ಕನ್ನಡಪ್ರಭ ವಾರ್ತೆ ಹಲಗೂರು
ರೈತರು ಎದುರಿಸುತ್ತಿರುವ ಸಮಸ್ಯೆಗಳು, ಸರ್ಕಾರ ಇಲಾಖೆಗಳಿಂದ ಸಿಗುವ ಪರಿಹಾರ, ಅನುದಾನಗಳನ್ನು ಸಮಯಕ್ಕೆ ಸರಿಯಾಗಿ ಪಡೆದರೆ ನಷ್ಟ ತಂಪ್ಪಿಸಬಹುದು. ಕೃಷಿಯಲ್ಲಿ ಇತ್ತೀಚಿನ ತಂತ್ರಜ್ಞಾನ ಬಳಸಿಕೊಂಡಲ್ಲಿ ರೈತರ ಹಲವು ತೊಂದರೆಗಳಿಗೆ ಪರಿಹಾರ ಸಿಗಲಿದೆ ಎಂದರು.
ಕೇಂದ್ರ ರೇಷ್ಮೆ ಮಂಡಳಿ ಹಾಗೂ ರೇಷ್ಮೆ ವಿಸ್ತರಣಾ ಉಪ ವಿಭಾಗ ಮದ್ದೂರಿನ ವಿಜ್ಞಾನಿ ಡಾ.ಶಿವಕುಮಾರ್ ಅವರು, ರೈತರು ಬಳಸುತ್ತಿರುವ ರಾಸಾಯನಿಕ ಔಷಧಿಗಳ ಬಳಕೆ, ಔಷಧಿ ಸಿಂಪಡಣೆಗಳ ವಿವರಿಸಿ ದ್ವಿತಳಿ ರೇಷ್ಮೆ ಬೆಳೆಯಿಂದ ಆರ್ಥಿಕ ಲಾಭ ಹೆಚ್ಚುವ ಜೊತೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೊರದೇಶಗಳಿಂದ ಆಮದು ಮಾಡಿಕೊಳ್ಳುತ್ತಿರುವ ರೇಷ್ಮೆಯನ್ನು ನಿಲ್ಲಿಸಿ, ನಮ್ಮಲ್ಲೇ ಬೆಳೆದ ದ್ವಿತಳಿ ರೇಷ್ಮೆ ಬೆಳೆಗೆ ಅತ್ಯುನ್ನತ ಮಟ್ಟದಲ್ಲಿ ಬೇಡಿಕೆ ಹೆಚ್ಚಾಗುತ್ತದೆ ಎಂದರು.ಹೊಸ ಹೊಸ ತಾಂತ್ರಿಕತೆಗಳಲ್ಲಿ ಟ್ರೆಂಚಿಂಗ್, ಮಲ್ಚಿಂಗ್ ಮಾಡುವುದು ಹಾಗೂ ಹಿಪ್ಪು ನೇರಳೆ ತೋಟದಲ್ಲಿ ಹನಿ ನೀರಾವರಿ ಅಳವಡಿಸಿಕೊಳ್ಳುವುದು ಹಾಗೂ ವೈಜ್ಞಾನಿಕವಾಗಿ ಹೊಸ ತಾಂತ್ರಿಕತೆಗೆ ಬದಲಾಗುವುದು ತುಂಬಾ ಮುಖ್ಯವಾಗಿದೆ ಎಂದರು.
ರೇಷ್ಮೆ ಹುಳು ಸಾಕಾಣಿಕೆ ಮನೆಯಲ್ಲಿ ಶೇಖರಣೆಯಾಗುವ ಹಾಸಿಗೆ ಕಸದಿಂದ ಉತ್ಕೃಷ್ಟ ಗೊಬ್ಬರವನ್ನು ತಯಾರಿಸಿ ಮಣ್ಣಿಗೆ ಸೇರಿಸುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚಾಗುತ್ತದೆ. ರೇಷ್ಮೆ ಗೂಡಿನ ಇಳುವರಿ ಹೆಚ್ಚಿ ರೈತರಿಗೆ ಆರ್ಥಿಕವಾಗಿ ಲಾಭವನ್ನು ನೀಡುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಮಳವಳ್ಳಿ ರೇಷ್ಮೆ ಸಹಾಯಕ ನಿರ್ದೇಶಕ ಎ.ಬಿ.ರವಿ, ರೇಷ್ಮೆ ವಿಸ್ತರಣಾಧಿಕಾರಿ ಎಸ್.ವಿ. ನರಸಿಂಹಮೂರ್ತಿ, ಆಶಾ, ಎಚ್.ಜಿ,ಕುಮಾರಿ, ಟಿ.ಆರ್.ಪೂಜಾ, ರೇಷ್ಮೆ ನಿರೀಕ್ಷಕ ಬಿ.ಆರ್.ಕಿರಣ್, ಎಂ.ನವೀನ್, ಉದಯಶಂಕರ್ ಹಾಗೂ ಕೋಡಿಪುರ ಗ್ರಾಮದ ಎಲ್ಲಾ ರೇಷ್ಮೆ ಬೆಳೆಗಾರರು ಇದ್ದರು.