ಕನ್ನಡಪ್ರಭ ವಾರ್ತೆ ಮೈಸೂರು
ವಿಸ್ತರಣಾ ಶಿಕ್ಷಣ ಘಟಕ ನಾಗನಹಳ್ಳಿ ವತಿಯಿಂದ ಕೆ.ಆರ್. ನಗರ ತಾಲೂಕಿನ ಮಾವತ್ತೂರು ಗ್ರಾಮದ ಶಾಲೆಯಲ್ಲಿ 8, 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಕೃಷಿಯ ಮಹತ್ವ ಮತ್ತು ಉದ್ಯೋಗಾವಕಾಶದ ಅರಿವು ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು.
ಕೃಷಿಯು ಕೇವಲ ಒಂದು ಉದ್ಯೋಗವಲ್ಲ, ಅದು ನಮ್ಮ ಜೀವನದ ಅವಿಭಾಜ್ಯ ಅಂಗ ಹಾಗೂ ದೇಶದ ಬೆನ್ನೆಲುಬಾಗಿದೆ. ಕೃಷಿ ಆಧಾರಿತ ಜೀವನೋಪಾಯ, ಕೃಷಿ ಕ್ಷೇತ್ರದಲ್ಲಿನ ಉದ್ಯೋಗಾವಕಾಶಗಳು ಹಾಗೂ ಆಧುನಿಕ ಕೃಷಿ ವಿಜ್ಞಾನಗಳ ಮಹತ್ವವನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುವುದು ಅತ್ಯಂತ ಅಗತ್ಯ. ವಿದ್ಯಾರ್ಥಿಗಳು ಕೃಷಿಯ ಬಗ್ಗೆ ಸಕಾರಾತ್ಮಕ ಮನೋಭಾವ ಬೆಳೆಸಿಕೊಂಡು, ಭವಿಷ್ಯದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.ವಿದ್ಯಾರ್ಥಿಗಳು ಕೃಷಿಯನ್ನು ಕೇವಲ ಸಾಂಪ್ರದಾಯಿಕ ವೃತ್ತಿಯಾಗಿ ನೋಡದೆ, ಆಧುನಿಕ ತಂತ್ರಜ್ಞಾನ ಮತ್ತು ವೈಜ್ಞಾನಿಕ ಜ್ಞಾನವನ್ನು ಅಳವಡಿಸಿಕೊಂಡು ಉತ್ತಮ ಆದಾಯಗಳಿಸಬಹುದಾದ ಕ್ಷೇತ್ರವಾಗಿ ಪರಿಗಣಿಸುವಂತೆ ಅವರು ಹೇಳಿದರು.
ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ್ಗೆ ಸನ್ಮಾನ
ಅರಣ್ಯ ಕ್ಷೇತ್ರದಲ್ಲಿ ಸಲ್ಲಿಸಿದ ಅಪಾರ ಕೊಡುಗೆಗಾಗಿ ಪ್ರತಿಷ್ಠಿತ ನಾಡಪ್ರಭು ಕೆಂಪೇಗೌಡ ಪ್ರಶಸ್ತಿಗೆ ಭಾಜನರಾದ ಅರಣ್ಯ ಇಲಾಖೆ ನಿವೃತ್ತ ಕಾರ್ಯದರ್ಶಿ ಎ.ಸಿ.ಲಕ್ಷ್ಮಣ್ ಅವರನ್ನು ನಿವೃತ್ತ ಅರಣ್ಯಾಧಿಕಾರಿಗಳ ಸಂಘದಿಂದ ಸನ್ಮಾನಿಸಲಾಯಿತು.ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಎಂ.ಕೆ. ಅಪ್ಪಯ್ಯ ಮಾತನಾಡಿ, ಎ.ಸಿ. ಲಕ್ಷ್ಮಣ್ ಅವರು ಅರಣ್ಯ ಇಲಾಖೆ ಹಾಗೂ ಪರಿಸರ ಸಂರಕ್ಷಣೆಗೆ ನೀಡಿದ ಅಮೂಲ್ಯ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಿವೃತ್ತ ಅರಣ್ಯಾಧಿಕಾರಿಗಳು ಹಾಗೂ ಅವರ ಕುಟುಂಬಸ್ಥರನ್ನು ಎ.ಸಿ. ಲಕ್ಷ್ಮಣ್ ಮತ್ತು ಅವರ ಪತ್ನಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿದರು.