ಮೌಖಿಕ ಆರೋಗ್ಯ ಕಾಪಾಡಿಕೊಳ್ಳುವುದು ಉತ್ತಮ: ಅಭಿನವ್‌

KannadaprabhaNewsNetwork |  
Published : Mar 21, 2024, 01:11 AM IST
ಚಿತ್ರ:ನಗರದಲ್ಲಿ ನಡೆದ ವಿಶ್ವ ಬಾಯಿ ಆರೋಗ್ಯ ದಿನಾಚರಣೆಯಲ್ಲಿ ಡಾ. ಅಭಿನವ್‌ ಮಾತನಾಡಿದರು. | Kannada Prabha

ಸಾರಾಂಶ

ಬಾಯಿ ಆರೋಗ್ಯದ ಮಹತ್ವ ಮತ್ತು ಸಾಮಾನ್ಯ ಯೋಗಕ್ಷೇಮಕ್ಕೆ ಹೇಗೆ ಸಂಬಂಧಿಸಿದೆ ಎಂಬುದರ ಕುರಿತು ಸಾರ್ವಜನಿಕ ಜಾಗೃತಿ ಹೆಚ್ಚಿಸಬೇಕಾಗಿದೆ.

ಚಿತ್ರದುರ್ಗ: ಬಾಯಿ ಆರೋಗ್ಯವಾಗಿದ್ದರೆ ದೇಹ ಆರೋಗ್ಯವಾಗಿರುತ್ತದೆ ಎಂದು ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಅಭಿನವ್ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸಭಾಂಗಣದಲ್ಲಿ ವಿಶ್ವ ಬಾಯಿ ಆರೋಗ್ಯ ದಿನಾಚರಣೆ ಪ್ರಯುಕ್ತ ಜರುಗಿದ ಮಾಹಿತಿ ಶಿಕ್ಷಣ ಸಂವಹನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬಾಯಿ ಆರೋಗ್ಯದ ಮಹತ್ವ ಮತ್ತು ಸಾಮಾನ್ಯ ಯೋಗಕ್ಷೇಮಕ್ಕೆ ಹೇಗೆ ಸಂಬಂಧಿಸಿದೆ ಎಂಬುದರ ಕುರಿತು ಸಾರ್ವಜನಿಕ ಜಾಗೃತಿ ಹೆಚ್ಚಿಸಬೇಕಾಗಿದೆ. ಇದು ಜನರಿಗೆ ಉತ್ತಮ ಮೌಖಿಕ ಆರೋಗ್ಯ ಕಾಪಾಡಿಕೊಳ್ಳಲು ಅಗತ್ಯವಿರುವ ಮಾಹಿತಿ. ಸಂಪನ್ಮೂಲಗಳು ಮತ್ತು ಸ್ವಯಂ-ಭರವಸೆಯನ್ನು ಒದಗಿಸುವುದನ್ನು ಒತ್ತಿಹೇಳುತ್ತದೆ. ಇದು ಜನರ ಜೀವನ, ಆರ್ಥಿಕತೆ ಮತ್ತು ಆರೋಗ್ಯ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರುವ ಬಾಯಿಯ ಕಾಯಿಲೆಗಳ ಹೊರೆಯನ್ನು ಕಡಿಮೆ ಮಾಡುವ ಗುರಿ ಹೊಂದಿದೆ ಎಂದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ಮಾತನಾಡಿ, ಯುವ ಜನತೆ ಹೆಚ್ಚು ತಂಬಾಕು, ಗುಟ್ಕಾ, ಧೂಮಪಾನ ಮಾಡುವ ಅಭ್ಯಾಸಗಳಿಗೆ ಬಲಿಯಾಗುತ್ತಿದ್ದಾರೆ. ಬಾಯಿ ಆರೋಗ್ಯಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಯುವಕರಿಗೆ ಜಾಗೃತಿ ಮೂಡಿಸುವಲ್ಲಿ ಒಳ್ಳೆಯ ಕಾರ್ಯಕ್ರಮವಾಗಿದೆ ಎಂದರು.

