ಮಂಗಳೂರು ಕುಕ್ಕರ್‌ ಸ್ಫೋಟ ಮಾಮೂಲಿ ಘಟನೆಯೇ?

KannadaprabhaNewsNetwork |  
Published : Jan 18, 2024, 02:08 AM IST
ಆಟೋ ಚಾಲಕಗೆ ಚೆಕ್ಹೆ ್ಹಸ್ತಾಂತರಿಸಿದ ಚ್ಚುವರಿ ಎಡಿಸಿ ಡಾ.ಸಂತೋಷ್ ಕುಮಾರ್‌  | Kannada Prabha

ಸಾರಾಂಶ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಂತ್ರಸ್ತ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಎರಡು ಲಕ್ಷ ರು.ಹಸ್ತಾಂತರಿಸಲಾಗಿದೆ. ಘಟನೆ ದೇಶಾದ್ಯಂತ ಶಂಕಿತ ಉಗ್ರ ಕೃತ್ಯ ಎಂದು ಸದ್ದುಮಾಡಿದರೂ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯ ಆದೇಶ ಪತ್ರದಲ್ಲಿ ಅದೊಂದು ಮಾಮೂಲಿ ಘಟನೆ ಎಂಬಂತೆ ಉಲ್ಲೇಖಿಸಲಾಗಿದೆ!

ಕನ್ನಡಪ್ರಭ ವಾರ್ತೆ ಮಂಗಳೂರು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಸಂತ್ರಸ್ತ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಎರಡು ಲಕ್ಷ ರು. ಹಸ್ತಾಂತರಿಸಲಾಗಿದೆ. ಕುಕ್ಕರ್‌ ಬಾಂಬ್‌ ಸ್ಫೋಟ ಘಟನೆ ದೇಶಾದ್ಯಂತ ಶಂಕಿತ ಉಗ್ರ ಕೃತ್ಯ ಎಂದು ಸದ್ದುಮಾಡಿದರೂ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯ ಆದೇಶ ಪತ್ರದಲ್ಲಿ ಅದೊಂದು ಮಾಮೂಲಿ ಘಟನೆ ಎಂಬಂತೆ ಉಲ್ಲೇಖಿಸಲಾಗಿದೆ!

ಜ.1ರಂದು ಸಿಎಂ ಪರಿಹಾರ ನಿಧಿಯಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಖಾತೆಗೆ ಎರಡು ಲಕ್ಷ ರು. ಬಿಡುಗಡೆ ಮಾಡಲಾಗಿತ್ತು. ಪರಿಹಾರ ಮೊತ್ತದ ಚೆಕ್‌ನ್ನು ಮಾಜಿ ಎಂಎಲ್‌ಸಿ ಐವನ್‌ ಡಿಸೋಜಾ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪುರುಷೋತ್ತಮ ಪೂಜಾರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಂತೋಷ್‌ ಕುಮಾರ್‌ ಹಸ್ತಾಂತರಿಸಿದರು.

ಈ ಕುರಿತು ರಾಜ್ಯ ಸರ್ಕಾರದ ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆಯಿಂದ ಸಿಎಂ ಜಂಟಿ ಕಾರ್ಯದರ್ಶಿ ಪಿ.ಎ. ಗೋಪಾಲ್ ಹೊರಡಿಸಿದ್ದ ಆದೇಶ ಪತ್ರದಲ್ಲಿ ಕುಕ್ಕ‌ರ್ ಬಾಂಬ್ ಪ್ರಕರಣವನ್ನು ಯಾವುದೋ ಮಾಮೂಲಿ ಘಟನೆ ಎನ್ನುವಂತೆ ಉಲ್ಲೇಖಿಸಲಾಗಿದೆ.

ಪುರುಷೋತ್ತಮ ಪೂಜಾರಿ ಮಂಗಳೂರಿನಲ್ಲಿ ಆಟೋ ಚಾಲಕರಾಗಿ ವೃತ್ತಿ ಜೀವನ ನಡೆಸುತ್ತಿದ್ದು, ಒಮ್ಮೆ ಆಟೋದಲ್ಲಿ ಪ್ರಯಾಣಿಕರೊಬ್ಬರು ಹಿಡಿದುಕೊಂಡಿದ್ದ ಕುಕ್ಕರ್ ಸಿಡಿದು ಆಟೋ ರಿಕ್ಷಾ ನಜ್ಜುಗುಜ್ಜಾಗಿದ್ದಲ್ಲದೆ, ಅವರು ತೀವ್ರ ಸ್ವರೂಪದ ಸುಟ್ಟ ಗಾಯದಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು ಎಂದು ಉಲ್ಲೇಖ ಮಾಡಲಾಗಿದೆ.

