ಶಿಕ್ಷಕರ ದಿನಾಚರಣೆ ಸಮಯವನ್ನೇ ಬದಲಿಸುವುದು ಎಷ್ಟು ಸರಿ?

KannadaprabhaNewsNetwork |  
Published : Sep 07, 2026, 01:15 AM IST
ಚಿತ್ರ 6ಬಿಡಿಆರ್4ಬೀದರ್‌ ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾಲ್ಕಿಯ ದಲಿತ ಮುಖಂಡ ವಿಲಾಸ ಮೋರೆ ಮಾತನಾಡಿದರು. | Kannada Prabha

ಸಾರಾಂಶ

Is it right to change the time of Teachers' Day?

-ಪ್ರಜಾಸೇವಾ ಆಂದೋಲನಕ್ಕಾಗಿ ಶಿಕ್ಷಕರ ದಿನದ ಗೌರವಕ್ಕೆ ಧಕ್ಕೆ: ಶಶೀಲ್ ಜಿ ನಮೋಶಿ ಆಕ್ಷೇಪ

------

ಕನ್ನಡಪ್ರಭ ವಾರ್ತೆ ಕಲಬುರಗಿ

ಸೆಪ್ಟೆಂಬರ್ 5ರಂದು ದೇಶದಾದ್ಯಂತ ಶಿಕ್ಷಕರ ದಿನಾಚರಣೆ ನಡೆಯುವ ಸಂದರ್ಭದಲ್ಲಿ ಕರ್ನಾಟಕ ಸರ್ಕಾರವು ಅದೇ ದಿನ ಬೆ. 11ರಿಂದ ಮಧ್ಯಾಹ್ನ 3ರವರೆಗೆ ‘ಪ್ರಜಾಸೇವಾ ಆಂದೋಲನ’ ಸಭೆಗಳನ್ನು ನಡೆಸಿ, ನಂತರ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಮಧ್ಯಾಹ್ನ 3 ಗಂಟೆಗೆ ನಡೆಸುವಂತೆ ಸೂಚಿಸಿತ್ತು. ಈ ಬೆಳವಣಿಗೆ ಶಿಕ್ಷಕ ಸಮುದಾಯಕ್ಕೆನೋವು ಮಾಡಿದೆ ಎಂದು ವಿಪ ಸದಸ್ಯ ಶಶೀಲ್ ಜಿ ನಮೋಶಿ ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರದ ಆಗಸ್ಟ್ 27, 2026ರ ಸೂಚನೆಯಂತೆ ಸೆಪ್ಟೆಂಬರ್ 5ರಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ.

ಈ ಸಭೆಗಳಿಗಾಗಿ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಂಬಂಧಪಟ್ಟ ಸಿಬ್ಬಂದಿಯನ್ನು ನಿಯೋಜಿಸುವುದು ಆಡಳಿತಾತ್ಮಕವಾಗಿ ಅರ್ಥವಾಗಬಹುದು. ಆದರೆ ಶಿಕ್ಷಕರನ್ನು ಈ ರೀತಿಯ ಆಡಳಿತಾತ್ಮಕ ಕಾರ್ಯಕ್ರಮಗಳೊಂದಿಗೆ ಜೋಡಿಸಿ, ಶಿಕ್ಷಕರ ದಿನಾಚರಣೆಯ ಮೂಲ ಕಾರ್ಯಕ್ರಮವನ್ನೇ ಮಧ್ಯಾಹ್ನಕ್ಕೆ ಮುಂದೂಡುವುದು ಎಷ್ಟು ಸಮಂಜಸ? ಎಂಬ ಪ್ರಶ್ನೆ ಈಗ ಎದುರಾಗಿದೆ.

ಶಿಕ್ಷಕರ ದಿನಾಚರಣೆ ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಲ್ಲ. ಗುರು-ಶಿಷ್ಯ ಪರಂಪರೆ, ಶಿಕ್ಷಣ ಕ್ಷೇತ್ರದ ಸೇವೆ ಮತ್ತು ಶಿಕ್ಷಕರ ಕೊಡುಗೆಯನ್ನು ಗೌರವಿಸುವ ವಿಶೇಷ ದಿನ. ಇಂತಹ ದಿನದಂದು ಶಿಕ್ಷಕರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮಕ್ಕೆ ಆದ್ಯತೆ ನೀಡಬೇಕೇ ಹೊರತು, ಮತ್ತೊಂದು ಆಡಳಿತಾತ್ಮಕ ಕಾರ್ಯಕ್ರಮಕ್ಕೆ ಅನುಕೂಲವಾಗುವಂತೆ ಸಮಯ ಬದಲಿಸಿದ್ದು ಸೂಕ್ತವಲ್ಲ ಎಂಬ ಅಭಿಪ್ರಾಯ ನಮೋಶಿ ವ್ಯಕ್ತಪಡಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನೀರು ಪೂರೈಸಲು ಒತ್ತಾಯಿಸಿ ರಸ್ತೆ ತಡೆ ಚಳುವಳಿ
ಹೋರಾಟದ ಹಾದಿ ಹಿಡಿದಾದರು ಬರ ಪರಿಹಾರ ಪಡೆಯುತ್ತೇವೆ: ಸಚಿವ ಯತೀಂದ್ರ ಸಿದ್ದರಾಮಯ್ಯ