ಪೌರಕಾರ್ಮಿಕರಿಗೆ ಸೌಲಭ್ಯ ಕಲ್ಪಿಸುವುದು ಎಲ್ಲರ ಜವಾಬ್ದಾರಿ

KannadaprabhaNewsNetwork |  
Published : Nov 18, 2023, 01:00 AM IST
ಚಿತ್ರ: ಡಿ೧೭-ಬಿಡಿವಿಟಿಭದ್ರಾವತಿ ಜೈಭೀಮ್ ನಗರದ ಸಮುದಾಯ ಭವನದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗು ನಗರಸಭೆ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ನಗರಸಭೆ ಠೇವಣಿವಂತಿಕೆ ಕಾಮಗಾರಿಯಡಿ ಜೈಭೀಮ್ ನಗರದಲ್ಲಿ ನಿರ್ಮಾಣಗೊಂಡಿರುವ ಪೌರಕಾರ್ಮಿಕರ ಗೃಹಗಳಿಗೆ ಒಳಚಂರಂಡಿ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭ ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಸಿ ಉದ್ಘಾಟಿಸಿದರು. | Kannada Prabha

ಸಾರಾಂಶ

ಪೌರಕಾರ್ಮಿಕರಿಗೆ ಒದಗಿಸಲಾಗುತ್ತಿರುವ ಮನೆಗಳು ಸಕಲ ಸೌಲಭ್ಯಗಳಿಂದ ಕೂಡಿದ್ದು, ಸುಸಜ್ಜಿತವಾಗಿ ನಿರ್ಮಾಣಗೊಳಿಸಲಾಗಿದೆ. ನಗರದ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಅದೇ ರೀತಿ ಪೌರಕಾರ್ಮಿಕರ ಆರೋಗ್ಯ ಕಾಪಾಡುವುದು ನಗರಸಭೆ ಕರ್ತವ್ಯ. ಈ ನಿಟ್ಟಿನಲ್ಲಿ ನಗರಸಭೆ ಹಲವು ಕ್ರಮಗಳನ್ನು ಕೈಗೊಂಡಿದೆ

ಕನ್ನಡಪ್ರಭ ವಾರ್ತೆ, ಭದ್ರಾವತಿ

ಪೌರಕಾರ್ಮಿಕರು ನಗರಸಭೆಯಲ್ಲಿ ಬಹುಮುಖ್ಯ ಪಾತ್ರವಹಿಸುತ್ತಿದ್ದು, ಅವರಿಗೂ ಸೌಲಭ್ಯ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಸಿ. ಹೇಳಿದರು.

ನಗರದಲ್ಲಿ ಶುಕ್ರವಾರ ಜೈಭೀಮ್ ನಗರ ಸಮುದಾಯ ಭವನದಲ್ಲಿ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ನಗರಸಭೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ ನಗರಸಭೆ ಠೇವಣಿವಂತಿಕೆ ಕಾಮಗಾರಿಯಡಿ ನಗರದ ಜೈಭೀಮ್ ನಗರದಲ್ಲಿ ನಿರ್ಮಾಣಗೊಂಡಿರುವ ಪೌರಕಾರ್ಮಿಕರ ಗೃಹಗಳಿಗೆ ಒಳಚರಂಡಿ ವ್ಯವಸ್ಥೆ ಕಲ್ಪಿಸುವ ಕಾಮಗಾರಿಯ ಶಂಕುಸ್ಥಾಪನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಪೌರಕಾರ್ಮಿಕರಿಗೆ ಒದಗಿಸಲಾಗುತ್ತಿರುವ ಮನೆಗಳು ಸಕಲ ಸೌಲಭ್ಯಗಳಿಂದ ಕೂಡಿದ್ದು, ಸುಸಜ್ಜಿತವಾಗಿ ನಿರ್ಮಾಣಗೊಳಿಸಲಾಗಿದೆ. ನಗರದ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಪಾತ್ರ ಪ್ರಮುಖವಾಗಿದೆ. ಅದೇ ರೀತಿ ಪೌರಕಾರ್ಮಿಕರ ಆರೋಗ್ಯ ಕಾಪಾಡುವುದು ನಗರಸಭೆ ಕರ್ತವ್ಯ. ಈ ನಿಟ್ಟಿನಲ್ಲಿ ನಗರಸಭೆ ಹಲವು ಕ್ರಮಗಳನ್ನು ಕೈಗೊಂಡಿದೆ ಎಂದರು.

