‘ರಾಣಿ ಅಬ್ಬಕ್ಕ ಬಹುಮುಖ ಚಿಂತನೆ’ ವಿಚಾರಗೋಷ್ಠಿ
ಪೋರ್ಚುಗೀಸರ ವಿರುದ್ಧ ಅಬ್ಬಕ್ಕ ಹೋರಾಡಿರುವುದರ ಕುರಿತು ಭಾರತದಲ್ಲಿ ಸಮರ್ಪಕ ದಾಖಲೆ ನಮ್ಮ ಭಾರತದಲ್ಲಿ ಇಲ್ಲ ಎನ್ನುವುದು ದೊಡ್ಡ ದುರಂತ ಎಂದು ಎಂದು ಮಾಜಿ ಶಾಸಕಿ, ಕರಾವಳಿ ಲೇಖಕಿಯರ ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಲಾ ಟಿ. ಶೆಟ್ಟಿ ಹೇಳಿದ್ದಾರೆ.
ಬಿ.ಸಿ.ರೋಡು ಸಂಚಯಗಿರಿಯ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಆಶ್ರಯದಲ್ಲಿ ಶುಕ್ರವಾರ, ಬಿ.ಸಿ.ರೋಡಿನ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರದಲ್ಲಿ ಆಯೋಜಿಸಿದ್ದ ‘ರಾಣಿ ಅಬ್ಬಕ್ಕ ಬಹುಮುಖ ಚಿಂತನೆ’ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.ಅಬ್ಬಕ್ಕನ ಗುಣವನ್ನು ಎಲ್ಲಾ ಹೆಣ್ಣುಮಕ್ಕಳು ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ ಅವರು, ಹೀಗಾದಾಗ ನಮ್ಮನ್ನು ಎದುರಿಸಲು ಯಾರಿಂದಲೂ ಸಾಧ್ಯ ಇಲ್ಲ ಎಂದರು.
ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಮಂಗಳೂರಿನಲ್ಲಿ ಕರಾವಳಿ ಉತ್ಸವ ಮೈದಾನಕ್ಕೆ ಅಬ್ಬಕ್ಕ ರಾಣಿ ಮೈದಾನ ಎಂದು ಹೆಸರಿಡಲು ಮನಪಾ ಮತ್ತು ರಾಜ್ಯ ಸರಕಾರ ಪ್ರಯತ್ನಿಸಬೇಕು ಎಂದರು.
ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಮತ್ತು ತುಳು ಬದುಕು ವಸ್ತು ಸಂಗ್ರಹಾಲಯದ ಸಂಸ್ಥಾಪಕ ಡಾ. ತುಕಾರಾಮ ಪೂಜಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಯಶ್ರೀ ಪ್ರಾರ್ಥಿಸಿದರು. ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಕಾರ್ಯದರ್ಶಿ ಡಾ. ಆಶಾಲತಾ ಸುವರ್ಣ ವಂದಿಸಿದರು. ಸಿಂಧೂರ ಟಿ.ಪಿ. ಕಾರ್ಯಕ್ರಮ ನಿರ್ವಹಿಸಿದರು.