ನೇರಲಕೆರೆ ಗ್ರಾಮದಲ್ಲಿ ಡ್ರೋನ್ ಪ್ರಾತ್ಯಕ್ಷಿಕೆ ಕಾರ್ಯಕ್ರಮ
ಡ್ರೋನ್ ತಂತ್ರಜ್ಞಾನದಿಂದ ಮರಗಳಿಗೆ ಸುಲಭ ಹಾಗೂ ವೇಗವಾಗಿ ಔಷಧ ಸಿಂಪಡಣೆ ಮಾಡಬಹುದು ಎಂದು ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕೀಟನಾಶಕ ಪ್ರಾಧ್ಯಾಪಕರಾದ ಡಾ.ಜಯಲಕ್ಷ್ಮಿ ನಾರಾಯಣ ಹೆಗ್ಡೆ ಹೇಳಿದ್ದಾರೆ.
ನೇರಲಕೆರೆ ಗ್ರಾಮದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಇರುವಕ್ಕಿ, ಕೃಷಿ ಮಹಾವಿದ್ಯಾಲಯ ನವಿಲೆ ಶಿವಮೊಗ್ಗ ವಿದ್ಯಾರ್ಥಿಗಳು ಗ್ರಾಮೀಣ ಕೃಷಿ ಕಾರ್ಯಾನುಭವದಡಿ, ಬೆಂಗಳೂರು ಭಾರತೀಯ ಕೃಷಿ ಸಂಪನ್ಮೂಲ ಬ್ಯೂರೋ ಇವರ ಸಹಕಾರದೊಂದಿಗೆ ಏರ್ಪಡಿಸಿದ್ದ ಡ್ರೋನ್ ಪ್ರಾತ್ಯಕ್ಷಿಕೆ ಯಲ್ಲಿ ಮಾತನಾಡುತ್ತಿದ್ದರು.ಸಾವಯವ ಕೃಷಿಗೆ ಪೂರಕವಾದ ರಾಸಾಯನಿಕ ಔಷಧಗಳಲ್ಲದೆ ಸಾವಯವ ಕೀಟ ನಾಶಕವನ್ನು ಡ್ರೋನ್ ಮೂಲಕ ಸಿಂಪಡಣೆ ಮಾಡುವ ವಿಧಾನವನ್ನು ಪರಿಚಯಿಸುವುದೇ ಈ ಪ್ರಾತ್ಯಕ್ಷಿಕೆ ಉದ್ದೇಶ ಎಂದು ಹೇಳಿದರು.
ನವಿಲೆ ಕೃಷಿ ಮಹಾ ವಿದ್ಯಾಲಯ ಸಹಾಯಕ ಪ್ರಾಧ್ಯಾಪಕ ಮತ್ತು ಗ್ರಾಮೀಣ ಕೃಷಿ ಕಾರ್ಯಾನುಭವ ಕಾರ್ಯಕ್ರಮದ ಸಂಯೋಜಕ ಡಾ.ಗಜೇಂದ್ರ ಟಿ.ಎಚ್. ಕೃಷಿ ತೋಟಗಾರಿಗೆ ಸಂಶೋಧನಾ ಕೇಂದ್ರದ ಕೀಟಶಾಸ್ತ್ರ ವಿಜ್ಞಾನಿ ಡಾ.ಪಿ.ಕೃಷ್ಣರೆಡ್ಡಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ತರೀಕೆರೆ ಸಮೀಪದ ನೇರಲಕೆರೆ ಗ್ರಾಮದಲ್ಲಿ ಏರ್ಪಡಿಸಿದ್ದ ಡ್ರೋನ್ ಪ್ರಾತ್ಯಕ್ಷಿಕೆಯಲ್ಲಿ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕೀಟನಾಶಕ ಪ್ರಾಧ್ಯಾಪಕರಾದ ಡಾ.ಜಯಲಕ್ಷ್ಮಿ ನಾರಾಯಣ ಹೆಗ್ಡೆ. ಬೆಂಗಳೂರು ಐಸಿಎಆರ್ ಭಾರತೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ ವಿಜ್ಞಾನಿ ಡಾ.ಕೆ.ಸೆಲ್ವರಾಜ್ ಮತ್ತಿತರರು ಭಾಗವಹಿಸಿದ್ದರು.