ರಾಷ್ಟ್ರಧ್ವಜಕ್ಕೆ ಗೌರವ ಕೊಡೋದು ಎಲ್ಲರ ಕರ್ತವ್ಯ: ಮಲ್ಲಪ್ಪ ಪರನಂಟಿ

KannadaprabhaNewsNetwork |  
Published : Feb 05, 2025, 12:33 AM IST
ಹಿರೇಕೊಡಗಲಿ ಶಾಲೆಯಲ್ಲಿ ಶಾಲಾ ಹಂತದ ಸೇವಾದಳದ ಒಂದು ದಿನದ ತರಬೇತಿ ಶಿಬಿರವನ್ನು ಶ್ರೀಗಳು ಉದ್ಘಾಟಿಸಿದರು. | Kannada Prabha

ಸಾರಾಂಶ

ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ನಮ್ಮ ದೇಶದ ರಾಷ್ಟ್ರ ಧ್ವಜಕ್ಕಗೆ ಗೌರವ ಕೋಡಲೆಬೇಕು. ದೇಶದಲ್ಲಿ ವಾಸಿಸುವ ಪ್ರತಯೊಬ್ಬರ ಕರ್ತವ್ಯ ಎಂದು ಶಾಲಾ ಸುಧಾರಣೆ ಸಮಿತಿ ಅಧ್ಯಕ್ಷ ಮಲ್ಲಪ್ಪ ಪರನಂಟಿ ತಿಳಿಸಿದರು.

ಕನ್ನಡಪ್ರಭ ವಾರ್ತೆ ಇಳಕಲ್ಲ

ದೇಶದಲ್ಲಿ ವಾಸಿಸುವ ಪ್ರತಿಯೊಬ್ಬರು ನಮ್ಮ ದೇಶದ ರಾಷ್ಟ್ರ ಧ್ವಜಕ್ಕಗೆ ಗೌರವ ಕೋಡಲೆಬೇಕು. ದೇಶದಲ್ಲಿ ವಾಸಿಸುವ ಪ್ರತಯೊಬ್ಬರ ಕರ್ತವ್ಯ ಎಂದು ಶಾಲಾ ಸುಧಾರಣೆ ಸಮಿತಿ ಅಧ್ಯಕ್ಷ ಮಲ್ಲಪ್ಪ ಪರನಂಟಿ ತಿಳಿಸಿದರು.

ತಾಲೂಕಿನ ಹಿರೇಕೊಡಗಲಿ ಶಾಲೆಯಲ್ಲಿ ಶಾಲಾ ಹಂತದ ಸೇವಾದಳದ ಒಂದು ದಿನದ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿ, ಭಾರತ ಸೇವಾದಳ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಯ ಪ್ರಜ್ಞೆ, ರಾಷ್ಟ್ರ ರಕ್ಷಣೆಯ ಜಾಗೃತಿ ಮೂಡಿಸಲು ನಮ್ಮ ಶಾಲೆಯಲ್ಲಿ ಒಂದು ದಿನದ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.

ಭವಿಷ್ಯದ ಸತ್ಪ್ರಜೆಗಳನ್ನು ರೂಪಿಸಲು ಭಾರತ ಸೇವಾದಳ ಅವಿರತವಾಗಿ ಶ್ರಮಿಸುತ್ತಿದೆ ಎಂದರು.

ಮುಖ್ಯ ಶಿಕ್ಷಕ ಡಿ.ಎಚ್. ಮುಕ್ಕಣ್ಣನವರು ಮಾತನಾಡಿ, ಮಕ್ಕಳಿಗೆ ಪ್ರಾಥಮಿಕ ಹಂತದಲ್ಲಿಯೇ ಶಿಸ್ತು ಕಲಿಸಲು ಶಾಲೆಗಳಲ್ಲಿ ಸ್ಕೌಟ್ಸ್, ಗೈಡ್ಸ್, ಎನ್.ಸಿ.ಸಿ, ಎನ್.ಎಸ್.ಎಸ್ ಘಟಕ ತೆರೆಯಲಾಗಿದೆ. ರಾಷ್ಟ್ರಧ್ವಜವನ್ನು ಗೌರವಿಸಬೇಕು. ಸಹೋದರತೆ, ಭಾವೈಕ್ಯತೆ, ನಾಯಕತ್ವ ಗುಣ, ಸಮಾನತೆ, ಸರಳತೆ, ಪ್ರಾಮಾಣಿಕತೆ ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು. ಶಾಲೆಯ ಹಳೆಯ ವಿದ್ಯಾರ್ಥಿ ಸಚಿನ್ ಸಂಯೋಜನೆಯಲ್ಲಿ ಮೂಡಿ ಬಂದ ಸೇವಾದಳ ಹಾಗೂ ನೃತ್ಯಗಳು ಊರಿನ ಜನರು ಪಾಲಕರು ಮನಸೂರೆಗೊಂಡವು. ಅತ್ಯಂತ ಶಿಸ್ತುಬದ್ಧವಾಗಿ ಮೂಡಿ ಬಂದ ಸೇವಾದಳದ ಪಥ ಸಂಚಲನ ಆಕರ್ಷಕವಾಗಿತ್ತು. ಅನುಪಮಾ ಪಾಡಮುಖಿ ನಿರೂಪಿಸಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!