ಕನ್ನಡಪ್ರಭವಾರ್ತೆ ತೀರ್ಥಹಳ್ಳಿ
ಕೋಣಂದೂರಿನಲ್ಲಿ ಸೋಮವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಪರ ಮತಯಾಚನೆ ಮಾಡಿದ ಅವರು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಯಿಂದಾಗಿ ರಾಜ್ಯದಲ್ಲಿ ಅಭಿವೃದ್ಧಿ ನಿಂತ ನೀರಾಗಿದೆ. ಅಬಿವೃದ್ಧಿ ಕಾರ್ಯಗಳಿಗೆ ಸರ್ಕಾರದಿಂದ ಬಿಡಗಾಸು ಬಿಡುಗಡೆಯಾಗುತ್ತಿಲ್ಲಾ. ಸಾಲದ್ದಕ್ಕೆ ರಾಜ್ಯದ ಪ್ರತಿ ವ್ಯಕ್ತಿ ತಲೆ ಮೇಲೆ ತಲಾ ₹36000 ಸಾಲದ ಹೊರೆ ಹೇರಲಾಗಿದೆ ಎಂದೂ ಲೇವಡಿ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 11 ತಿಂಗಳು ಸಂದಿದೆ. ಈ ವರೆಗೆ ಯಾವುದೇ ಜನಪರವಾದ ಕಾರ್ಯಗಳು ಜಾರಿಯೂ ಅಗಿಲ್ಲಾ. ತೆರಿಗೆ ರೂಪದಲ್ಲಿ ಸಂಗ್ರಹವಾದ ಹಣವನ್ನು ಅನಗತ್ಯವಾಗಿ ವ್ಯಯಿಸಿದ ಕಾರಣ ಅಭಿವೃದ್ಧಿ ಕಾರ್ಯಗಳಿಗೂ ಹಣ ಬಿಡುಗಡೆ ಆಗುತ್ತಿಲ್ಲಾ. ಕೇಂದ್ರ ಸರ್ಕಾರದ ಜೊತೆ ಸಂಘರ್ಷ ನಡೆಸಲಾಗುತ್ತಿದೆ. ಪರಿಶಿಷ್ಟ ಸಮುದಾಯದ ₹11000 ಕೋಟಿ ಹಣವನ್ನೂ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳಲಾಗಿದೆ. ಗ್ಯಾರಂಟಿ ರೂಪದಲ್ಲಿ ಕೊಟ್ಟು ಇನ್ನೊಂದೆಡೆಯಿಂದ ಪಿಕ್ ಪಾಕೆಟ್ ಮಾಡುತ್ತಿದೆ. ರಾಜ್ಯದ ಜನರು ಇದಕ್ಕೆ ತಕ್ಕ ಬೆಲೆ ತೆರಬೇಕಾಗಿದೆ ಎಂದು ಟೀಕಿಸಿದರು.ರಾಜ್ಯದಲ್ಲಿ ಬರಗಾಲದಿಂದ ಜನರು ತತ್ತರಿಸುತ್ತಿದ್ದರು, ಆ ಬಗ್ಗೆ ಕ್ರಮ ಕೈಗೊಳ್ಳದ ರಾಜ್ಯ ಸರ್ಕಾರ ಚುನಾವಣೆ ಕಾರ್ಯದಲ್ಲಿ ನಿರತವಾಗಿದೆ. ಬರ ಪರಿಹಾರದ ಸಲುವಾಗಿ ರಾಜ್ಯ ಸರ್ಕಾರ ₹18500 ಕೋರಿಕೆ ಸಲ್ಲಿಸಿದ ಮೇರೆಗೆ ಕೇಂದ್ರ ಸರ್ಕಾರ ₹3454 ಕೋಟಿ ಬಿಡುಗಡೆ ಮಾಡಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಕೇವಲ ₹1500 ಕೋಟಿ ಮಾತ್ರ ಬಿಡುಗಡೆ ಮಾಡಿತ್ತು. ಬಿ.ವೈ.ರಾಘವೇಂದ್ರ್ರ ಅವಧಿಯಲ್ಲಿ ಈ ಕ್ಷೇತ್ರಕ್ಕೆ ಅನುದಾನ ಹರಿದು ಬಂದಿದೆ ಎಂದೂ ಹೇಳಿದರು.
ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಮಾತನಾಡಿ, ಕಳೆದ ಅವಧಿಯಲ್ಲಿ ನಿಮ್ಮಗಳ ಆಶೀರ್ವಾದದಿಂದ ಗೆದ್ದು ಜಿಲ್ಲೆಗೆ ರಾಷ್ಟ್ರೀಯ ಹೆದ್ದಾರಿ ಸೇತುವೆ ಕುಡಿವ ನೀರು ಮುಂತಾದ ಯೋಜನೆಗಳಿಗೆ ₹20 ಸಾವಿರ ಕೋಟಿಗೂ ಮಿಕ್ಕಿ ಅನುದಾನ ತಂದಿದ್ದೇನೆ. ಮಡಬೆಕಾದ ಹಲವಾರು ಕಾರ್ಯಗಳಲ್ಲಿ ಭದ್ರಾವತಿ ವಿಐಎಸ್ಎಲ್, ಮುಳುಗಡೆ ಸಂತ್ರಸ್ಥರು ಅರಣ್ಯ ಭೂಮಿ ಸೇರಿ ಜಿಲ್ಲೆಯಲ್ಲಿ ಹಲವಾರು ಗಂಭೀರ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬೇಕಿದೆ ಎಂದರು.
ಕರಾವಳಿ ಮಲೆನಾಡಿನ ಸಂಪರ್ಕ ಸುಗಮಗೊಳಿಸುವ ಸಲುವಾಗಿ ಆಗುಂಬೆ ಘಾಟಿ ಮಾರ್ಗದಲ್ಲಿ ಸುರಂಗ ನಿರ್ಮಿಸಲು ಡಿಪಿಆರ್ ಸಿದ್ಧವಾಗಿದೆ. ₹300 ಕೋಟಿ ವೆಚ್ಚದ ಈ ಕಾಮಗಾರಿ ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ 12 ಕಿಮೀ ಉದ್ದ ಸುರಂಗ ನಿರ್ಮಾಣವಾಗಲಿದೆ ಎಂದರು.