ಕುಕ್ಕರ್‌ನಲ್ಲಿ ಬಾಂಬ್ ಹಿಡಿದುಕೊಂಡು ಬಂದಿದ್ದ ಆರೋಪಿ ಪ್ರಯಾಣಿಕ ಮೊಹಮ್ಮದ್ ಶಾರೀಕ್ ಭಯೋತ್ಪಾದಕ ಕೃತ್ಯ ಎಸಗುವುದಕ್ಕಾಗಿಯೇ ತರುತ್ತಿದ್ದೆ ಎಂದು ಪೊಲೀಸ್‌ ತನಿಖೆಯಲ್ಲಿ ಒಪ್ಪಿಕೊಂಡಿದ್ದಲ್ಲದೆ, ಘಟನೆ ಬಗ್ಗೆ ಎನ್‌ಐಎ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದೆ.

ಪುರುಷೋತ್ತಮ ಪೂಜಾರಿ ಅವರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು ನೀಡುವಂತೆ ಐವನ್‌ ಡಿಸೋಜಾ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದ್ದರು. ಇದನ್ನು ಪರಿಗಣಿಸಿ ಸಿದ್ದರಾಮಯ್ಯ ಅವರು ಘಟನೆಗೆ ವಿಷಾದ ವ್ಯಕ್ತಪಡಿಸಿ, ವಿಶೇಷ ಪ್ರಕರಣದಡಿ ಎರಡು ಲಕ್ಷ ರು. ಪರಿಹಾರ ಮಂಜೂರು ಮಾಡಿ ಆದೇಶ ಮಾಡಿದ್ದರು. ಈ ಮೊತ್ತವನ್ನು ಜ.1ರಂದು ಜಿಲ್ಲಾಧಿಕಾರಿ ಖಾತೆಗೆ ಬಿಡುಗಡೆ ಮಾಡಿದ್ದಾಗಿ ಪರಿಹಾರ ನಿಧಿ ವಿಭಾಗದ ಅಧಿಕಾರಿ ಆದೇಶ ಪತ್ರದಲ್ಲಿ ತಿಳಿಸಿದ್ದರು.

ಕುಕ್ಕರ್‌ನಲ್ಲಿ ಬಾಂಬ್ ಹಿಡಿದುಕೊಂಡು ಬಂದಿದ್ದ ಆರೋಪಿ ಪ್ರಯಾಣಿಕ ಮೊಹಮ್ಮದ್ ಶಾರೀಕ್ ಭಯೋತ್ಪಾದಕ ಕೃತ್ಯ ಎಸಗುವುದಕ್ಕಾಗಿಯೇ ತರುತ್ತಿದ್ದೆ ಎಂದು ಪೊಲೀಸ್‌ ತನಿಖೆಯಲ್ಲಿ ಒಪ್ಪಿಕೊಂಡಿದ್ದಲ್ಲದೆ, ಘಟನೆ ಬಗ್ಗೆ ಎನ್‌ಐಎ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನೂ ಸಲ್ಲಿಸಿದೆ. ಹೀಗಿದ್ದರೂ ಕುಕ್ಕರ್ ಬಾಂಬ್ ಎಂದು ಒಪ್ಪಿಕೊಳ್ಳದೆ ಅದು ಮಾಮೂಲಿ ಕುಕ್ಕ‌ರ್ ಸಿಡಿದ ಘಟನೆ ಎಂಬಂತೆ ರಾಜ್ಯ ಸರ್ಕಾರ ಆದೇಶ ಪತ್ರದಲ್ಲಿ ಉಲ್ಲೇಖಿಸಿರುವುದು ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಸಾಕಷ್ಟು ಕೊಡುಗೆ
ತೆರಿಗೆ ವಂಚಿಸಿದ 10 ಸಾವಿರ ಆಸ್ತಿ ಡ್ರೋನ್‌ ಮೂಲಕ ಪತ್ತೆ