ದಂತ ತಜ್ಞ ಡಾ.ಚಂದ್ರಶೇಖರ್ ಮಾತನಾಡಿ, ಬಾಯಿ ಕ್ಯಾನ್ಸರ್ ಪ್ರಮಾಣ ಹೆಚ್ಚುತ್ತಿದೆ. ಬಾಯಿ ಕಾಯಿಲೆಗಳಿಗೆ ಕಾರಣವಾದ ಅಂಶಗಳ ಬಗ್ಗೆ ಜಾಗೃತಿ ಮೂಡಿಸಲು ಜಾಗತಿಕ ಆರೋಗ್ಯ ಕಾರ್ಯ ನಡೆಯುತ್ತಿದೆ. ಬಾಯಿ ಆರೋಗ್ಯ ಬಾಯಿ, ಹಲ್ಲುಗಳು ಮತ್ತು ಓರೊಫೇಶಿಯಲ್ ರಚನೆಗಳ ಸ್ಥಿತಿಯಾಗಿದ್ದು, ಅದು ವ್ಯಕ್ತಿಗಳು ಮಾತನಾಡುವುದು, ಉಸಿರಾಟ ಮತ್ತು ತಿನ್ನುವಂತಹ ಅಗತ್ಯ ಕಾರ್ಯಗಳನ್ನು ನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಸಕ್ಕರೆಯಲ್ಲಿ ಸಮೃದ್ಧವಾಗಿರುವ ಆಹಾರ ಸೇವನೆ, ಕಳಪೆ ಮೌಖಿಕ ನೈರ್ಮಲ್ಯ, ತಂಬಾಕು ಮತ್ತು ಮದ್ಯಪಾನದಂತಹ ವಿವಿಧ ಮಾರ್ಪಡಿಸಬಹುದಾದ ಅಪಾಯಕಾರಿ ಅಂಶಗಳು ಬಾಯಿಯ ಅಸ್ವಸ್ಥತೆಗಳಿಗೆ ಕಾರಣವಾಗುತ್ತವೆ. ಹಾರ್ಮೋನ್‌ಗಳ ಬದಲಾವಣೆಯಿಂದಾಗಿ ಗರ್ಭಿಣಿ ಮಹಿಳೆಯರ ಒಸಡುಗಳು ಪ್ಲೇಕ್‍ಗೆ ಹೆಚ್ಚು ಒಳಗಾಗುತ್ತವೆ ಎಂದರು.

ಸಿರಿಗೆರೆ ಸಮುದಾಯ ಆರೋಗ್ಯ ಕೇಂದ್ರದ ದಂತ ತಜ್ಞ ಡಾ.ಪ್ರಸನ್ನಕುಮಾರ್ ಮಾತನಾಡಿದರು. ಜಿಲ್ಲಾ ನೋಡಲ್ ಅಧಿಕಾರಿ (ಬಾಯಿ ಆರೋಗ್ಯ) ಡಾ.ಟಿ.ರುದ್ರೇಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಜಿಲ್ಲಾ ಮೇಲ್ವಿಚಾರಣಾಧಿಕಾರಿಗಳಾದ ಎಮ್.ಬಿ.ಹನುಮಂತಪ್ಪ, ಆಂಜನೇಯ, ಆರೋಗ್ಯ ಶಿಕ್ಷಣಾಧಿಕಾರಿಗಳಾದ ಕೃಷ್ಣನಾಯ್ಕ್, ಬಿ.ಗೌರಮ್ಮ, ಸುನಂದಾ ಬಾಯಿ, ಎನ್.ಎಸ್.ಮಂಜುನಾಥ, ಶಾಂತಮ್ಮ, ರಂಗಾರೆಡ್ಡಿ, ಆಶಾ ಕಾರ್ಯಕರ್ತೆಯರು ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು