-ಸಂಸದ ಕೋಟ ಶ್ರೀನಿವಾಸ್ ಪೂಜಾರಿ ನಿರ್ದೇಶನ । ಜಿಲ್ಲಾ ಅಭಿವೃದ್ಧಿ ಸಮನ್ವಯ, ಉಸ್ತುವಾರಿ ಸಮಿತಿ (ದಿಶಾ)ಸಭೆ
ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಆಯುಷ್ಮಾನ್ ಯೋಜನೆಯಡಿ ನೋಂದಣಿ ಮಾಡಿಕೊಳ್ಳದ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಜಾರಿಗೊಳಿಸಿ ಎಂದು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ನಿರ್ದೇಶಿಸಿದರು.
ಕುವೆಂಪು ಕಲಾಮಂದಿರದಲ್ಲಿ ಬುಧವಾರ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ (ದಿಶಾ)ಸಭೆಯಲ್ಲಿ ಮಾತನಾಡಿ ಆಯುಷ್ಮಾನ್ ಯೋಜನೆಯಡಿ ನೋಂದಣಿ ಮಾಡದ ಹತ್ತು ಹಾಗೂ ಅದಕ್ಕಿಂತ ಹೆಚ್ಚಿನ ಹಾಸಿಗೆ ಸಾಮರ್ಥ್ಯದ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ಜಾರಿಗೊಳಿಸಲು ಸೂಚಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡಿಎಚ್ಒ ಮಂಜುನಾಥ್ ಉತ್ತರಿಸಿ ಜಿಲ್ಲೆಯಲ್ಲಿ ಒಟ್ಟು 103 ಸರ್ಕಾರಿ , 26 ಖಾಸಗಿ ಆಸ್ಪತ್ರೆ ಇವೆ. ಸರ್ಕಾರಿ ಆಸ್ಪತ್ರೆಗಳು ಆಯುಷ್ಮಾನ್ ನೋಂದಣಿ ಮಾಡಿವೆ. 26 ಖಾಸಗಿ ಆಸ್ಪತ್ರೆ ಪೈಕಿ ಚಿಕ್ಕಮಗಳೂರಿನ ಆಶ್ರಯ, ಕೆಆರ್ಎಸ್, ಕಡೂರಿನ ಮಧು ಆರ್ಥೋಪಿಡಿಕ್, ಬಾಲಾಜಿ ಸೇರಿದಂತೆ ಆರು ಪ್ರಮುಖ ಆಸ್ಪತ್ರೆ ಮಾತ್ರ ನೋಂದಣಿ ಮಾಡಿದ್ದು, ಎಬಿಆರ್ಕೆಯಡಿ ಶಿಫಾರಸು ಮಾಡಿದ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿವೆ. ಆದರೆ. ಉಳಿದ ಆಸ್ಪತ್ರೆ ಗಳು ನೋಂದಣಿ ಮಾಡಿಲ್ಲ ಎಂದು ಮಾಹಿತಿ ನೀಡಿದರು. ಈ ಬಗ್ಗೆ ಪರಿಶೀಲನೆ ನಡೆಸಿ 10 ಹಾಸಿಗೆಗಿಂತ ಹೆಚ್ಚಿರುವ ಆಸ್ಪತ್ರೆಗಳಿಗೆ ನೋಟಿಸ್ ಜಾರಿಗೊಳಿಸಿ ನೋಂದಣಿ ಮಾಡಲು ಸೂಚಿಸಲಾಗುವುದು ಎಂದು ತಿಳಿಸಿದರು.
ಈ ಬಗ್ಗೆ ಇಎಸ್ಐ ಆಯುಕ್ತರು ಸೇರಿದಂತೆ ಮೊದಲಾದ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಕೇಂದ್ರ ಸರ್ಕಾರ ಅನು ಮತಿ ನೀಡಬೇಕಿದೆ. ಈ ಬಗ್ಗೆ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿಂದು ಕೋಟ ಶ್ರೀನಿವಾಸ್ ಪೂಜಾರಿಗೆ ಒತ್ತಾಯಿಸಿದರು. ಪ್ರತಿಕ್ರಿಯಿಸಿದ ಸಂಸದರು ಸೆ.14 ರಂದು ಈ ಬಗ್ಗೆ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಆನ್ಲೈನ್ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳೋಣ ಎಂದರು.------- ಬಾಕ್ಸ್--
ಹ್ಯಾಂಡ್ ಪೋಸ್ಟ್ನಿಂದ ಕಾಮಗಾರಿ ಮಾಡಿ: ನಯನಾಭೂಸ್ವಾಧೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಿ ವಿಳಂಬ ಸಹಿಸುವುದಿಲ್ಲ. ಮೂಡಿಗೆರೆ ಹ್ಯಾಂಡ್ ಪೋಸ್ಟ್ ಕಡೆಯಿಂದ ಕಾಮಗಾರಿಗೆ ಆರಂಭಿಸಬೇಕೆಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಒತ್ತಾಯಿಸಿದರು.
