ಕನ್ನಡಪ್ರಭ ವಾರ್ತೆ ಧಾರವಾಡ
ನನಗೆ ಅವಕಾಶ ನೀಡಿದರೆ ಸುವರ್ಣ ಸೌಧದಲ್ಲಿರುವ ವೀರ ಸಾರ್ವಕರ್ ಫೋಟೋ ತೆಗೆಯುತ್ತೇನೆ ಎಂದ ಸಚಿವ ಖರ್ಗೆ ಹೇಳಿಕೆ ಕುರಿತು ಭಾನುವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ವೀರ ಸಾವರ್ಕರ್ ವಿಚಾರಧಾರೆ ಒಪ್ಪುವುದು ಬಿಡುವುದು ನಿಮಗೆ ಬಿಟ್ಟಿದ್ದು. ಆದರೆ, ವೀರ ಸಾವರ್ಕರ್ ವಿಚಾರಧಾರೆಗಳನ್ನು ಅನುಸರಿಸುವವರು ಅನೇಕರಿದ್ದಾರೆ. ಹೀಗಾಗಿ, ದುರಹಂಕಾರದ ಮಾತುಗಳನ್ನಾಡಬೇಡಿ ಎಂದ ಸಚಿವ ಜೋಶಿ, ನೆಹರೂ ವಿಚಾರಗಳ ಬಗ್ಗೆ ನಮಗೂ ಭಿನ್ನಾಭಿಪ್ರಾಯ ಇದೆ. ಹಾಗಂತ ನಾವು ನೆಹರೂ ಫೋಟೊ ತೆಗೆಯುತ್ತೇನೆ ಎನ್ನಲಾಗುತ್ತದೆಯೇ? ನೆಹರು ಅವರನ್ನು ಒಪ್ಪುವವರು ಅನೇಕರಿದ್ದಾರೆ. ಹೀಗಾಗಿ, ಫೋಟೋ ತೆಗೆಯುವ ವಿಚಾರ ಸರಿಯಲ್ಲ ಎಂದರು.
ಸನಾತನ ಧರ್ಮದ ವಿರುದ್ಧ ಉದಯನಿಧಿ ಸ್ಟಾಲಿನ್ ಹೇಳಿಕೆ ಕೊಟ್ಟಿದ್ದರು. ಅದಕ್ಕೆ ಕಾಂಗ್ರೆಸ್ ಬೆಂಬಲಿಸಿತ್ತು. ಅದರ ಪರಿಣಾಮ ಮೂರು ರಾಜ್ಯದಲ್ಲಿ ಕಾಂಗ್ರೆಸ್ ಸೋಲು ಅನುಭವಿಸಿದೆ. ಈಗ ಪ್ರಿಯಾಂಕ ಖರ್ಗೆಯಂತಹ ಮಾತುಗಳನ್ನು ಹೇಳುತ್ತಿದ್ದಾರೆ. ಇದೇ ರೀತಿ ಮುಂದುವರಿದರೆ ಜನರು ಇನ್ನೂ ಹೆಚ್ಚು ನಿಮ್ಮನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದ ಅವರು, ನಾನು ಕಿತ್ತು ಒಗೆಯಲು ಬಂದಿಲ್ಲ, ಜೋಡಿಸಲು ಬಂದಿದ್ದೇನೆ ಎಂದಿರುವ ವಿಧಾನಸಭೆ ಸ್ವೀಕರ್ ಯು.ಟಿ. ಖಾದರ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಈ ನಿಲುವು ಹಾಗೆಯೇ ಇರಬೇಕು. ಆಗ ಸದನ ಯಾವುದೇ ವಿವಾದ ಇಲ್ಲದೇ ನಡೆಯುತ್ತದೆ ಎಂದರು.ರಾಜಸ್ಥಾನ ಬಿಜೆಪಿಯಲ್ಲಿ ಭಿನ್ನಮತ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಜೋಶಿ, ಅದು ಎಲ್ಲವೂ ಸುಳ್ಳು. ವಸುಂಧರಾ ರಾಜೆ ಸೇರಿ ಎಲ್ಲರೂ ನನಗೆ ನೇರ ಸಂಪರ್ಕದಲ್ಲಿದ್ದಾರೆ. ಬಿಜೆಪಿ ರಾಷ್ಟ್ರೀಯ ನೇತೃತ್ವದಲ್ಲಿ ತೀರ್ಮಾನವಾಗಲಿದೆ. ಈ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದರು.