೊಂದಿಗೆ ಮಾತನಾಡಿದ ಅವರು, ಸಿಎಂ ಆದವರನ್ನು ಯಾರಾದರೂ ಮುಟ್ಟಿದರೆ ಪೊಲೀಸರು ಕೇಸ್ ಮಾಡಿ ಒಳಗೆ ಹಾಕುತ್ತಾರೆ. ಮುಟ್ಟಲು ಆಗುವುದಿಲ್ಲ. ಎರಡನೇ ಬಾರಿ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯ ಅವರು ಜನರ ಭಾವನೆ ಕೆರಳಿಸುವಂತೆ ಮಾಡನಾಡುವುದು ಎಷ್ಟು ಸರಿ ಎಂದು ಖಾರವಾಗಿ ಪ್ರಶ್ನಿಸಿದರು.
ಸಿದ್ದರಾಮಯ್ಯ ಅನುಭವಿ ರಾಜಕಾರಣಿ. ಅವರು ಏನು ಮಾತನಾಡುತ್ತಾರೆ ಎನ್ನುವುದು ಅವರಿಗೆ ಬಿಡುತ್ತೇನೆ. ಸಾಮಾನ್ಯ ಜನರ ಭಾವನೆಗೆ ತದ್ವಿರುದ್ಧವಾಗಿ ಮಾತನಾಡುವುದು ಎಷ್ಟರ ಮಟ್ಟಿಗೆ ಸಮಂಜಸ? ರಾಜ್ಯ ಸರ್ಕಾರದ ಕಾರ್ಯವೈಖರಿ ಸರಿಯಿಲ್ಲ. ಈ ಮಟ್ಟದಲ್ಲಿ ಯಾವತ್ತಾದರೂ ನಡೆದಿತ್ತಾ? ನಿಮ್ಮನ್ನು ಯಾರು ಮುಟ್ಟುವುದು ಬೇಡ. ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಗಮನ ಹರಿಸಿ ಎಂದು ಸಲಹೆ ನೀಡಿದರು.ಬೆಳಗಾವಿ- ಧಾರವಾಡ ನೇರ ರೈಲು ಮಾರ್ಗ ದಿ.ಸುರೇಶ ಅಂಗಡಿ ಅವರ ಕನಸು. ಅದನ್ನು ಇದೇ ಅವಧಿಯಲ್ಲಿ ನನಸು ಮಾಡುವ ಪ್ರಯತ್ನ ಮಾಡುತ್ತೇವೆ. ಈ ಮಾರ್ಗ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಸಂಕೀರ್ಣ ಮತ್ತು ಸಮಸ್ಯೆಯಾಗಿದೆ. ಅದರ ಕುರಿತು ಚರ್ಚಿಸಿ ಪರಿಹರಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿವರು ಸಹ ಇದೇ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ರೈಲು ಓಡಿಸಲು ನಿರ್ಧರಿಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕೂಡ ಗಂಭೀರವಾಗಿ ಪರಿಗಣಿಸಿದ್ದಾರೆ ಎಂದರು.