ಪೌರಾಯುಕ್ತ ಮನುಕುಮಾರ್ ಮಾತನಾಡಿ, ಜಿ+3 ಗುಂಪು ಮನೆ ಯೋಜನೆಯಡಿ 74 ಪೌರಕಾರ್ಮಿಕರಿಗೆ ಮನೆಗಳನ್ನು ಒದಗಿಸಲಾಗುತ್ತಿದೆ. ಪ್ರಸ್ತುತ 71 ಪೌರಕಾರ್ಮಿಕರು ಹೊಸದಾಗಿ ನೇಮಕಗೊಂಡಿದ್ದು, ಮುಂದಿನ ದಿನಗಳಲ್ಲಿ ಅವರಿಗೂ ಮನೆಗಳನ್ನು ಒದಗಿಸಲಾಗುವುದು ಎಂದರು.

ನಗರಸಭೆ ಉಪಾಧ್ಯಕ್ಷೆ ಸರ್ವಮಂಗಳ ಭೈರಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸುದೀಪ್ ಕುಮಾರ್, ಸದಸ್ಯರಾದ ಮಣಿ ಎಎನ್‌ಎಸ್, ಬಸವರಾಜ್ ಬಿ. ಆನೇಕೊಪ್ಪ, ಉದಯಕುಮಾರ್, ಜಾರ್ಜ್, ಆರ್.ಮೋಹನ್ ಕುಮಾರ್, ಲತಾ ಚಂದ್ರಶೇಖರ್, ಅನುಪಮ ಚನ್ನೇಶ್, ಮಂಜುಳ ಸುಬ್ಬಣ್ಣ, ಶಶಿಕಲಾ ನಾರಾಯಣಪ್ಪ, ಬಿ.ಎಂ. ಮಂಜುನಾಥ್ (ಟೀಕು), ರಿಯಾಜ್ ಅಹಮದ್, ಸಹಾಯಕ ಕಾರ್ಯಪಾಲಕ ಅಭಿಯಂತರ ಮಿಥುನ್‌ಕುಮಾರ್, ಗುತ್ತಿಗೆದಾರ ದೇವೇಂದ್ರ, ನಗರಸಭೆ ಮೇಸ್ತ್ರಿಗಳಾದ ವಿಜಯ್, ದಾನಂ, ನರಸಿಂಹ, ಎನ್.ಗೋವಿಂದ, ಎನ್.ಪ್ರಸನ್ನಕುಮಾರ್, ರಾಜೇಶ್, ಮಂಜುನಾಥ್ ಇನ್ನಿತರರು ಹಾಜರಿದ್ದರು.

ನಗರಸಭೆ ಸದಸ್ಯ ಚನ್ನಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಸಭೆ ಪೌರಕಾರ್ಮಿಕರು, ಜೈಭೀಮ್ ನಗರದ ನಿವಾಸಿಗಳು ಹಾಗೂ ನಗರಸಭೆ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು. ಮಹಮದ್ ಗೌಸ್ ನಿರೂಪಿಸಿ, ವಂದಿಸಿದರು.

- - - -ಡಿ17ಬಿಡಿವಿಟಿ:

ಕಾಮಗಾರಿ ಶಂಕುಸ್ಥಾಪನಾ ಸಮಾರಂಭವನ್ನು ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಸಿ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆನ್‌ಲೈನ್‌ನಲ್ಲಿ ಆರ್ಡರ್‌ ಮಾಡಿದ್ದು ಬ್ಲೇಡ್‌, ಮನೆಗೆ ಬಂದಿದ್ದು ಹಳೆ ಬಟ್ಟೆ
ಉಪನಗರ ರೈಲು ಯೋಜನೆ ಬಾಧಿತರಿಗೆ ಕೆ-ರೈಡ್‌ನಿಂದ ವಿಮಾ ಪತ್ರ ವಿತರಣೆ