ಹೆಚ್ಚಿನ ಪರಿಹಾರ ಕೊಟ್ಟು ಭೂಸ್ವಾಧೀನ ಮಾಡಿ: ತಮ್ಮಯ್ಯ
ಮಳೆಗಾಲ ಆರಂಭಕ್ಕೂ ಮುನ್ನ ಲೋಕೋಪಯೋಗಿ ಇಲಾಖೆ ದುರಸ್ತಿ ಕಾಮಗಾರಿ ನಡೆಸಿದ ರಸ್ತೆಗಳಲ್ಲಿ ಮತ್ತೆ ಗುಂಡಿ ನಿರ್ಮಾಣವಾಗಿವೆ ಎಂದು ವಿಧಾನ ಪರಿಷತ್ತು ಸದಸ್ಯೆ ಗಾಯತ್ರಿ ಶಾಂತೇಗೌಡ ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಕೇಂದ್ರ ಸರ್ಕಾರದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಗೆ ರಾಜ್ಯ ಸರ್ಕಾರದ ಅಧಿಕಾರಿಗಳು ಭಾಗ ವಹಿಸದಿರುವ ಬಗ್ಗೆಯೂ ಅಸಮಾಧಾನ ಗೊಂಡು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಡಿಸಿಗೆ ಸೂಚಿಸಿದರು.
---ಬಾಕ್ಸ್---ಕಾಮಗಾರಿ ಗುಂಡಿಗೆ ಬಿದ್ದು ಕೈ ಮುರಿತಅಜ್ಜಂಪುರ ವ್ಯಾಪ್ತಿಯ ಅಮೃತ್ ಯೋಜನೆ ಕಾಮಗಾರಿ ಮಾಡಿ ಸರಿಯಾಗಿ ಗುಂಡಿ ಮುಚ್ಚಿಲ್ಲ. ಈ ಗುಂಡಿಯಲ್ಲಿ ಬಿದ್ದು ಕೈ ಮುರಿದಿದೆ ಎಂದು ಅಜ್ಜಂಪುರ ಪಪಂ ಅಧ್ಯಕ್ಷ ರೇವಣ್ಣ ಸಭೆ ಗಮನಕ್ಕೆ ತಂದರು. ಗುಂಡಿ ಮುಚ್ಚುವಂತೆ ಹಲವು ಬಾರಿ ಅಧಿಕಾರಿಗಳಿಗೆ ಫೋನ್ ಮಾಡಿದರೂ ಸ್ಪಂದಿಸುತ್ತಿಲ್ಲ ಎಂದು ಅಸಮಾಧಾನ ಹೊರ ಹಾಕಿದರು.-- ಬಾಕ್ಸ್ --ಕೇಂದ್ರದಿಂದ ಅನುದಾನ ಬಂದಿಲ್ಲ: ಅಸಮಾಧಾನ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಯೋಗದಲ್ಲಿ ಕೈಗೊಳ್ಳುವ ಜೆಜೆಎಂ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಕಳೆದ 2 ವರ್ಷದಿಂದ ಕೇಂದ್ರ ಸರ್ಕಾರ ಅನುದಾನ ನೀಡಿಲ್ಲ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಅಸಮಾಧಾನ ವ್ಯಕ್ತಪಡಿಸಿದರು. ಹಣ ನೀಡದೇ ಪ್ರಗತಿ ಪರಿಶೀಲನೆ ಸಭೆ ಮಾಡುವುದರಿಂದ ಏನು ಪ್ರಯೋಜನ ಎಂದು ಪ್ರಶ್ನಿಸಿದರು.ಇದೇ ವೇಳೆ ಗ್ರಾಪಂ ಅಧಿಕಾರಾವಧಿ ಇದೀಗ ಮುಕ್ತಾಯಗೊಂಡಿದೆ. ಆದರೆ, ಕೇಂದ್ರ ಸರ್ಕಾರ ಕಳೆದ 2 ಸಾಲಿನಿಂದ 15ನೇ ಹಣಕಾಸು ಆಯೋಗದ ಅನುದಾನ ನೀಡಿಲ್ಲ ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಪ್ರಶ್ನಿಸಿದರು.