ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಣಿಜ್ಯ ವಿದ್ಯುತ್ ದರ ಸಿಕ್ಕಾಪಟ್ಟೆ ಏರಿಕೆ ಮಾಡಿ ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ಹೊರೆ ಮಾಡಿ ವಾಣಿಜ್ಯೋದ್ಯಮಿಗಳು ನಷ್ಟ ಅನುಭವಿಸಿ, ದಿವಾಳಿಯಾಗಿದ್ದಾರೆ. ಆಸ್ತಿ ನೋಂದಣಿ ದರ, ವಾಹನ ನೋಂದಣಿ ದರ, ಮದ್ಯ ದರ , ಒಡಂಬಡಿಕೆ ಪತ್ರಗಳ ಶುಲ್ಕಗಳು ದುಪ್ಪಟ್ಟಾಗಿವೆ. ಅಬಕಾರಿ ಸುಂಕ ಏರಿಕೆ ಮಾಡಿ ಜನರಿಂದ ಹಣ ದೋಚುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಒಂದು ಕಡೆ ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ಜನರಿಗೆ ಹಣ ಕೊಡುತ್ತಿದ್ದೇವೆಂದು ಹೇಳಿ, ಎಲ್ಲ ತೆರಿಗೆ ಹೆಚ್ಚಳ ಮಾಡುವ ಮೂಲಕ ಎಲ್ಲ ಜನರಿಂದಲೂ ಹಣ ದೋಚುವ ಕಾರ್ಯ ನಡೆಯುತ್ತಿದೆ ಎಂದು ಆಪಾದಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಮಹಿಳೆಯರ ಮೇಲಿನ ದೌರ್ಜನ್ಯಗಳು, ಹಿಂದು ಕಾರ್ಯಕರ್ತರ ಕೊಲೆ ಪ್ರಕರಣಗಳು ನಡೆಯುತ್ತಿರುವುದನ್ನು ನೋಡಿದರೆ ಕಾನೂನು ಸುವ್ಯವಸ್ಥೆ ಎಷ್ಟೊಂದು ಹದಗೆಟ್ಟಿದೆ ಎಂಬುದು ತಿಳಿಯುತ್ತದೆ. ಪ್ರೀತಿ, ಪ್ರೇಮದ ಹೆಸರಿನಲ್ಲಿ ಯುವತಿಯರನ್ನು ಕೊಲೆ ಮಾಡುವುದು, ಹಲ್ಲೆ ಮಾಡುವ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಸಮಾಜಘಾತುಕರಿಗೆ ಕಾನೂನಿನ ಹೆದರಿಕೆಯೇ ಇಲ್ಲದಂತಾಗಿದೆ. ಇದಕ್ಕೆ ಕಡಿವಾಣ ಹಾಕುವುದು ಯಾವಾಗ ಎಂದು ಪ್ರಶ್ನಿಸಿದರು.ಬಿಜೆಪಿ ಸರ್ಕಾರ ಮಾಡಿದ ಹಲವಾರು ರೈತಪರ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಕೈಬಿಟ್ಟಿದೆ. ಬಿಜೆಪಿ ಸರ್ಕಾರದ ಜಲಜೀವನ್ ಮಿಷನ್ ಯೋಜನೆ ಅಡಿ ಮನೆ ಮನೆಗೆ ನೀರು, ಬಡವರಿಗೆ ಮನೆ ನಿರ್ಮಾಣ ಮುಂತಾದ ಯೋಜನೆಗಳನ್ನು ತಮ್ಮದೆಂದು ಕೊಚ್ಚಿಕೊಳ್ಳುವ ಸರ್ಕಾರ ಯಾವುದೇ ನೀರಾವರಿ ಯೋಜನೆಗೆ ಅನುದಾನ ನೀಡುತ್ತಿಲ್ಲ. ಯುಕೆಪಿ, ಮಹಾದಾಯಿ, ಮೇಕೆದಾಟು ಯೋಜನೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸದೇ ರೈತರ ಬದುಕು ಹಾಳು ಮಾಡಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.
ಚುನಾವಣೆಗೋಸ್ಕರ ಜನರನ್ನು ತಮ್ಮತ್ತ ಸೆಳೆಯಲು ಮತಕ್ಕಾಗಿ ಬೇಕಾಬಿಟ್ಟಿ ಘೋಷಣೆ ಮಾಡಿ ಜನರ ದಾರಿ ತಪ್ಪಿಸುವುದನ್ನು ನಿಲ್ಲಿಸಬೇಕು. ಮಹಿಳೆಯರಿಗೆ ವರ್ಷಕ್ಕೆ ₹ 1 ಲಕ್ಷ ಕೊಡುವುದು, ₹ 25 ಲಕ್ಷ ಜೀವವಿಮೆ ಹೀಗೆ ಗ್ಯಾರಂಟಿ ಘೋಷಣೆ ಮಾಡುವಲ್ಲಿ ಇತಿ ಮಿತಿಯಲ್ಲಿ ಇರಬೇಕು. ಪ್ರಧಾನಿ ಮೋದಿಯವರು ಈಗಾಗಲೇ ಎಲ್ಲ ಜನರಿಗೆ ₹ 5 ಲಕ್ಷ ವಿಮೆ, ₹ 80 ಕೋಟಿ ಜನರಿಗೆ ಉಚಿತ ಪಡಿತರಧಾನ್ಯ ನೀಡುತ್ತಿದ್ದಾರೆ ಎಂದು ಹೇಳಿದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ಜಿಲ್ಲಾ ವಕ್ತಾರ ಸತ್ಯನರಾಯಣ ಹೇಮಾದ್ರಿ, ನಗರ ಮಂಡಳ ಅಧ್ಯಕ್ಷ ಬಸವರಾಜ ಹುನಗುಂದ, ಪ್ರಧಾನ ಕಾರ್ಯದರ್ಶಿ ಉಮೇಶ ಹಂಚಿನಾಳ ಪತ್ರಿಕಾಗೋಷ್ಠಿಯಲ್ಲಿದ್ದರು.
ರಾಜ್ಯ ಸರ್ಕಾರದ ಅಭಿವೃದ್ಧಿ ಶೂನ್ಯ: