ತರೀಕೆರೆ ಸರ್ಕಾರಿ ಪ್ರಥಮ ದರ್ಜೆ.ಕಾಲೇಜಿನಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ
ನೀರಿನ ಬಳಕೆಗಾಗಿ ಪ್ರತಿ ಮನೆಯಲ್ಲೂ ಮೀಟರ್ ಅಳವಡಿಸುವುದು ಬಹಳ ಮುಖ್ಯವಾಗಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಿ.ಎಂ. ಉಷಾ ಯೋಜನೆ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಕಾಲೇಜು ಸಭಾಂಗಣದಲ್ಲಿ 21 ನೇ ಶತಮಾನದಲ್ಲಿ ಬೌದ್ಧಿಕ ಆಸ್ತಿ ಹಕ್ಕುಗಳು : ಸವಾಲುಗಳು ಮತ್ತು ಅವಕಾಶಗಳು ವಿಷಯ ಕುರಿತು ನಡೆದ ಒಂದು ದಿನದ ರಾಜ್ಯಮಟ್ಟದ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.ನೀರಿನ ಮಿತ ಹಾಗೂ ಜಲ ಸಂರಕ್ಷಣೆ ಕುರಿತು ಮಾತನಾಡಿದ ಅವರು ಪೇಟೆಂಟ್ ಕುರಿತಾಗಿ ಇರುವ ಸಮಸ್ಯೆಗಳ ಬಗ್ಗೆ ತಿಳಿಸಿ, ಬಾಸುಮತಿ ಅಕ್ಕಿ, ಅರಿಶಿನಗಳ ಪೇಟೆಂಟ್ ನ್ನು ಭಾರತ ಉಳಿಸಿಕೊಂಡಿಸಿದ್ದರ ಹೇಳಿದರು.ಕಾಲೇಜಿನ ಫಲಿತಾಂಶ ಉತ್ತಮವಾಗಿದ್ದು ಇದರಿಂದ ತಮಗೆ ಸಂತೋಷವಾಗಿದೆ. ಸದಾ ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ಮತ್ತು ಕಾಲೇಜಿಗೆ ಹೊಸ ಕಟ್ಟಡಗಳನ್ನು ಮಂಜೂರು ಮಾಡಿಸುವ ಭರವಸೆ ನೀಡಿದರು.
ವಿದ್ಯಾರ್ಥಿಗಳು ಹಾಗೂ ವಿವಿಧ ಕಾಲೇಜುಗಳ ಉಪನ್ಯಾಸಕರು ಪ್ರಬಂಧಗಳನ್ನು ಮಂಡಿಸಿದರು. ಕುಮಾರಿ ಹರ್ಷಿತಾ , ಡಾ.ಶಿವರುದ್ರಪ್ಪ, ದತ್ತಾತ್ರೇಯ. ಐಕ್ಯೂಎ ಸಿ ಸಂಚಾಲಕರಾದ ಪ್ರೊಫೆಸರ್ ಕಿರಣ್ , ಕಾಲೇಜಿನ ಎಲ್ಲಾ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಭಾಗವಹಿಸಿದ್ದರು.28ಕೆಟಿಆರ್.ಕೆ.2ಃ
ತರೀಕೆರೆಯಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವಿಚಾರ ಸಂಕಿರಣವನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ದ ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲ ಡಾ.ಮಂಜುನಾಥ್ ಇದ್ದರು.